ನಾಪತ್ತೆಯಾಗಿದ್ದ ಗೃಹಿಣಿ ಪ್ರಿಯಕರನೊಂದಿಗೆ ಪತ್ತೆ; ಪತಿ ಆತ್ಮಹತ್ಯೆಗೆ ಶರಣು

ವ್ಯಾಟ್ಸಪ್‌ನಲ್ಲಿ ಬಂದ ಫೋಟೋ ಕಂಡು ಮನನೊಂದ ಪತಿ; ಇಬ್ಬರು ಹೆಣ್ಣು ಮಕ್ಕಳು ಅನಾಥ

Team Udayavani, Oct 31, 2022, 8:18 PM IST

1ssasa

ಸುರೇಶ್‌ಕುಮಾರ್

ಹುಣಸೂರು : ಪತ್ನಿ ಮನೆಬಿಟ್ಟು ಹೋಗಿ ಪ್ರಿಯರಕನೊಂದಿಗೆ ಮದುವೆಯಾಗಿರುವ ವಿಷಯ ತಿಳಿದು ಮನನೊಂದ ವ್ಯಕ್ತಿಯೊಬ್ಬ ಅತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೊಯಮುತ್ತೂರು ಕಾಲೊನಿ ಗ್ರಾಮದಲ್ಲಿ ಭಾನುವಾರ ನಡೆದಿದ್ದು, ಇವರ ಇಬ್ಬರು ಹೆಣ್ಣು ಮಕ್ಕಳು ಅನಾಥವಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊಯಮುತ್ತೂರು ಕಾಲೋನಿಯ ಕೃಷ್ಣೆಗೌಡರ ಪುತ್ರ ಸುರೇಶ್‌ಕುಮಾರ್(37) ಎಂಬಾತನೆ ನೇಣಿಗೆ ಶರಣಾಗಿರುವ ನತದೃಷ್ಟ, ಇವರಿಗೆ ತಂದೆ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳಿದ್ದಾರೆ.

ಮೃತ ಸುರೇಶ್‌ಕುಮಾರ್-ನೇತ್ರಾ ದಂಪತಿಗೆ 7 ಮತ್ತು 5 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು, ಸುರೇಶ್‌ಕುಮಾರ್ ಕೂಲಿ ಕೆಲಸ ಮಾಡಿಕೊಂಡಿದ್ದರೆ. ಪತ್ನಿ ನೇತ್ರ ಹುಣಸೂರಿಗೆ ಸಮೀಪದ ಕಟ್ಟೆಮಳಲವಾಡಿಯ ಮಾರೀಸ್ ಸ್ಪೀನರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕೆ ಸೇರಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು.

ಕೆಲಸಕ್ಕೆ ಹೋಗಿದ್ದಾಕೆ ನಾಪತ್ತೆ
ಕಳೆದ ಒಂದು ತಿಂಗಳ ಹಿಂದೆ ಪತ್ನಿ ನೇತ್ರ ಫ್ಯಾಕ್ಟರಿಗೆ ಹೋಗಿ ಮನೆಗೆ ವಾಪಸ್ ಬರದಿದ್ದರಿಂದ ಸಂಬಂಧಿಕರು, ಪರಿಚಯಸ್ಥರ ಮನೆಗಳಲ್ಲಿ ಹುಡುಕಾಡಿದರೂ ಪತ್ನಿ ನೇತ್ರಾಳ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಸುರೇಶ್ ಕುಮಾರ್ ತನ್ನ ಪತ್ನಿ ನೇತ್ರಾಳನ್ನು ಹುಡುಕಿಕೊಡುವಂತೆ ದೂರು ದಾಖಲಿಸಿದ್ದರು.

