ದೇಸೀಯ ಉತ್ಪನ್ನಗಳ ಬಳಕೆಗೆ ಮೇಳ

ಕರಕುಶಲ ಕರ್ಮಿಗಳ ಉತ್ತೇಜನಕ್ಕೆ ಮೇಳ ಸಹಕಾರಿ ! ಹುನಾರ್‌ ಹಾಟ್‌ ಕರಕುಶಲ ಮೇಳಕ್ಕೆ ಸದಾನಂದಗೌಡ ಚಾಲನೆ

Team Udayavani, Feb 7, 2021, 1:35 PM IST

2r (4)

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 25ನೇ ಹುನಾರ್‌ ಹಾಟ್‌ ಕರಕುಶಲ ಮೇಳಕ್ಕೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಚಾಲನೆ ನೀಡಿದರು.

ಆತ್ಮ ನಿರ್ಭರ ಭಾರತ್‌ ಯೋಜನೆಯನ್ನು ಪ್ರೋತ್ಸಾಹಿಸುವ ಜತೆಗೆ ದೇಶದ ವಿವಿಧ ಭಾಗಗಳ ಕಲೆ, ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಪರಿಚಯಿಸುವ ಸಲುವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಎನ್‌ಎಂಡಿಎಫ್ಸಿ ವತಿಯಿಂದ ನಗರ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಮೇಳ ಆಯೋಜಿಸಲಾಗಿದ್ದು, ಫೆ.6ರಿಂದ 14ರ ವರೆಗೆ ನಡೆಯಲಿದೆ.

ಬಳಿಕ ಮಾತನಾಡಿದ ಸಚಿವ ಡಿ.ವಿ. ಸದಾನಂದ ಗೌಡ, ಆತ್ಮನಿರ್ಭರ ಯೋಜನೆಗೆ ಪೂರಕವಾಗಿ, ವೋಕಲ್‌ ಫಾರ್‌ ಲೋಕಲ್‌ ಘೋಷಣೆಗೆ ಪುಷ್ಟಿ ನೀಡು ವಂತೆ ದೇಸೀಯ ಉತ್ಪನ್ನಗಳ ಹುನಾರ್‌ ಹಾಟ್‌ ಮೇಳ ವನ್ನು ಆಯೋಜಿಸಲಾಗಿದೆ. ಈ ಮೇಳ ಈಗಾಗಲೇ 24 ಬಾರಿ ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದು, ಕರ್ನಾ ಟಕದಲ್ಲಿ ಮೊದಲನೆಯ ಬಾರಿಗೆ ನಡೆಸಲಾಗುತ್ತಿದೆ ಎಂದರು.

ದೇಶದಲ್ಲಿ ಹಲವಾರು ಧರ್ಮ, ಜಾತಿ, ಆಚಾರ- ವಿಚಾರ, ಸಂಸ್ಕೃತಿ ಇದೆ. ಈ ಮೇಳ ವಿವಿಧ ರೀತಿಯ  ಕರಕುಶಲ, ಕಲಾತ್ಮಕ ವಸ್ತುಗಳ ಮೂಲಕ ಆಯಾ ಸಂಸ್ಕೃತಿ, ಧರ್ಮವನ್ನು ಪ್ರತಿನಿಧಿಸುತ್ತದೆ. ದೇಶದಲ್ಲಿ  ಬೃಹತ್‌ ಕೈಗಾರಿಕೆಗಳ ಸಂಖ್ಯೆ ಹೆಚ್ಚಾಗುವಂತೆ ಸಣ್ಣಪುಟ್ಟ ಕರಕುಶಲ ಕೆಲಸಗಳನ್ನು ಮಾಡುವವರ  ಸಂಖ್ಯೆಯೂ ಹೆಚ್ಚಳವಾಗಬೇಕು. ಮೈಸೂರು ಸಿಲ್ಕ್ ಸೀರೆ, ಚನ್ನಪಟ್ಟಣ ಗೊಂಬೆಗಳು ಮತ್ತಿತರ ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯಬೇಕು. ಈ ನಿಟ್ಟಿನಲ್ಲಿ ಇಂತಹ ಮೇಳಗಳು  ಸಹಕಾರಿಯಾಗುತ್ತವೆ ಎಂದು ಹೇಳಿದರು.

ರಾಜ್ಯ ಯುವಜನ ಹಾಗೂ ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ದೇಸೀಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು. ಆಗ ಮಾತ್ರ ಪ್ರಧಾನಿ ಮೋದಿಯವರ ಹೇಳಿಕೆಯಂತೆ ಲೋಕಲ್‌ ಟು ಗ್ಲೋಬಲ್‌ ಆಗಲು ಸಾಧ್ಯ. ಚೀನಾ ವಸ್ತುಗಳ ಬಳಕೆ ಬಿಟ್ಟು, ಪ್ರತಿ ಮನೆಯಲ್ಲೂ ಸ್ಥಳೀಯ ಉತ್ಪನ್ನಗಳ ಬಳಕೆ ಆರಂಭವಾಗಬೇಕು. ದೇಸೀಯ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆಯ ಸಮಸ್ಯೆ ಇದೆ.  ಅದಕ್ಕಾಗಿ ಉತ್ತಮ ಮಾರುಕಟ್ಟೆ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದರು.

ಇದನ್ನೂ ಓದಿ :ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪಕ್ಷಾಂತರ

ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್‌ ಸಿಂಹ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಪಿ.ಕೆ.ದಾಸ್‌, ಎನ್‌ಎಂಡಿ ಎಫ್ಸಿ ಮುಖ್ಯಸ್ಥ ಮೊಹಮದ್‌ ಶಹಬಾಜ್‌ ಆಲಿ, ಸಿಪಿಎಸ್‌ ಭಕ್ಷಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ ಕುಮಾರ್‌ ಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.