ಉಪ ಚುನಾವಣೆ: ಅಖಾಡದಲ್ಲಿ ಮುಗಿಲು ಮುಟ್ಟಿದ ಅಬ್ಬರ 


Team Udayavani, Apr 1, 2017, 12:09 PM IST

30-njd(01)—-photo-1-BJP–.jpg

ಮೈಸೂರು: ನಂಜನಗೂಡು ಉಪ ಚುನಾವಣೆಯ ಪ್ರಚಾರದ  ಕಾವು ಏರತೊಡಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು.

ಈಗಾಗಲೇ ಮೈಸೂರಿನಲ್ಲಿ ಠಿಕಾಣಿ ಹೂಡಿರುವ ಸಿದ್ದರಾಮಯ್ಯ, ಶುಕ್ರವಾರ ಬೆಳಗ್ಗೆ ನಂಜನಗೂಡಿನ ಎಂ.ಜಿ.ರಸ್ತೆಯಲ್ಲಿ ತೆರೆಯಲಾಗಿರುವ ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಚೇರಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಅಲ್ಲಿಂದ ಗೋಳೂರು ಗ್ರಾಮಕ್ಕೆ ತೆರಳಿ, ಗ್ರಾಮದೇವತೆಗೆ ಪೂಜೆ ಸಲ್ಲಿಸಿ, ಮತಪ್ರಚಾರ ನಡೆಸಿದರು. ಬಳಿಕ, ಮಹದೇವನಗರ, ವೀರೇದೇವನಪುರದಲ್ಲಿ ಮತಯಾಚನೆ ನಡೆಸಿ, ಚಿನ್ನದಗುಡಿ ಹುಂಡಿಗೆ ಬಂದಾಗ ಹಿಂದಿನಿಂದ ಯಡಿಯೂರಪ್ಪ, ಶ್ರೀನಿವಾಸಪ್ರಸಾದ್‌ ಆಗಮಿಸಿದರು. ಸಿಎಂ ಜತೆಗೆ ನೂರಾರು ವಾಹನಗಳು ಬಂದಿದ್ದರಿಂದ ವಾಹನ ದಟ್ಟಣೆ ಉಂಟಾಯಿತು. ಹೀಗಾಗಿ, ಸಿದ್ದರಾಮಯ್ಯ ಅಲ್ಲಿಂದ ತೆರಳಿದ ಬಳಿಕ, ಯಡಿಯೂರಪ್ಪ ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಅಲ್ಲಿಂದ ಬದನವಾಳು ಗ್ರಾಮಕ್ಕೆ ಬಂದಾಗ ಹೆಡತಲೆ ಗೇಟ್‌ ಬಳಿ ಬಿಜೆಪಿ ಬಾವುಟ ಹಿಡಿದು ನಿಂತಿದ್ದ ಹತ್ತಾರು ಯುವಕರು, ದಲಿತ ವಿರೋಧಿ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಬಳಿಕ, ಸಿದ್ದು ಅವರು ದೊಡ್ಡ ಕವಲಂದೆಗೆ ತೆರಳಿ, ಅಭ್ಯರ್ಥಿ ಪರ ಮತಯಾಚಿಸಿದರು.

ಯಾರಿಗೂ ಬೆಂಬಲ ನೀಡಲ್ಲ
ಚಿತ್ರದುರ್ಗ:
ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವ ಅಭ್ಯರ್ಥಿಗೂ ಬೆಂಬಲ ನೀಡದೆ ತಟಸ್ಥವಾಗಿರಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಒಂದು ವರ್ಷದ ಅವಧಿಧಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸ ಬಾರದು ಎಂಬ ಉದ್ದೇಶ ಒಂದು ಕಡೆಯಾದರೆ, ಪಕ್ಷ ಆರ್ಥಿಕವಾಗಿ ಅಷ್ಟೊಂದು ಶಕ್ತವಾಗಿಲ್ಲ. ಅಲ್ಲದೆ ಕಚೇರಿ ನಿರ್ಮಾಣ ಸೇರಿದಂತೆ ಮತ್ತಿತರ ಕಾರಣಗಳು ಇದ್ದುದರಿಂದ ಉಪಚುನಾವಣೆಯಿಂದ ದೂರ ಉಳಿಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಕ್ತಿಕೇಂದ್ರ ಭಣಭಣ
ಬೆಂಗಳೂರು:
ಉಪ ಚುನಾವಣೆ ಪ್ರಚಾರದ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಇಡೀ ಸಚಿವ ಸಂಪುಟ ಇಳಿದಿರುವುದರಿಂದ ಇತ್ತ ಶಕ್ತಿಕೇಂದ್ರ ವಿಧಾನಸೌಧ ಬಿಕೋ ಎನ್ನುತ್ತಿದೆ. ಅಧಿವೇಶನ ಅಂತ್ಯಗೊಂಡು, ಯುಗಾದಿ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಹಿತ ರಾಜ್ಯದ ಎಲ್ಲ ಸಚಿವರು ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಲಾಖಾ ಕಾರ್ಯಗಳನ್ನು ಕಾರ್ಯದರ್ಶಿ ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಿ ಉಪ ಚುನಾವಣೆಯತ್ತ ಮುಖ ಮಾಡಿರುವ ಸಚಿವರು, ಏಪ್ರಿಲ್‌ 7ರವರೆಗೂ ರಾಜಧಾನಿಯತ್ತ ಬರುವುದು ಅನುಮಾನ ಎಂದೇ ಹೇಳಲಾಗುತ್ತಿದೆ.

ಜೆಡಿಎಸ್‌ ಬಂಡಾಯ ಶಾಸಕರಿಂದ ಪ್ರಚಾರ
ಬೆಂಗಳೂರು
: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ಕಾಂಗ್ರೆಸ್‌ ಪರ ಪ್ರಚಾರ ಮಾಡಲಿದ್ದಾರೆ. ಜಮೀರ್‌ ಅಹಮದ್‌ ಹಾಗೂ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಏಪ್ರಿಲ್‌ 4 ರಿಂದ 7 ರವರೆಗೆ ಎರಡೂ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿರುವ ಏಳು ಶಾಸಕರು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಪ್ರಮುಖವಾಗಿ ಎರಡೂ ಕ್ಷೇತ್ರಗಳಲ್ಲಿರುವ ಮುಸ್ಲಿಂ ಸಮುದಾಯದ ಮತಗಳನ್ನು ಸೆಳೆಯಲು ಜಮೀರ್‌ ಅಹಮದ್‌ ಅವರು ಪ್ರಚಾರ ನಡೆಸಲಿದ್ದಾರೆ.
 

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.