ಶಿವಮೊಗ್ಗದಲ್ಲಿ ಪತ್ತೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು ನೇತ್ರಳ ಮೊಬೈಲ್ ಲೊಕೇಶನ್ ಸರ್ಚ್ನಲ್ಲಿದ್ದ ವೇಳೆ ನಾಪತ್ತೆಯಾಗಿದ್ದ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾಗಿ ಅಲ್ಲಿನ ಪೋಲಿಸರು ಠಾಣೆಗೆ ಕರೆಯಿಸಿ ವಿಚಾರಿಸಿದ ವೇಳೆ ತನಗೆ ಗಂಡನೊಂದಿಗೆ ಬಾಳಲು ಇಷ್ಟ ಇಲ್ಲ. ಅವರು ನನ್ನೊಂದಿಗೆ ಹೊಂದಿಕೊಳ್ಳುವುದಿಲ್ಲ, ಹೀಗಾಗಿ ತಾನು ನನ್ನ ಜೊತೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ದೂರು ಗ್ರಾಮದ ಪ್ರಿಯಕರನೊಂದಿಗೆ ಶಿವಮೊಗ್ಗಕ್ಕೆ ಬಂದು 15 ದಿನಗಳ ಹಿಂದೆ ತಾವಿಬ್ಬರೂ ಸೊರಬ ತಾಲೂಕಿನ ದೇವಸ್ಥಾನದಲ್ಲಿ ಹೊಳೆಜೋಳದಗುಡ್ದ ಗ್ರಾಮದ ಗೋಮಂತೇಶ್ವರ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ಹೇಳಿಕೆ ನೀಡಿದ್ದಳು.

 ಪ್ರಾಣಕ್ಕೆ ಕುತ್ತು
ಇಬ್ಬರೂ ಮದುವೆಯಾಗಿದ್ದ ಪೋಟೋವನ್ನು ನೇತ್ರಾ ತನ್ನ ಗಂಡನಿಗೆ ವ್ಯಾಟ್ಸಪ್‌ನಲ್ಲಿ ಕಳುಹಿಸಿ, ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ತಾವು ಮತ್ತೆ ಬರುವುದಿಲ್ಲವೆಂದು ತಿಳಿಸಿದ್ದಳು. ಇದರಿಂದ ಮನನೊಂದಿದ್ದ ಸುರೇಶ್‌ಕುಮಾರ್ ಭಾನುವಾರ ಮದ್ಯಾಹ್ನ ತನ್ನ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ನನ್ನ ಮಗನ ಸಾವಿಗೆ ಆತನ ಸೊಸೆ ನೇತ್ರಾಳೇ ಕಾರಣವಾಗಿದ್ದು, ಆಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಇದೀಗ ಸುರೇಶ್ ಕುಮಾರ್ ತಂದೆ ಕೃಷ್ಣೆಗೌಡ ಗ್ರಾಮಾಂತರ ಠಾಣೆ ಪೋಲಿಸರಿಗೆ ದೂರು ನೀಡಿದ್ದಾರೆ.

ಗ್ರಾಮಾಂತರ ಪೋಲಿಸ್ ಇನ್ಸ್ಪೆಕ್ಟರ್ ಸಿ.ವಿ.ರವಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮೃತದೆಹವನ್ನು ಮರಣೋತ್ತರ ಪರೀಕ್ಷೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಿದ್ದು, ವೃದ್ದ ಕೃಷ್ಣೇಗೌಡ ಗ್ರಾಮಸ್ಥರ ಸಹಕಾರದಿಂದ ಮಗನ ಅಂತ್ಯ ಕ್ರಿಯೆ ನಡೆಸಿದ್ದಾರೆ.

ಅನಾಥವಾದ ಮಕ್ಕಳು
ಇತ್ತ ಹೆತ್ತ ತಾಯಿ ತನ್ನ ಕರುಳ ಬಳ್ಳಿಗಳನ್ನೇ ಬಿಟ್ಟು ಪ್ರಿಯಕರನೊಂದಿಗೆ ಮದುವೆ ಮಾಡಿಕೊಂಡು ಶಿವಮೊಗ್ಗದಲ್ಲಿದ್ದರೆ, ಆಸರೆಯಾಗಬೇಕಿದ್ದ ತಂದೆ ಸುರೇಶ್‌ಕುಮಾರ್ ಸಹ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದರಿಂದಾಗಿ ಪ್ರಪಂಚದ ಜ್ಞಾನವಿಲ್ಲದ ಪುಟ್ಟ ಹೆಣ್ಣುಮಕ್ಕಳನ್ನು ಇದೀಗ ತಾತ ಕೃಷ್ಣೇಗೌಡ ಸಲಹುವ ಜವಾಬ್ದಾರಿ ಹೊರಬೇಕಿದೆ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.