ಸಾಮೂಹಿಕ ಅತ್ಯಾಚಾರ
Team Udayavani, May 10, 2019, 6:42 AM IST
ಎಚ್.ಡಿ.ಕೋಟೆ ಮೂಲದ 28 ವರ್ಷದ ಯುವಕ ಮತ್ತು ಮೈಸೂರಿನ 23 ವರ್ಷ ವಯಸ್ಸಿನ ಯುವತಿ ನಗರದ ಖಾಸಗಿ ಹೋಟೆಲ್ನಲ್ಲಿ ನೌಕರರಾಗಿದ್ದಾರೆ. ಕಳೆದ 3-4 ತಿಂಗಳಿನಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ನಗರದ ಬಡಾವಣೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಸುತ್ತಾಡಲು ತೆರಳಿದ್ದು, ಲಿಂಗಾಂಬುದಿ ಪಾಳ್ಯ ಬಳಿಯ ರಿಂಗ್ ರಸ್ತೆಗೆ ಹೊಂದಿಕೊಂಡಂತಿರುವ ಖಾಸಗಿ ಬಡಾವಣೆಯ ಬಳಿ ಬೈಕ್ ನಿಲ್ಲಿಸಿ, ಕುಳಿತು ಕೊಂಡಿದ್ದರು. ರಾತ್ರಿ 10 ಗಂಟೆ ಸಮಯದಲ್ಲಿ ಅದೇ ಮಾರ್ಗದಲ್ಲಿ ಕಾರು ಮತ್ತು ಬೈಕ್ನಲ್ಲಿ ತೆರಳುತ್ತಿದ್ದ ಮೂರ್ನಾಲ್ಕು ಮಂದಿ ಯುವಕರು, ಸಮೀಪ ಬಂದು ಯುವತಿಯ ಜತೆ ಅನುಚಿತವಾಗಿ ವರ್ತಿಸಿದರು.
ಯುವತಿಯ ಪ್ರಿಯಕರ ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಯುವಕನ ಕಾಲಿನ ಮೇಲೆ ಕಲ್ಲು ಎತ್ತಿ ಹಾಕಿ, ಹಣೆಯ ಭಾಗಕ್ಕೆ ಕಲ್ಲಿನಿಂದ ಹೊಡೆದು, ಗಾಯಗೊಳಿಸಿದರು. ನಂತರ ಗುಂಪಿನಲ್ಲಿದ್ದ ಇಬ್ಬರು ಯುವಕರು, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆಕೆ ಕೂಗಿಕೊಂಡಾಗ, ಅದೇ ಮಾರ್ಗದಲ್ಲಿ ವಾಹನಗಳು ಬರುವುದನ್ನು ಕಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಿತ್ರಾಣಗೊಂಡಿದ್ದ ಯುವತಿ, ಸುಮಾರು ಅರ್ಧ ಕಿ.ಮೀ.ದೂರದಲ್ಲಿರುವ ರಿಂಗ್ ರಸ್ತೆವರೆಗೂ ಓಡಿ ಬಂದು, ದಾರಿಹೋಕರ ನೆರವಿನಿಂದ ಪೊಲೀಸರಿಗೆ ವಿಷಯ ತಿಳಿಸಿದಳು. ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಿಯಕರ ಹಾಗೂ ಯುವತಿಯನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