ಮಾಸ್ಕ್ ದುಬಾರಿ ಮಾರಾಟ: ಮೆಡಿಕಲ್‌ ಸ್ಟೋರ್‌ಗಳ ಪರಿಶೀಲನೆ


Team Udayavani, Mar 12, 2020, 3:00 AM IST

mask-dubari

ಮೈಸೂರು: ಕೊರೊನಾ ಭೀತಿಯನ್ನೇ ಬಂಡವಾಳವಾಗಿಸಿಕೊಂಡು ಮಾಸ್ಕ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಬುಧವಾರ ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಹಾಗೂ ಆರೋಗ್ಯಾಧಿಕಾರಿಗಳು ಔಷಧ ಅಂಗಡಿಗಳಿಗೆ ತೆರಳಿ ಪರಿಶೀಲಿಸಿದರು.

ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಮೆಡಿಕಲ್‌ ಶಾಪ್‌ಗ್ಳಿಗೆ ಬುಧವಾರ ಮಧ್ಯಾಹ್ನ ಭೇಟಿ ನೀಡಿದ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಮಾಸ್ಕ್ಗಳ ದಾಸ್ತಾನು, ಬೆಲೆಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ, ಕೆಲವು ಮೆಡಿಕಲ್‌ ಶಾಪ್‌ಗ್ಳಲ್ಲಿ ಹೆಚ್ಚಿನ ಬೆಲೆಗೆ ಮಾಸ್ಕ್ ಮಾರುತ್ತಿರುವುದು ಕಂಡು ಬಂದಿತು. ಇದಕ್ಕೆ ಆರೋಗ್ಯಾಧಿಕಾರಿಗಳು ಆಕ್ಷೇಪಿಸಿದರು. ಆದರೆ, ಮೆಡಿಕಲ್‌ ಶಾಪ್‌ ಮಾಲೀಕರು ಏಜೆನ್ಸಿ ದರ ನಿಗದಿ ಮಾಡಿ, ಸರಬರಾಜು ಮಾಡುತ್ತಿದೆ. ಅದರಂತೆ ಮಾರಾಟ ಮಾಡುತ್ತಿರುವುದಾಗಿ ಸಮಜಾಯಿಷಿ ನೀಡಿದರು. ಅಲ್ಲದೆ ಏಜೆನ್ಸಿ ನೀಡಿರುವ ಇನ್‌ವಾಯ್ಸ ಅನ್ನು ಪಾಲಿಕೆ ಅಧಿಕಾರಿಗಳಿಗೆ ನೀಡಿದರು.

ಅಧಿಕ ಬೆಲೆ ನಿಯಂತ್ರಣ: ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮಾತನಾಡಿ, 3 ರಿಂದ 6 ರೂ. ಬೆಲೆ ಇರುವ ಮಾಸ್ಕ್ಗಳನ್ನು 15-20 ರೂ.ಗೆ ಮಾರಲಾಗುತ್ತಿದೆ ಎಂದು ತಿಳಿದು ಬಂದಿದೆ. ಪಾಲಿಕೆಯ ಎಲ್ಲಾ ವಲಯಗಳ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿಗೆ ತಮ್ಮ ವ್ಯಾಪ್ತಿಯಲ್ಲಿ ಮಾಸ್ಕ್ ಬೆಲೆ ಬಗ್ಗೆ ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದರು.

ಆತಂಕ ಬೇಡ: ಬೇಡಿಕೆ ಅನುಗುಣವಾಗಿ ಮಾಸ್ಕ್ಗಳು ಲಭ್ಯವಿದೆ. ಆದರೂ ಇನ್ನಷ್ಟು ಮಾಸ್ಕ್ ತರಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಮಾಸ್ಕ್ ಹಾಕಿಕೊಂಡು ಓಡಾಡುವ ಅಗತ್ಯವಿಲ್ಲ. ಯಾರಲ್ಲಿ ಸೋಂಕು ಕಂಡು ಬಂದಿದೆಯೋ ಅವರು ಮಾತ್ರ ಮಾಸ್ಕ ಬಳಸಬೇಕು. ಅನಗತ್ಯವಾಗಿ ಮಾಸ್ಕ್ ಹಾಕಿಕೊಳ್ಳುವ ಅಗತ್ಯವಿಲ್ಲ. ನೆಗಡಿ, ಕೆಮ್ಮು, ಜ್ವರ ಇದ್ದವರು ಮಾತ್ರ ಮಾಸ್ಕ್ ಬಳಸಬೇಕು. ಇದರಿಂದ ಸೋಂಕು ಹರಡಂತೆ ತಡೆಗಟ್ಟಬಹುದು.

ಕೆಮ್ಮು, ಜ್ವರ, ನೆಗಡಿಯಿಂದ ಬಳಲುತ್ತಿರುವವರು ಬಸ್‌, ರೈಲ್ವೆ ನಿಲ್ದಾಣ, ಜಾತ್ರೆ, ದೇವಾಲಯ ಸೇರಿದಂತೆ ಜನನಿಬಿಡ ಸ್ಥಳಕ್ಕೆ ಹೋಗುವುದನ್ನು ತಾವೇ ನಿಯಂತ್ರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜೆ.ಗೋಪಿ ಮಾತನಾಡಿ, ನಿಗದಿ ಬೆಲೆಗೆ ಮಾಸ್ಕ್ ಕೊಡಿಸುವುದೇ ನಮ್ಮ ಉದ್ದೇಶ. ಕೊರೊನಾದಿಂದ ಭಯಬೀತರಾಗಿರುವ ಜನರಿಂದ ಹೆಚ್ಚಿನ ವಸೂಲಿ ಮಾಡುವುದಕ್ಕೆ ಬಿಡುವುದಿಲ್ಲ. ಇದರಿಂದ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು.

