ರಾಜಕೀಯ ಲೆಕ್ಕಾಚಾರಕ್ಕೆ ಗ್ರಾಸವಾದ ವೇದಿಕೆ

ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಚ್ಡಿಕೆ ಹೆಸರು ಪ್ರಸ್ತಾಪವಿಲ್ಲ !ಜಿ.ಟಿ.ದೇವೇಗೌಡ, ಶಾಸಕ ಕೆ.ಮಹದೇವ್‌ರ ಗುಣಗಾನ

Team Udayavani, Feb 14, 2021, 6:58 PM IST

MLA G T Devegouda

ಪಿರಿಯಾಪಟ್ಟಣ: ಶನಿವಾರ ಹರೀಶ್‌ಗೌಡರಿಗಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಹಲವು ಅನು ಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಟ್ಟಣದ ಪಟ್ಟಣದ ಶಾರದಾ ಚಿತ್ರಮಂದಿರದ ಬಳಿ ಇರುವ ಮೈದಾನದಲ್ಲಿ ರಾಜ್ಯ ಅಪೆಕ್ಸ್‌ ಬ್ಯಾಂಕ್‌ನ ಉಪಾಧ್ಯಕ್ಷ ಜಿ.ಡಿ.ಹರೀಶ್‌ ಗೌಡ ಅವರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಂಡುಬಂತು.

ಜಿ.ಡಿ.ಹರೀಶ್‌ಗೌಡ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಉಪಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೈಸೂರು ಜಿಲ್ಲೆಯ ಕೆ.ಆರ್‌.ನಗರ, ಎಚ್‌.ಡಿ.ಕೋಟೆ, ಹುಣ ಸೂರು, ಟಿ.ನರಸಿಪುರ ಮೈಸೂರು ನಗರ ಸೇರಿ ದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಅಭಿ ನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಅದೇ ರೀತಿ ಪಿರಿಯಾ ಪಟ್ಟಣದಲ್ಲಿಯೂ ವಿವಿಧ ಸಹಕಾರ ಸಂಘಗಳ ನೇತೃತ್ವ ದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭದುದ್ದಕ್ಕೂ ಜಿ.ಟಿ.ದೇವೇಗೌಡ ಹಾಗೂ ಶಾಸಕ ಕೆ.ಮಹದೇವ್‌ ಅವರ ಗುಣಗಾನ ನಡೆದದ್ದು ಬಿಟ್ಟರೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ ಅವರ ನೆನಪು ಕೂಡ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಾರ್ಯಕ್ರಮದಲ್ಲಿ ಜಿ.ಡಿ.ಹರೀಶ್‌ಗೌಡ ಮಾತ ನಾಡಿ, ನಾನು ಅಪೆಕ್ಸ್‌ ಬ್ಯಾಂಕ್‌ ರಾಜ್ಯ ಉಪಾಧ್ಯಕ್ಷ ನಂತರ ಯಾವ ಶಾಸಕ ಅಥವಾ ಮಂತ್ರಿಗೂ ಸಿಗದ ಅಭಿನಂದನಾ ಸಮಾರಂಭ ಸಹಕಾರ ಕ್ಷೇತ್ರದಲ್ಲಿ ತನಗೆ ಸಿಕ್ಕಿರುವುದು ತನ್ನ ಪುಣ್ಯ. ಸಹಕಾರಿ ಕ್ಷೇತ್ರಗಳ ಯೋಜನೆಗಳು ಯಾವುದೇ ಒಂದು ಜಾತಿಯ ಧರ್ಮದ ವ್ಯಕ್ತಿಗೂ ಸೀಮಿತವಲ್ಲ. ಸಹಕಾರ ಕ್ಷೇತ್ರದ ತತ್ವದಂತೆ ಇಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದರು.

