ರೈತನ ಕೈ ಹಿಡಿಯಲಿದೆ ಮಿಲ್ಕ್-ಸಿಲ್ಕ್ ವೃತ್ತಿ


Team Udayavani, Aug 28, 2017, 12:06 PM IST

mys3.jpg

ಹುಣಸೂರು: ಎಲ್ಲಾ ಬೆಳೆಗಳಿಗೂ ದಳ್ಳಾಳಿಗಳ ಹಾವಳಿ ಇದೆ. ಆದರೆ, ಮಿಲ್ಕ್ ಮತ್ತು ಸಿಲ್ಕ್ನ್ನು ವೃತ್ತಿಯನ್ನಾಗಿಸಿಕೊಂಡಿರುವ ರೈತನಿಗೆ ದಳ್ಳಾಗಳ ಭಯವೂ ಇಲ್ಲ, ಆತ್ಮಹತ್ಯೆ ಪ್ರಮೇಯವೇ ಬರುವುದಿಲ್ಲ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಮೀನುಗಾರಿಕೆ ಸಚಿವ ಎ.ಮಂಜು ಅಭಿಪ್ರಾಯಪಟ್ಟರು. ತಾಲೂಕಿನ ಚಿಲ್ಕುಂದ ಗ್ರಾಮದಲ್ಲಿ 20.5 ಲಕ್ಷರೂ ವೆಚ್ಚದಡಿ ನಿರ್ಮಿಸಿರುವ ನೂತನ ಪಶು ಚಿಕಿತ್ಸಾಲಯ ಹಾಗೂ 7 ಲಕ್ಷರೂ ವೆಚ್ಚದ ಮಹಿಳಾ ಡೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಈ ಹಿಂದಿನ ಪಶುಸಂಗೋಪನೆ ಸಚಿವ ಕೃಷ್ಣಪ್ಪ ಅವರ ಒತ್ತಾಸೆಯಿಂದಾಗಿ  ರಾಜ್ಯದಲ್ಲಿ ಹೈನೋದ್ಯಮ ಬೃಹದಾಕಾರವಾಗಿ ಬೆಳೆದಿದೆ. ರಾಜ್ಯದಲ್ಲಿ ನಿತ್ಯ 77 ಲಕ್ಷ ಲೀಟರ್‌ ಹಾಗೂ ಮೈಸೂರು ಡೇರಿಗೆ 9.11 ಲಕ್ಷ ಲೀ ಹಾಲು ಬರುತ್ತಿದ್ದು, ಸರ್ಕಾರ ಲಾಭ ನಷ್ಟವನ್ನೂ ಗಮನಿಸದೆ ಹಾಲು ಉತ್ಪಾದಕರ ಹಿತ ದೃಷ್ಟಿಯಿಂದ ಪ್ರತಿ ಲೀಟರ್‌ಗೆ 5 ರೂ ನಂತೆ 1300 ಕೋಟಿ ರೂ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ತಿಳಿಸಿದರು.

ಪಶುಭಾಗ್ಯ ಯೋಜನೆಯಡಿ 25 ಸಾವಿರ ಮಂದಿಗೆ ಸೌಲಭ್ಯ ಕಲ್ಪಿಸಲಾಗಿದೆ. ಶಾಸಕರ ಬೇಡಿಕೆಯಂತೆ ಹುಣಸೂರಿಗೆ ಹೆಚ್ಚುವರಿ ನೂರು ಪಶುಭಾಗ್ಯ ಘಟಕಗಳನ್ನು ನೀಡಲಾಗುತ್ತಿದೆ ಎಂದು ನುಡಿದರು. ರೇಷ್ಮೆ ಬೆಳೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಉತ್ತಮ ಬೆಲೆಯೂ ಸಿಗುತ್ತಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಮಿಲ್ಕ್ ಮತ್ತು ಸಿಲ್ಕ್ ಮಾತ್ರ ಕೈಹಿಡಿಯುತ್ತಿದೆ ಎಂದು ತಿಳಿಸಿದರು. 

ವೈದ್ಯರಿಗೂ ಜಿಪಿಎಸ್‌: ಎಲ್ಲಾ ಪಶು ವೈದ್ಯರಿಗೂ ಇಲಾಖೆ ವತಿಯಿಂದಲೇ  ಜಿಪಿಎಸ್‌ ಅಳವಡಿಸಿರುವ ಮೊಬೈಲ್‌ ಕೊಡಿಸಲಾಗುತ್ತಿದೆ. ಈ ಮೂಲಕ ಅವರ ಕರ್ತವ್ಯದ ಮೇಲೆ ನಿಗಾ ಇಡಲಾಗುವುದೆಂದರು.