ಕೆ.ಆರ್‌.ಆಸ್ಪತ್ರೆಗೂ ಬೇಟಿ: ಮೆಡಿಕಲ್‌ ಶಾಪ್‌ಗ್ಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಕೆ.ಆರ್‌.ಆಸ್ಪತ್ರೆ ತೆರಳಿ ಪರಿಶೀಲಿಸಿದರು. ಅಲ್ಲಿನ ಮೆಡಿಕಲ್‌ ಶಾಪ್‌ನಲ್ಲಿ ಮಾಸ್ಕ್ಗಳ ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಯ ಅಧೀಕ್ಷಕ ಡಾ.ಎನ್‌.ನಂಜುಂಡಸ್ವಾಮಿ ಅವರಿಂದ ಕೊರೊನಾ ವೈರಸ್‌ ಪೀಡಿತ ರೋಗಿಗಳು ಬಂದರೆ ಯಾವ ರೀತಿ ಚಿಕಿತ್ಸೆ ನೀಡುತ್ತೀರಿ, ಅದಕ್ಕಾಗಿ ಆಸ್ಪತ್ರೆಯಲ್ಲಿ ಏನು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಪಡೆದರು. ಈ ವೇಳೆಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾದ ಎಂ.ಎಸ್‌.ಶೋಭಾ, ಶಾರದಮ್ಮ, ಉಷಾ ನಾರಾಯಣ್‌, ಭಾಗ್ಯ ಮಾದೇಶ್‌, ಅಯಾಸ್‌ ಪಾಷ ಇತರರಿದ್ದರು.

ಮಾಸ್ಕ್ ದರ ಪಟ್ಟಿಯ ಬೋರ್ಡ್‌ ಹಾಕಿ: ಮೈಸೂರಿನಲ್ಲಿರುವ ಮೆಡಿಕಲ್‌ ಶಾಪ್‌ಗ್ಳಲ್ಲಿರುವ ಮಾಸ್ಕ್ಗಳ ದಾಸ್ತಾನು, ಅವುಗಳ ಬೆಲೆಯನ್ನು ಸಾರ್ವಜನಿಕರಿಗೆ ಕಾಣುವಂತೆ ಬೋರ್ಡ್‌ ಹಾಕುವಂತೆ ಸೂಚನೆ ನೀಡುತ್ತೇವೆ. ಎಲ್ಲಾ ಶಾಪ್‌ಗ್ಳಲ್ಲೂ ಕಡ್ಡಾಯವಾಗಿ ನಿತ್ಯ ಎಷ್ಟು ದಾಸ್ತಾನು ಇದೆ ಎಂಬ ಮಾಹಿತಿ ಹಾಕಬೇಕು. ಅಲ್ಲದೆ ಸರ್ಜಿಕಲ್‌ ಮಾಸ್ಕ್ ದರ, ಎನ್‌-90, ಎನ್‌-95 ಮಾಸ್ಕ್ಗಳ ಎಂಆರ್‌ಪಿ ದರವನ್ನೂ ಪ್ರಕಟಿಸಬೇಕು.

ಮಾರಾಟ ಹಾಗೂ ಎಂಆರ್‌ಪಿ ದರ ಸಾರ್ವಜನಿಕರಿಗೆ ಗೊತ್ತಾಗಬೇಕು. ಇದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಆರೋಗ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮೆಡಿಕಲ್‌ ಶಾಪ್‌ ಮಾಲೀಕರ ಸಭೆ ನಡೆಸಿ, ಸೂಚನೆ ನೀಡಲಾಗುತ್ತದೆ. ಅಲ್ಲದೆ ಮಾಸ್ಕ್ಗಳ ಬೆಲೆ ಹೆಚ್ಚಿಸದಂತೆ ಏಜೆನ್ಸಿ ಹಾಗೂ ಕಂಪನಿಯೊಂದಿಗೆ ಮಾತನಾಡುತ್ತೇವೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ತಿಳಿಸಿದರು.

ಕೊರೊನಾ ಪೀಡಿತರಿಗೆ ಪ್ರತ್ಯೇಕ ವಾರ್ಡ್‌ ಸಿದ್ಧ: ಕೊರೊನಾ ವೈರಸ್‌ ಪೀಡಿತರಿಗಾಗಿ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಲಾಗಿದೆ. ಸೋಂಕು ಪೀಡಿತರಿಗೆ ಅಗತ್ಯ ಚಿಕಿತ್ಸೆ ನೀಡುವುದಕ್ಕೂ ಆಸ್ಪತ್ರೆ ಸಿಬ್ಬಂದಿ ಸಜ್ಜಾಗಿದ್ದಾರೆ. ಸಿಬ್ಬಂದಿಗೆ ಮಾಸ್ಕ್ಗಳ ಕೊರತೆ ಎದುರಾಗಬಹುದು. ಈ ನಿಟ್ಟಿನಲ್ಲಿ ಪಾಲಿಕೆ ಸಹಕಾರ ನಿರೀಕ್ಷಿಸುತ್ತಿದ್ದೇವೆ. ಅಗತ್ಯಕ್ಕನುಗುಣವಾಗಿ ಮಾಸ್ಕ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೆ.ಆರ್‌.ಆಸ್ಪತ್ರೆ ಅಧೀಕ್ಷಕ ಡಾ.ಎನ್‌.ನಂಜುಂಡಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.