ಜನವರಿಯಿಂದ ಹಾಲಿನ ದರ 1 ರೂ. ಏರಿಕೆ


Team Udayavani, Dec 29, 2018, 5:53 AM IST

m1-jan.jpg

ಹುಣಸೂರು: ಜನವರಿಯಿಂದ ಪ್ರತಿ ಲೀಟರ್‌ ಹಾಲಿಗೆ ಒಂದು ರೂ. ಏರಿಕೆಯಾಗಲಿದ್ದು, ರೈತರು ಹೈನುಗಾರಿಕೆಯಲ್ಲಿ ತೊಡಗಿ ಮಕ್ಕಳ ಶಿಕ್ಷಣ, ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿರಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸಲಹೆ ನೀಡಿದರು. ತಾಲೂಕಿನ ಮುದುಗನೂರಿನಲ್ಲಿ 6.5 ಲಕ್ಷ ರೂ. ವೆಚ್ಚದ ನೂತನ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಪರ್ಯಾಯ ಬೆಳೆ: ಇನ್ನು ಮುಂದೆ ತಂಬಾಕು ಬೆಳೆಗೆ ಉಳಿಗಾಲವಿಲ್ಲ. ಇನ್ನೆಷ್ಟು ದಿನ ತಂಬಾಕು ಬೆಳೆಯುತ್ತೀರಾ?, ತಾಲೂಕಿನಲ್ಲಿ ಉತ್ತಮ ಭೂಮಿ, ನೀರು ಲಭ್ಯವಿದ್ದು, ಇತರೆ ಬೆಳೆಗಳಿಗೆ ಆದ್ಯತೆ ನೀಡಬೇಕು. ರೈತರು ತಂಬಾಕು ಬಿಟ್ಟಾಕಿ  ಹೈನುಗಾರಿಕೆ, ತೋಟಗಾರಿಕೆ ಸೇರಿದಂತೆ ಪರ್ಯಾಯ ಬೆಳೆ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

7 ಲಕ್ಷ ಲೀ. ಹಾಲು ಪೂರೈಕೆ: ತಾಲೂಕಿನಲ್ಲಿ 183 ಹಾಲು ಉತ್ಪಾದಕ ಸಹಕಾರ ಸಂಘಗಳಿದ್ದು, ಮಹಿಳಾ ಡೇರಿಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಿತ್ಯ ಜಿಲ್ಲೆಯಲ್ಲಿ 7 ಲಕ್ಷ ಲೀ. ಹಾಲು ಮೈಮುಲ್‌ಗೆ ಪೂರೈಕೆ ಆಗುತ್ತಿದೆ. ಹುಣಸೂರಿನಿಂದ 90 ಸಾವಿರ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಸದಸ್ಯರು ಗುಣಮಟ್ಟದ ಹಾಲನ್ನೇ ಹಾಕಬೇಕು. ಕೃಷಿ ಪತ್ತಿನ ಸಹಕಾರ ಸಂಘಗಳು ರಾಜಕೀಯ ಪ್ರವೇಶದಿಂದಾಗಿ ಹಾಳಾಗುತ್ತಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಬೆರೆಸಬೇಡಿ ಎಂದು ಮನವಿ ಮಾಡಿದರು.

ನನ್ನ ತವರು: ಹನಗೋಡು ಹೋಬಳಿ ತಮ್ಮ ತವರು. ಇಲ್ಲಿನ ಜನರು ತಮ್ಮನ್ನು ಮಗನಂತೆ ಕಂಡಿದ್ದಲ್ಲದೇ ನಮ್ಮ ಕುಟುಂಬವನ್ನೂ ಬೆಂಬಲಿಸಿದ್ದಾರೆ. ಇದೀಗ ಎಚ್‌.ವಿಶ್ವನಾಥ ಅವರನ್ನು ಶಾಸಕರನ್ನಾಗಿ ಮಾಡಿದ್ದೀರಾ, ಇದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರೈತ ಪರ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.

