ಪಾಲಿಕೆ ಅಧಿಕಾರ ಹಿಡಿದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ


Team Udayavani, Jan 19, 2020, 3:00 AM IST

palike

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಜೆಡಿಎಸ್‌ನ ತಸ್ಲಿಮಾ, ಉಪ ಮೇಯರ್‌ ಆಗಿ ಕಾಂಗ್ರೆಸ್‌ನ ಶ್ರೀಧರ್‌ ಸಿ. ಆಯ್ಕೆಯಾದರು. ಮೈಸೂರು ಮಹಾ ನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ವಿಶೇಷ ಸಭೆಯಲ್ಲಿ ನಗರದ 33ನೇ ಮೇಯರ್‌ ಆಗಿ 26ನೇ ವಾರ್ಡ್‌ನ ಜೆಡಿಎಸ್‌ ಸದಸ್ಯೆ ತಸ್ಲಿಮಾ ಆಯ್ಕೆಯಾದರು.

ಬೆಳಗ್ಗೆ 11.30ಕ್ಕೆ ಚುನಾವಣಾಧಿಕಾರಿಯಾದ ಮೈಸೂರು ಪ್ರಾದೇಶಿಕ ಆಯುಕ್ತ ವಿ.ಯಶವಂತ್‌ ಚುನಾವಣಾ ಸಭೆ ಆರಂಭಿಸಿದರು. ಮೊದಲಿಗೆ ಸದನದಲ್ಲಿ ಹಾಜರಿದ್ದ ಸದಸ್ಯರಿಂದ ಹಾಜರಾತಿಗೆ ಸಹಿ ಪಡೆದುಕೊಳ್ಳಲಾಯಿತು. ನಂತರ ಮೇಯರ್‌ ಸ್ಥಾನದ ಚುನಾವಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಯಿತು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ತಸ್ಲಿಮಾ ಎರಡು ಸೆಟ್‌ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ 65ನೇ ವಾರ್ಡ್‌ ಸದಸ್ಯರ ಗೀತಾ ಯೋಗಾನಂದ ನಾಮಪತ್ರ ಸಲ್ಲಿಸಿದರು.

47 ಮತ ಪಡೆದ ತಸ್ಲಿಮಾ ಮೇಯರ್‌: ನಾಮಪತ್ರ ವಾಪಸ್‌ ಪಡೆಯಲು ನಿಗದಿಪಡಿಸಿದ್ದ ಐದು ನಿಮಿಷಗಳ ಗಡುವಿನಲ್ಲಿ ಯಾರೂ ಹಿಂಪಡೆಯದ ಕಾರಣ ಕೈಎತ್ತುವ ಮೂಲಕ ಮತದಾನ ಪ್ರಕ್ರಿಯೆ ಆರಂಭಿಸಲಾಯಿತು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ತಸ್ಲಿಮಾ ಪರ 47 ಮತ, ಬಿಜೆಪಿ ಅಭ್ಯರ್ಥಿ ಗೀತಾ ಯೋಗಾನಂದ ಅವರಿಗೆ 23 ಮತ ಲಭಿಸಿತು.

47 ಮತ ಪಡೆದ ತಸ್ಲಿಮಾ ಮೇಯರ್‌ಆಗಿ ಆಯ್ಕೆಯಾಗಿದ್ದಾರೆಂದು ಘೋಷಿಸಲಾಯಿತು. ಬಳಿಕ ಉಪ ಮೇಯರ್‌ ಸ್ಥಾನದ ಚುನಾವಣಾ ಪ್ರಕ್ರಿಯೆ ಆರಂಭಿಸಲಾಯಿತು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯ ರ್ಥಿಯಾಗಿ ಸಿ.ಶ್ರೀಧರ್‌, ಬಿಜೆಪಿ ಅಭ್ಯರ್ಥಿಯಾಗಿ ಶಾಂತಮ್ಮ ನಾಮಪತ್ರ ಸಲ್ಲಿಸಿದರು.