ಗೇಯುವ ಎತ್ತಿಗೆ ಮೇವು ಹಾಕಿ: ನುಡಿದಂತೆ ನಡೆದಿರುವ ಸರ್ಕಾರ ಸಿದ್ದರಾಮಯ್ಯರದ್ದು, ಮುಂದೆಯೂ ನಮ್ಮದೇ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಶಾಸಕ ಮಂಜುನಾಥ್‌ ತನ್ನ ಕ್ಷೇತ್ರಕ್ಕಿಂತಲೂ ಹೆಚ್ಚಿನ ಅನುದಾನವನ್ನು ಹುಣಸೂರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ. ಇಂತಹ ಗೇಯುವ ಎತ್ತಿಗೆ ಮೇವು ಹಾಕಿ, ಹೊರಗಿನಿಂದ ಜಾತ್ರೆಗೆ ಬರುವ ಎತ್ತುಗಳಿಗೆ ಮೇವು ಹಾಕಬೇಡಿರೆಂದು ಮನವಿ ಮಾಡಿದರು.

ಶಾಸಕ ಎಚ್‌.ಪಿ.ಮಂಜುನಾಥ್‌, ತಾಲೂಕಿಗೆ  ಐದು ವರ್ಷಗಳಲ್ಲಿ 7 ಪಶು ಆಸ್ಪತ್ರೆ ಕಟ್ಟಡ ಮಂಜೂರು ಮಾಡಿದ್ದಲ್ಲದೆ, ಎರಡು ಹೊಸ ಆಸ್ಪತ್ರೆಗೆ ಸಚಿವರು ಅನುದಾನ ನೀಡಿದ್ದಾರೆಂದು ಪ್ರಶಂಸಿಸಿದರು. ಮೆಮುಲ್‌ ಅಧ್ಯಕ್ಷ ಕೆ.ಜಿ.ಮಹೇಶ್‌, ಕಟ್ಟೆಮಳಲವಾಡಿ, ಚಿಲ್ಕುಂದ,ಬಿಳಿಕೆರೆ, ಹನಗೋಡು ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಚಿಲ್ಕುಂದ-ಮುತ್ತುರಾಯನಹೊಸಹಳ್ಳಿ ಹಾಗೂ ಹಬ್ಬನಕುಪ್ಪೆ ಹಾಗೂ ಹಿರಿಕ್ಯಾತನಹಳ್ಳಿ ಭಾಗದ ರಸ್ತೆ ಅಭಿವೃದ್ಧಿಪಡಿಸಬೇಕು ಹಾಗೂ ಹಿರಿಕ್ಯಾತನಹಳ್ಳಿ, ಗುರುಪುರ,ಚಿಲ್ಕುಂದಕ್ಕೆ ಪಿಯು ಕಾಲೇಜು ಮಂಜೂರು ಮಾಡಿಸುವಂತೆ  ಕೋರಿದರು.

ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ  ಜಯಲಕ್ಷಿ, ಮೆಮುಲ್‌ ನಿರ್ದೇಶಕರಾದ ಕೆ.ಎಸ್‌.ಕುಮಾರ್‌, ಶಿವಗಾಮಿ, ವ್ಯವಸ್ಥಾಪಕ ನಿರ್ದೇಶಕ ಶಿವಲಿಂಗೇಗೌಡ, ವ್ಯವಸ್ಥಾಪಕ  ಮಲ್ಲಿಕಾರ್ಜುನ್‌, ಡೇರಿ ಅಧ್ಯಕ್ಷೆ ರಾಧಾಮಣಿ, ಉಪಾಧ್ಯಕ್ಷೆ ಶಂಸದ್‌ ಬಾನು, ತಾಪಂ ಅಧ್ಯಕ್ಷೆ ಪದ್ಮಮ್ಮ, ಉಪಾಧ್ಯಕ್ಷ ಪ್ರೇಮಕುಮಾರ್‌ ಮತ್ತಿತರರಿದ್ದರು.
  
ಪಶು ವೈದ್ಯರ ನೇಮಕದಲ್ಲಿ ಕರ್ನಾಟಕ ನಂ1
ತಾವು ಅಧಿಕಾರ ವಹಿಸಿಕೊಂಡಾಗ  ರಾಜ್ಯದೆಲ್ಲೆಡೆ ಪಶು ವೈದ್ಯರಿಲ್ಲವೆಂಬ ಕೂಗು ಕೇಳಿ ಬಂದಿತ್ತು. ಸರ್ಕಾರ ಕೆಪಿಎಸ್‌ಇ ವತಿಯಿಂದ ನೇಮಕ ಮಾಡಿಕೊಳ್ಳಲಾದ 126 ಮಂದಿ ಸೇರಿದಂತೆ 624 ಮಂದಿ ಪಶು ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಎಲ್ಲಾ ವೈದ್ಯರನ್ನು ಇನ್ನು 10-15 ದಿನಗಳಲ್ಲಿ ಎಲ್ಲ ಆಸ್ಪತ್ರೆಗಳಿಗೆ ನಿಯೋಜಿಸಲಾಗುತ್ತಿದ್ದು, ದೇಶದಲ್ಲೇ  ಪೂರ್ಣ ಪ್ರಮಾಣದಲ್ಲಿ ಪಶು ವೈದ್ಯರ ನೇಮಕ ಮಾಡಿದ ಹೆಗ್ಗಳಿಕೆ ಕರ್ನಾಟಕದ್ದಾಗಿದೆ ಎಂದು ಸಚಿವ ಎ.ಮಂಜು ತಿಳಿಸಿದರು.

ಟಾಪ್ ನ್ಯೂಸ್

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.