ನುಂಗಲಾರದ ತುತ್ತು: ಜಿ.ಡಿ.ಹರೀಶ್‌ ಗೌಡರಿಗಾಗಿ ನಡೆದ ಕಾರ್ಯಕ್ರಮ ಶಾಸಕ ಕೆ.ಮಹದೇವ್‌ರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವುದಂತೂ ಸತ್ಯ. ಪಿರಿಯಾಪಟ್ಟಣದಲ್ಲಿ ಶಾಸಕ ಕೆ.ಮಹದೇವ್‌ ಶಾಸಕರಾಗಿರುವುದು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರ  ನಾಮಬಲದಿಂದ. ಆದರೆ, ಜಿ.ಟಿ.ದೇವೇಗೌಡ ಹಾಗೂ ಅವರ ಮಗ ಹರೀಶ್‌ ಗೌಡರ ಸ್ನೇಹ ಮತ್ತು ಆರ್ಥಿಕ ವ್ಯವಹಾರ, ಶಾಸಕ ಕೆ.ಮಹದೇವ್‌ ತಮ್ಮ ಮಗ ಪಿ.ಎಂ.ಪ್ರಸನ್ನ ಅವರ ಮೈಮುಲ್‌ ನ ಅಧ್ಯಕ್ಷಗಾದಿಗಾಗಿ ನಡೆಯುತ್ತಿರುವ ಈ ಕಾರ್ಯಕ್ರಮ. ಅನಿವಾರ್ಯವಾಗಿ ಮಾಜಿ ಪ್ರಧಾನಿ ಹಾಗೂ ಕುಮಾರಸ್ವಾಮಿ ಅವರನ್ನು ಮರೆಸುವಂತೆ ಮಾಡಿರುವುದಂತೂ ಸತ್ಯ. ಈಗಾಗಲೇ ಜಿಲ್ಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪರ್ಯಾಯವಾಗಿ ವೇದಿಕೆ ಸೃಷ್ಟಿ ಪರ್ಯಾಯ ನಾಯಕತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಜಿ. ಟಿ.ದೇವೇಗೌಡ, ಪುತ್ರ ಹರೀಶ್‌ ಗೌಡರು ಹಾಗೇ ಶಾಸಕ ಕೆ.ಮಹದೇವ್‌ ಹಾಗೂ ಪಿ.ಎಂ.ಪ್ರಸನ್ನ ಅವರಿಗೆ ಮುಂದಿನ ಭವಿಷ್ಯಕ್ಕಾಗಿ ಈ ಕಾರ್ಯಕ್ರಮ ಅಗತ್ಯ ಮತ್ತು ಅನಿವಾರ್ಯವಾಗಿ ಪರಿಣಮಿಸಿರುವುದಂತೂ ಸತ್ಯ. ಮುಂದೆ ಇವರೇ ಜೆಡಿಎಸ್‌ನಲ್ಲಿ ಮುಂದುವರಿಯುತ್ತಾರಾ ಇಲ್ಲ, ಜಿ.ಟಿ ದೇವೇಗೌಡರನ್ನು ಒಪ್ಪಿ ಪಕ್ಷ ಬಿಡುತ್ತಾರಾ ಎಂದು ಕಾದು ನೋಡಬೇಕಿದೆ.

ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ವಿಜಯ, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ರವಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಂಗಸ್ವಾಮಿ, ಪುರ ಸಭಾ ಅಧ್ಯಕ್ಷ ಮಂಜುನಾಥಸಿಂಗ್‌, ಜಿಪಂ ಸದಸ್ಯ ಜಯಕುಮಾರ್‌, ತಾಪಂ ಸದಸ್ಯ ರಾಮು, ಯೂನಿ ಯನ್‌ ಬ್ಯಾಂಕ್‌ ನಿರ್ದೇಶಕ ಹರೀಶ್‌, ಜೆಡಿಎಸ್‌ ಮುಖಂಡ ಅಪೂರ್ವ ಮೋಹನ್‌, ಬೆಕ್ಯಾ ಸತೀಶ್‌, ತಾಪಂ, ಪುರಸಭಾ ಸದಸ್ಯರು ಇದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.