ಸಿ.ಶ್ರೀಧರ್‌ ಉಪಮೇಯರ್‌ ಆಗಿ ಆಯ್ಕೆ: ನಾಮಪತ್ರ ವಾಪಸ್ಸಿಗೆ ನಿಗದಿಪಡಿಸಿದ್ದ ಐದು ನಿಮಿಷದ ಗಡುವಿನಲ್ಲಿ ಯಾರೂ ಉಮೇದುವಾರಿಕೆ ಹಿಂಪಡೆಯದ ಕಾರಣ ಕೈಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಮೈತ್ರಿಕೂಟದ ಅಭ್ಯರ್ಥಿ ಕಾಂಗ್ರೆಸ್‌ನ ಸಿ.ಶ್ರೀಧರ್‌ಗೆ 47 ಮತಗಳಿಸಿ ಉಪಮೇಯರ್‌ ಆಗಿ ಆಯ್ಕೆಯಾದರೆ, ಬಿಜೆಪಿಯ ಶಾಂತಮ್ಮ ಅವರಿಗೆ 23 ಸದಸ್ಯರು ಕೈಎತ್ತಿ ಬೆಂಬಲ ಸೂಚಿಸಿದರು.

ಮೇಯರ್‌ ಚುನಾವಣೆಯಲ್ಲಿ ಮತದಾನದ ಹಕ್ಕುಹೊಂದಿದ್ದ ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌.ಎ.ರಾಮದಾಸ್‌ ಗೈರು ಹಾಜರಾಗಿದ್ದರೆ, ಪಕ್ಷೇತರವಾಗಿ ಗೆದ್ದಿರುವ ಮಾ.ವಿ.ರಾಮಪ್ರಸಾದ್‌ ಬಿಜೆಪಿ ಅಭ್ಯರ್ಥಿ ಪರ ಕೈಎತ್ತಿ ಮತಚಲಾಯಿಸಿದರು. ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ನಂತರ ವಿಶ್ರಾಂತಿಯಲ್ಲಿರುವ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್ ಗೈರಾಗಿದ್ದರು.

ಜೆಡಿಎಸ್‌ನ ಶಾಸಕರಾದ ಜಿ.ಟಿ.ದೇವೇಗೌಡ, ಸಂದೇಶ್‌ನಾಗರಾಜ್‌, ಮರಿತಿಬ್ಬೇಗೌಡ,ಕೆ.ಟಿ.ಶ್ರೀಕಂಠೇಗೌಡ ಹಾಜರಾಗಿ ಮತ ಚಲಾಯಿಸಿದರು.‌ ತೆರಿಗೆ ನಿರ್ಧರಣೆ,ಹಣಕಾಸು ಮತ್ತು ಅಫೀಲು ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ,ಪಟ್ಟಣ ಯೋಜನಾ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಹಾಗೂ ಲೆಕ್ಕಪತ್ರ ಸ್ಥಾಯಿ ಸಮಿತಿಗೆ ತಲಾ ಏಳು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತೆರಿಗೆ ನಿರ್ಧರಣೆ,ಹಣಕಾಸು ಮತ್ತು ಅಫೀಲು ಸ್ಥಾಯಿ ಸಮಿತಿ ಸದಸ್ಯರಾಗಿ ನಿರ್ಮಲಾ ಹರೀಶ್‌,ಸವಿತಾ, ಸೌಮ್ಯ, ಎಂ.ಲಕ್ಷ್ಮೀ, ಅಕ್ಮಲ್‌ ಪಾಷ, ಸಮೀಉಲ್ಲಾ, ಜಿ.ಎಸ್‌.ಸತ್ಯರಾಜ್‌. ಸಾರ್ವಜನಿಕ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಸದಸ್ಯರಾಗಿ ಎಂ.ಎಸ್‌. ಶೋಭಾ, ಜೆ.ಗೋಪಿ, ಅಯಾಜ್‌ ಪಾಷ, ಭಾಗ್ಯಮಹದೇಶ್‌, ಉಷಾ, ಶಾರದಮ್ಮ, ಭುವನೇಶ್ವರಿ. ಪಟ್ಟಣ ಯೋಜನಾ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಸದಸ್ಯರಾಗಿ ಸೈಯದ್‌ ಅಸ್ರತುಲ್ಲಾ, ಶ್ರೀನಿವಾಸ, ರುಕ್ಮಿಣಿ ಮಾದೇಗೌಡ, ರಮೇಶ್‌, ಹಾಜೀರಾ ಸೀಮಾ, ಸುನಂದ ಪಾಲನೇತ್ರ, ಪ್ರಮೀಳಾ ಭರತ್‌.

