ನಾಪತ್ತೆಯಾಗಿದ್ದ ಮೈಸೂರಿನ ನಾಟಿ ವೈದ್ಯ ಕೇರಳದಲ್ಲಿ ಬರ್ಬರ ಹತ್ಯೆ

ಕೊಠಡಿಯೊಳಗೆ 1 ವರ್ಷ ಕೂಡಿಹಾಕಿ ಚಿಕಿತ್ಸಾ ವಿಧಾನ ತಿಳಿಸುವಂತೆ ಚಿತ್ರಹಿಂಸೆ

Team Udayavani, May 14, 2022, 12:52 PM IST

8muder

ಮೈಸೂರು: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನಿಂದ ನಿಗೂಢವಾಗಿ ಕಣ್ಮರೆಯಾದ ಪಾರಂಪರಿಕ ವೈದ್ಯನೋರ್ವ ಕೇರಳದಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಲೆಮಾರುಗಳಿಂದ ಬಂದಿದ್ದ ವೈದ್ಯ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದ ಮೈಸೂರಿನ ಬೋಗಾದಿ ನಿವಾಸಿ ಶಾಬಾದ್‌ ಶರೀಫ್ ಕೊಲೆಯಾದವರು. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಹುಡುಕಾಟ ನಡೆದಿದೆ ಎಂದು ಹೇಳಲಾಗಿದೆ.

ಪ್ರಕರಣ ಹಿನ್ನೆಲೆ: ಮೈಸೂರಿನ ಬೋಗಾದಿ ನಿವಾಸಿಯಾದ ಶಾಬಾದ್‌ ಶರೀಫ್ ಅವರ ಪೂರ್ವಜರ ಕಾಲದಿಂದಲೂ ಪೈಲ್ಸ್ ಹಾಗೂ ಪಿಸ್ತೂಲ ಕಾಯಿಲೆಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದರು. ತಲೆತಲಾಂತರದಿಂದ ಬಂದ ವೈದ್ಯ ಪದ್ಧತಿಯನ್ನು ಶಾಬಾದ್‌ ಶರೀಫ್ ಕೂಡ ಮುಂದುವರೆಸಿಕೊಂಡು ಹೋಗಿದ್ದು, ಇವರಿಂದ ಚಿಕಿತ್ಸೆ ಪಡೆದವರು ಗುಣಮುಖರಾಗಿದ್ದರು. ಈ ಮಾಹಿತಿ ಪಡೆದ ಕೇರಳ ರಾಜ್ಯದ ಮಲ ಪುರಂ ಜಿಲ್ಲೆಯ ನೀಲಾಂ ಬುರ್‌ ನಿವಾಸಿ ಶೈಬಿನ್‌ ಅಶ್ರಫ್ ಹಾಗೂ ಇತ ರರು ಸಂಚು ರೂಪಿಸಿ, ಕೇರಳದಲ್ಲಿರುವ ತಮ್ಮ ಕಡೆಯವರಿಗೆ ಪೈಲ್ಸ್ ಚಿಕಿತ್ಸೆ ನೀಡಬೇಕಿದೆ ಎಂದು ನಂಬಿಸಿ 2019ರ ಆಗಸ್ಟ್‌ ತಿಂಗಳಲ್ಲಿ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಸ್ವಲ್ಪ ದೂರ ಹೋದ ಬಳಿಕ ಕಾರಿಗೆ ಹತ್ತಿಸಿಕೊಂಡು ಪ್ರಯಾಣಿಸಿದ್ದಾರೆ. ತದನಂತರ ಶೈಬಿನ್‌ ಅಶ್ರಫ್ ನಡೆದುಕೊಂಡ ರೀತಿಯಿಂದ ತಾನು ಮೋಸ ಹೋಗಿರುವುದಾಗಿ ಮೈಸೂರಿನ ಶಾಬಾದ್‌ ಶರೀಫ್ಗೆ ಗೊತ್ತಾಗಿದೆ. ಆದರೆ, ಅವರಿಂದ ತಪ್ಪಿಸಿ ಕೊಳ್ಳಲು ಸಾಧ್ಯವಾಗಿಲ್ಲ. ಶರೀಫ್ ತಪ್ಪಿಸಿಕೊಳ್ಳದಂತೆ ಸರಪಳಿ ಬಿಗಿದು ಸುಮಾರು ಒಂದು ವರ್ಷಗಳ ಕಾಲ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಪೈಲ್ಸ್‌ಗೆ ನೀಡುವ ಚಿಕಿತ್ಸಾ ವಿಧಾನ ಹಾಗೂ ಔಷಧಿಯ ಬಗ್ಗೆ ಮಾಹಿತಿ ಕೇಳಿ ಚಿತ್ರಹಿಂಸೆ ನೀಡಿದ್ದಾರೆ.