ಈ ಹಿಂದೆ ದೊಡ್ಡ ಹೆಜೂರು, ನಾಗಾಪುರ, ನೇರಳಕುಪ್ಪೆ, ಕಡೇಮನುಗನಹಳ್ಳಿಗಳಿಗೆ ಪ್ರೌಢಶಾಲೆ, ಪಶು ಆಸ್ಪತ್ರೆ ಮಂಜೂರು ಹಾಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದೇನೆ. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ್ದೆನೆಂಬ ಹೆಮ್ಮೆ ತಮಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವೈಷಮ್ಯ ಬಿಡಿ: ಚುನಾವಣೆ ಬಂದಾಗ ಮಾತ್ರ ಪಕ್ಷ ರಾಜಕಾರಣ ಮಾಡಿ, ಆನಂತರ ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಿ, ಸಣ್ಣ-ಪುಟ್ಟ ವಿಚಾರಗಳಿಗೆ ವೈಮನಸ್ಸು ಬಿಟ್ಟು ಶಾಂತಿ ಸೌಹಾರ್ದತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಾಲಮಿತಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ಮಹಿಳಾ ಡೇರಿ,  ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣವಾಗುತ್ತಿರುವುದು ಆಶಾದಾಯಕ.  ಮುಂದಿನ ದಿನಗಳಲ್ಲಿ ಕಾಡಂಚಿನ ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾಲಮಿತಿಯೊಳಗೆ ಬಗೆಹರಿಸುವ ಪ್ರಯತ್ನ ನಡೆಸಿದ್ದೇನೆ ಎಂದರು.

ದೇವರಾಜು ಅರಸು ಸಂಸ್ಮರಣಾ ದಿನದೊಳಗೆ ಅರ್ಹರಿಗೆ ಸಾಗುವಳಿ ಪತ್ರ ವಿತರಿಸುವ ಯೋಜನೆ ರೂಪಿಸಿದ್ದೇನೆ. ಕೆರೆ ತುಂಬಿಸುವ ಹಾಗೂ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಶ್ರಮ ಹಾಕುತ್ತೇನೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳಿ ನಿರ್ದೇಶಕಿ ಲಲಿತಾ ಜಿ.ಟಿ.ದೇವೇಗೌಡ, ಮೈಮುಲ್‌ ನಿರ್ದೇಶಕ ಕೆ.ಎಸ್‌.ಕುಮಾರ್‌, ಜಿಪಂ ಸದಸ್ಯ ಕಟ್ಟನಾಯಕ, ತಾಪಂ ಉಪಾಧ್ಯಕ್ಷ ಪ್ರೇಮಕುಮಾರ್‌, ಎಪಿಎಂಸಿ ಸದಸ್ಯ ಸುಬಾಷ್‌, ಡೇರಿ ಅಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ಅನಿತಾ,

ತಾಪಂ ಸದಸ್ಯರಾದ ಪುಷ್ಪಲತಾ, ಪುಟ್ಟಮ್ಮ, ತಟ್ಟೆಕೆರೆ ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷೆ ಮಹದೇವಿ, ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಮೈಮುಲ್‌ ವಿಸ್ತರಣಾಧಿಕಾರಿ ಗೌತಮ್‌ ಬಸವಲಿಂಗಯ್ಯ, ಟಿಎಪಿಸಿಎಂಎಸ್‌ ಅಧ್ಯಕ್ಷ ವೆಂಕಟೇಶ್‌,  ಜೆಡಿಎಸ್‌ ಅಧ್ಯಕ್ಷ ಮಹದೇವೇಗೌಡ, ಧರ್ಮಸ್ಥಳ ಸಂಸ್ಥೆ ಯೋಜನಾಧಿಕಾರಿ ಯಶೋಧಾ, ಮುಖಂಡರಾದ ಸೋಮಶೇಖರ್‌, ವೆಂಕಟೇಶ್‌, ಕಸ್ತೂರಿಗೌಡ, ರುದ್ರಪ್ಪ, ದೇವರಾಜ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.