ಸಾ.ರಾ.ಮಹೇಶ್ಗೆ ಸಚಿವ ಸ್ಥಾನ ನೀಡಿ
Team Udayavani, May 23, 2018, 2:03 PM IST
ಭೇರ್ಯ: ಸತತವಾಗಿ ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಸಾಧಿಸಿರುವ ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ಗೆ ಸಚಿವ ಸ್ಥಾನ ನೀಡಬೇಕೆಂದು ಗ್ರಾಪಂ ಅಧ್ಯಕ್ಷ ಬಿ.ವೈ.ಶಿವಶಂಕರ್ ಹಾಗೂ ಹೊಸ ಅಗ್ರಹಾರ ಹೋಬಳಿ ಜೆಡಿಎಸ್ ಯುವ ಜೆಡಿಎಸ್ ಅಧ್ಯಕ್ಷ ಚಿದಂಬರ ನಾಯಕ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ನಿಂದ ಶಾಸಕ ಸಾ.ರಾ.ಮಹೇಶ್ ಒಬ್ಬರೇ ಶಾಸಕರಾಗಿ ಆಯ್ಕೆಯಾಗಿ, ಜೆಡಿಎಸ್ ಕಾರ್ಯಕರ್ತರ ಏಳಿಗೆಗಾಗಿ ಶ್ರಮಿಸಿದ್ದಲ್ಲದೆ, ಸ್ವಂತ ಹಣದಲ್ಲಿ ಜನರ ಕುಂದು ಕೊರತೆಗಳಿಗೆ ಸ್ಪಂದಿಸಿದ್ದಾರೆ. ಮೈಸೂರು ನಗರ ಸೇರಿದಂತೆ ಚಾಮರಾಜನಗರ ಜಿಲ್ಲೆಯಲ್ಲಿಯೂ ಜೆಡಿಎಸ್ ಪ್ರಾಬಲ್ಯವಾಗಲು ಸದಾ ಸ್ಪಂದಿಸಿದ್ದಾರೆ ಎಂದರು.
2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜಿಲ್ಲೆ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಮೈಸೂರು ನಗರ ಪಾಲಿಕೆ ಹಾಗೂ ಜಿಪಂನಲ್ಲಿಯೂ ಜೆಡಿಎಸ್ ಅಧಿಕಾರ ಹಿಡಿಯುವಂತೆ ಶ್ರಮಿಸಿರುವ ಏಕೈಕ ಶಾಸಕರಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಯುವ ಮುಖಂಡರಾದ ಗೌತಮ್, ಭೇರ್ಯ ಸೋಮು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