ದುಷ್ಕರ್ಮಿಗಳ ಕಿರುಕುಳಕ್ಕೆ ಬಗ್ಗದ ಶರೀಫ್ ಕೊನೆಯವರೆಗೂ ಔಷಧಿ ಬಗ್ಗೆ ಬಾಯಿ ಬಿಟ್ಟಿಲ್ಲ. ಇದರಿಂದ ಬೇಸತ್ತ ದುಷ್ಕರ್ಮಿಗಳು ಶರೀಫ್ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್‌ ಕವರಿನಲ್ಲಿ ಹಾಕಿ ನದಿಗೆ ಬಿಸಾಡಿದ್ದಾರೆ. ಇದಾದ ಬಳಿಕ ನೀಲಾಂಬುರ್‌ ನಿವಾಸಿ ಶೈಬಿನ್‌ ಅಶ್ರಫ್ ಮನೆಯಲ್ಲಿ ದರೋಡೆ ನಡೆದಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತಪ್ಪಿಸಿಕೊಳ್ಳಲು ಯತ್ನ : ಆ್ಯಸಿಡ್ ದಾಳಿಕೋರ ನಾಗೇಶ್ ಕಾಲಿಗೆ ಪೊಲೀಸರ ಗುಂಡು!

ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿರುವ ಹೊತ್ತಿನಲ್ಲಿ ಕೇರಳದ ಸಚಿವಾಲಯದ ಮುಂದೆ ವಿಷಯವೊಂದಕ್ಕೆ ಸಂಬಂಧಿಸಿದಂತೆ ಕೆಲವರು ಪ್ರತಿಭಟನೆ ಇಳಿದಿದ್ದಾರೆ. ಮಾತ್ರವಲ್ಲ, ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರಿಗೆ ಒಬ್ಬನ ಬಳಿ ಇದ್ದ ಪೆನ್‌ ಡ್ರೈವ್‌ ಮೇಲೆ ಕುತೂಹಲ ಮೂಡಿ, ಆ ಕುರಿತು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಮೈಸೂರು ಮೂಲದ ಶರೀಫ್ ಎಂಬ ವ್ಯಕ್ತಿಯ ಕೊಲೆ ಹಾಗೂ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ಕುರಿತು ತನಿಖೆ ತೀವ್ರಗೊಳಿಸಿದ ವೇಳೆ ಘಟನೆ ಹಿಂದೆ ಆರೇಳು ಮಂದಿ ಇರುವುದು ಕಂಡುಬಂದಿದೆ. ಘಟನೆ ಸಂಬಂಧ ನಾಲ್ವರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿರುವ ಕೇರಳಾದ ಮಲ್ಲಪುರಂ ಜಿಲ್ಲಾ ಪೊಲೀಸರು ಇದಕ್ಕಾಗಿ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ.

ಬೊಗಾದಿ ನಿವಾಸಿ ಶಾಬಾದ್‌ ಶರೀಫ್ ನಾಪತ್ತೆ ಸಂಬಂಧ ನಗರದ ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ 2019ರಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ಪೊಲೀಸರು ಎಲ್ಲಾ ಆಯಮದಲ್ಲೂ ಶೋಧ ನಡೆಸಿದ್ದರು ವ್ಯಕ್ತಿ ಪತ್ತೆಯಾಗಿರಲಿಲ್ಲ. ಈಗ ಕೇರಳದಲ್ಲಿ ಹತ್ಯೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. -ಪ್ರದೀಪ್‌ ಗುಂಟಿ, ಡಿಸಿಪಿ ಮೈಸೂರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.