ಕಾಡ್ಗಿಚ್ಚು ನಂದಿಸಲು ಶೀಘ್ರವೇ ಸೇನಾ ಹೆಲಿಕಾಪ್ಟರ್: ಸಿ.ಸಿ.ಪಾಟೀಲ್
Team Udayavani, Jan 2, 2020, 5:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮೈಸೂರು ಭಾಗದ ಅರಣ್ಯ ಪ್ರದೇಶದಲ್ಲಿ ಉಂಟಾಗುವ ಕಾಡ್ಗಿಚ್ಚನ್ನು ನಂದಿಸಲು ಶೀಘ್ರವೇ ಸೇನಾ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಮೈಸೂರು ಮೃಗಾಲಯದಲ್ಲಿ ಜೋಡಿ ಹೂಲಾಕ್ ಗಿಬ್ಬನ್ ವಾನರ ಪ್ರಬೇಧವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಸರಿಯಾದ ಕ್ರಮ ಕೈಗೊಳ್ಳದ ಪರಿಣಾಮ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ 70 ಎಕರೆಯಷ್ಟು ಅರಣ್ಯ ನಾಶವಾಗಿತ್ತು.
ಈ ಹಿನ್ನೆಲೆಯಲ್ಲಿ ಸೇನಾ ಹೆಲೆಕಾಪ್ಟರ್ ಒದಗಿಸಲು ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಕಾಪ್ಟರ್ನ್ನು ನಿರ್ವಹಣೆ ಮಾಡಲು ಅದಕ್ಕೆ ತಗಲುವ ವೆಚ್ಚದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಿರ್ವಹಣೆಗೆ ಹೆಚ್ಚು ಖರ್ಚು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ, ಮೈಸೂರು ಏರ್ಬೇಸ್ಗೆ ಶಾಶ್ವತವಾಗಿ ಸೇನಾ ಹೆಲಿಕಾಪ್ಟರ್ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಳೆದ ವರ್ಷ ಪೈರ್ಲೈನ್ ಗುರುತಿಸಿರಲಿಲ್ಲ. ಇದರಿಂದ ಕಾಡ್ಗಿಚ್ಚಿನಿಂದ ಅಪಾರ ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಅಧಿಕಾರಿಗಳು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ರಸ್ತೆ ಬದಿಯಲ್ಲಿರುವ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಇಡೀ ಅರಣ್ಯಕ್ಕೆ ವ್ಯಾಪಿಸಿತ್ತು.
ಹೀಗಾಗಿ, ಈ ಬಾರಿ ರಸ್ತೆ ಬದಿಯ ಹುಲ್ಲನ್ನು ಸುಟ್ಟು ಸ್ವಚ್ಛಗೊಳಿಸಲಾಗಿದೆ. ಕಾಡಂಚಿನ ಜನರು ಬೆಂಕಿ ನಂದಿಸಲು ಅರಣ್ಯ ಇಲಾಖೆಗೆ ಹೆಚ್ಚು ಸಹಾಯ ಮಾಡುತ್ತಾರೆ. ಅವರಿಗೆ ಸರಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ವನ್ಯ ಪ್ರಾಣಿ ಮತ್ತು ಮಾನವ ಸಂಘರ್ಷ, ಕಾಡಂಚಿನ ಗ್ರಾಮದಲ್ಲಿ ಬೆಳೆ ಹಾನಿ ತಡೆಯಲು ಆನೆ ಕಂದಕಗಳನ್ನು ಮಾಡಲಾಗುತ್ತದೆ. ಕೆಲವೆಡೆ ಸೋಲಾರ್ ಬೇಲಿ ಅಳವಡಿಸಲಾಗಿದೆ ಎಂದರು.
ಪೊಲೀಸ್ ಇಲಾಖೆಯಲ್ಲಿ ನೀಡಲಾಗುವ ಸಿಎಂ ಪದಕವನ್ನು ಅರಣ್ಯ ಇಲಾಖೆಯಲ್ಲಿ ನೀಡಬೇಕೆಂದು ಆರಂಭಿಸಿಲಾಗಿದ್ದ ಕಾರ್ಯಕ್ರಮ ನನೆಗುದಿಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಶೀಘ್ರವಾಗಿ ಅರಣ್ಯ ಇಲಾಖೆಗೂ ಸಿಎಂ ಪದಕ ನೀಡಲಾಗುತ್ತದೆ.
– ಸಿ.ಸಿ.ಪಾಟೀಲ್, ಅರಣ್ಯ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