ಲೆಕ್ಕಪತ್ರ ಸ್ಥಾಯಿ ಸಮಿತಿ ಸದಸ್ಯರಾಗಿ ಅಶ್ವಿ‌ನಿ ಅನಂತು, ಬೇಗಂ ಪಲ್ಲವಿ, ಎಂ.ಛಾಯಾದೇವಿ, ವೇದಾವತಿ, ಅಯೂಬ್‌ಖಾನ್‌, ಆರಿಫ್ ಹುಸೇನ್‌, ಪ್ರದೀಪ್‌ ಚಂದ್ರ ಅವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ಗಮಿತ ಮೇಯರ್‌ ಪುಷ್ಪಲತಾ ಜಗನ್ನಾಥ್‌ ನೂತನ ಮೇಯರ್‌ ತಸ್ಲಿಮಾ ಅವರಿಗೆ ಗೌನು ಹೊದಿಸಿ, ಪುಷ್ಪಗುತ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಆಯುಕ್ತೆ ಕೆ.ಎಂ.ಗಾಯತ್ರಿ, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ನಿರ್ಗಮಿತ ಉಪ ಮೇಯರ್‌ ಶಫೀ ಅಹಮದ್‌ ಹಾಜರಿದ್ದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಚುನಾವಣೆ: ಮೈಸೂರು ಮಹಾ ನಗರಪಾಲಿಕೆಯ ಮೇಯರ್‌ ಸ್ಥಾನದ ಮೊದಲ ಅವಧಿಗೆ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌, ಜೆಡಿಎಸ್‌ನ ಶಫೀ ಅಹಮದ್‌ 2018ರ ನ.17ರಂದು ಮೇಯರ್‌-ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಇವರ ಅವಧಿಯು 2019ರ ನವೆಂಬರ್‌ 17ಕ್ಕೆ ಮುಕ್ತಾಯವಾದರೂ ಸರ್ಕಾರ ಮೇಯರ್‌-ಉಪ ಮೇಯರ್‌ ಸ್ಥಾನದ ಮೀಸಲಾತಿಯನ್ನು ಪ್ರಕಟಿಸದ ಕಾರಣ ಪುಷ್ಪಲತಾ ಜಗನ್ನಾಥ್‌ ಹಾಗೂ ಶಫೀ ಅಹಮದ್‌ ಅವರು ಅಧಿಕಾರದಲ್ಲಿ ಮುಂದುವರಿದಿದ್ದರು.

ರಾಜ್ಯ ಸರ್ಕಾರ ಇತ್ತೀಚೆಗೆ ಮೇಯರ್‌ ಸ್ಥಾನವನ್ನು ಹಿಂದುಳಿದ ವರ್ಗ(ಮಹಿಳೆ), ಉಪ ಮೇಯರ್‌ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿತ್ತು. ಹೀಗಾಗಿ ಚುನಾವಣಾಧಿಕಾರಿಗಳು ಜ.18ರಂದು ಚುನಾವಣಾ ದಿನಾಂಕ ಪ್ರಕಟಿಸಿ ಸದಸ್ಯರಿಗೆ ಸಭಾ ಸೂಚನಾ ಪತ್ರವನ್ನು ಕಳುಹಿಸಿದ್ದರು. ಅದರಂತೆ ಶನಿವಾರ ಬೆಳಗ್ಗೆ 7.30ರಿಂದ ಚುನಾವಣಾ ಪ್ರಕ್ರಿಯೆ ಆರಂಭಿಸಿ 9.30ರವರೆಗೆ ಕೌನ್ಸಿಲ್‌ ಕಾರ್ಯದರ್ಶಿಗಳ ಕೊಠಡಿಯಲ್ಲಿ ನಾಮಪತ್ರ ಸ್ವೀಕರಿಸಲಾಯಿತು. ಬೆಳಗ್ಗೆ 11.30ಕ್ಕೆ ನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಮೇಯರ್‌-ಉಪಮೇಯರ್‌ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಎರಡನೇ ಬಾರಿ ನಗರಪಾಲಿಕೆ ಸದಸ್ಯೆಯಾಗಿರುವ ನನ್ನನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿರುವುದು ತುಂಬಾ ಖುಷಿ ನೀಡಿದೆ. ಮೈಸೂರು ನಗರದ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಸ್ವತ್ಛತೆ, ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಅಭಿವೃದ್ಧಿಗೆ ಪೂರಕವಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವುಗಳ ಸಾಕಾರಕ್ಕೆ ಪಾಲಿಕೆಯ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಶ್ರಮಿಸುತ್ತೇನೆ.
-ತಸ್ಲಿಮಾ, ಮೇಯರ್‌

ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಮೈಸೂರು ನಗರವನ್ನು ಸ್ವತ್ಛ ನಗರವಾಗಿಸಲು ಶ್ರಮಿಸುತ್ತೇನೆ.
-ಶ್ರೀಧರ್‌ ಸಿ., ಉಪ ಮೇಯರ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.