![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಪ್ರಸಾದ್ ಗೆಲುವಿನ ಅಂತರ 20 ಸಾವಿರಕ್ಕಿಂತ ಕಡಿಮೆಯಾದ್ರೆ ನಿವೃತ್ತಿ
Team Udayavani, Apr 8, 2017, 12:41 PM IST
![mys5.jpg](https://www.udayavani.com/wp-content/uploads/2017/04/8/mys5-594x465.jpg)
ನಂಜನಗೂಡು: ನಂಜನಗೂಡು ಉಪಚುನಾವಣೆಯಲ್ಲಿ ವಿ.ಶ್ರೀನಿವಾಸಪ್ರಸಾದ್ ಗೆಲುವು ನಿಶ್ಚಿತವಾಗಿದ್ದು, ಅವರ ಗೆಲುವಿನ ಅಂತರ 20 ಸಾವಿರಕ್ಕೆ ಕಡಿಮೆಯಾದಲ್ಲಿ ತಾವು ಇನ್ನು ಮುಂದೆ ಯಾವುದೇ ಉಪಚುನಾವಣೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಬಿಜೆಪಿ ನಾಯಕ, ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ವಿ.ಸೋಮಣ್ಣ ಸವಾಲು ಹಾಕಿದರು.
ಬಹಿರಂಗ ಪ್ರಚಾರದ ಅಂತಿಮ ದಿನವಾದ ಶುಕ್ರವಾರ ಪಟ್ಟಣದ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಇಲ್ಲಿನ ಜನತೆಯ ಪ್ರೀತಿ ವಿಶ್ವಾಸಕ್ಕೆ ಮಾರು ಹೋಗಿರುವ ತಾವಿಬ್ಬರೂ ಇದನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ ಪಡಿಸಲು ಪಣ ತೊಟ್ಟಿದ್ದೇವೆ ಎಂದ ಸೋಮಣ್ಣ, ಶಾಂತಿ ನೆಮ್ಮದಿಯನ್ನು ಕಾಪಾಡಿಕೊಂಡು ಚುನಾವಣಾ ಜವಾಬ್ದಾರಿಯನ್ನು ಮುಗಿಸಿ ತೆರಳುತ್ತಿರುವುದಾಗಿ ತಿಳಿಸಿದರು.
25 ದಿನಗಳಲ್ಲಿ ತಾವು 2.75 ಕೆ.ಜಿ. ತೂಕ ಹೆಚ್ಚಿಸಿಕೊಂಡಿದ್ದಕ್ಕೆ ಈ ಕ್ಷೇತ್ರದ ಆತಿಥ್ಯವೇ ಕಾರಣ ಎಂದು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಹಾಗೂ ಶ್ರೀನಿವಾಸಪ್ರಸಾದ್ ಅವರ ಜೋಡಿಯನ್ನು ಇಲ್ಲಿನ ಮತದಾರರು ಬೆಂಬಲಿಸಿದ್ದು, ಕ್ಷೇತ್ರದಲ್ಲಿ ಕಮಲದ ಅರಳುವಿಕೆ ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ದಿಗ್ವಿಜಯ: ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪರಿಶ್ರಮದಿಂದಾಗಿ ನಂಜನಗೂಡಿನಲ್ಲಿ ಬಿಜೆಪಿ ದಿಗ್ವಿಜಯ ಸಾಸಲಿದ್ದು, ಈ ವಿಜಯವನ್ನು ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ$ಡಾ|ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಮರ್ಪಿಸುವುದಾಗಿ ತಿಳಿಸಿದರು.
ಉಪಚುನಾವಣೆಯಲ್ಲಿ ಜಾತಿ ಜಾತಿಗಳಲ್ಲಿ ವಿಷಬೀಜ ಬಿತ್ತಿ ಕಲಹ ಉಂಟು ಮಾಡುವ ಕಾಂಗ್ರೆಸ್ ಪಕ್ಷದ ಪ್ರಯತ್ನವನ್ನು ಇಲ್ಲಿನ ಜನತೆ ವಿಫಲಗೊಳಿಸಿದ್ದಾರೆ. ಸಾಮಾನ್ಯ ಜನರಲ್ಲಿ ಉಂಟಾಗಿದ್ದ ಸಂಶಯವನ್ನು ನಿವಾರಿಸುವಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಹಾಗೂ ನಮ್ಮ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಯಶಸ್ವಿಯಾಗಿದ್ದಾರೆ ಎಂದರು.
ಅಕಾರಿಗಳು ಆಡಳಿತ ಪಕ್ಷದ ಪರ ಶಾಮೀಲಾಗಿದ್ದಾರೆ. ಸಚಿವರು ಹಣ ಹಂಚುತ್ತಿರುವ ಕುರಿತು ಚುನಾವಣಾಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವರಾದ ಮಹದೇವಪ್ಪ, ಜಾರಕಿಹೊಳಿ, ಇಂಧನಬಾಬು, ಸಂಸದ ಧ್ರುವನಾರಾಯಣ್ ನೇರವಾಗಿ ಹಣ ಹಂಚಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ಮನೆಯಿಂದಲೇ ಹಣ ವಿಲೇವಾರಿ ಮಾಡಲಾಗುತ್ತಿದೆ. ಏಕಲವ್ಯ ತಾಂತ್ರಿಕ ವಿದ್ಯಾಲಯದ ಬಸ್ನಲ್ಲಿ ಜನರನ್ನು ಕರೆತಂದು ಮೈಸೂರಿನ ಮುಖ್ಯಮಂತ್ರಿಗಳ ಮನೆಯಿಂದಲೇ ಹಣ ವಿತರಣೆ ಮಾಡಲಾಗಿದೆ ಎಂದು ದೂರಿದರು.
ಸೋಲಿನ ಹತಾಶೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಇಲ್ಲಿನ ಜನರು ಪ್ರಸಾದ್ ಅವರನ್ನು ಗೆಲ್ಲಿಸಿ ಪಕ್ಷದ ರಾಜಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಅವರಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವದ ಉಡುಗೊರೆಯನ್ನು ನೀಡಲಿದ್ದಾರೆ. ಬಿಜೆಪಿ ಗೆಲುವಿನ ಅಂತರ 25 ಸಾವಿರ ದಾಟಲಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![g t devegowda](https://www.udayavani.com/wp-content/uploads/2024/07/gt-deve-150x83.jpg)
Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ
![3-hunsur](https://www.udayavani.com/wp-content/uploads/2024/07/3-hunsur-150x90.jpg)
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.