ಹುಣಸೂರು: ಕಟ್ಟೆಮಳಲವಾಡಿ ಮಾರುಕಟ್ಟೆಯಲ್ಲಿ ತಂಬಾಕು ಹರಾಜಿಗೆ ಶಾಸಕ ಮಂಜುನಾಥ್ ಚಾಲನೆ

ಪ್ರಥಮ ದಿನ ಉತ್ತಮ ದರ್ಜೆಗೆ 202 ರೂ. ಗೆ ಹರಾಜು

Team Udayavani, Oct 11, 2022, 10:00 AM IST

2

ಹುಣಸೂರು: ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಹೊಗೆಸೊಪ್ಪು ಹರಾಜು ಪ್ರಕ್ರಿಯೆಗೆ ಶಾಸಕ ಎಚ್.ಪಿ.ಮಂಜುನಾಥ್ ರೈತ ಮುಖಂಡರೊಡಗೂಡಿ ಚಾಲನೆ ನೀಡಿದರು.

ಮೊದಲ ದಿನ ಗುಣಮಟ್ಟದ ತಂಬಾಕು ಕೆ.ಜಿ.ಗೆ 202 ರೂ. ಹರಾಜು ನಡೆಯಿತು. ಕಳೆದ ಬಾರಿ ಆರಂಭದ ದಿನ ಕೆ.ಜಿ.ಗೆ 185ರೂ.ಗೆ ಹರಾಜಾಗಿತ್ತು. ಕಳೆದ ವರ್ಷ 163.70 ರೂ. ಸರಾಸರಿ ಬೆಲೆ ಸಿಕ್ಕಿತ್ತು. ಮಾರುಕಟ್ಟೆಗೆ 27 ಬೇಲ್‌ ಬಂದಿದ್ದು, 28 ಕಂಪನಿಗಳು ಭಾಗವಹಿಸಿದ್ದರು.

ಕಟ್ಟೆಮಳಲವಾಡಿ ಪ್ಲಾಟ್ ಫಾರಂ 2 ಮತ್ತು 3 ಹಾಗೂ 64ರ ಹರಾಜು ಪ್ರಾಂಗಣಕ್ಕೆ ಮೊದಲ ದಿನ ಮಾರುಕಟ್ಟೆಗಾಗಮಿಸಿದ್ದ ಬೇಲ್‌ಗಳನ್ನು ಎಲೆಕ್ಟ್ರಾನಿಕ್‌ ಯಂತ್ರದ ಮೂಲಕ ಬಿಡ್‌ಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕ ಎಚ್.ಪಿ.ಮಂಜುನಾಥ್, ಎರಡು ವರ್ಷಗಳ ಕೋವಿಡ್-19 ಹಾಗೂ ಈ ವರ್ಷದ ಅತಿಯಾದ ಮಳೆಯಿಂದಾಗಿ ರೈತರು ಸಂಕಷ್ಟದ ನಡುವೆಯೂ ಸಾಲ ಮಾಡಿ ತಂಬಾಕು ಬೆಳೆ ಬೆಳೆದಿದ್ದು, ಇಡೀ ಬದುಕನ್ನೇ ಬೇಲ್‌ಗಳಾಗಿ ಪರಿವರ್ತಿಸಿ ಮಾರುಕಟ್ಟೆಗೆ ತಂದಿದ್ದಾರೆ. ಹರಾಜು ಪ್ರಕ್ರಿಯೆ ವೇಳೆ ಕಂಪನಿಯವರು ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ತಂಬಾಕು ಖರೀದಿ ಮಾಡಬೇಕು.  ಖರೀದಿ ಕಂಪನಿಗಳು ಹಾಗೂ ರೈತರ ನಡುವೆ ಸೇತುವೆಯಾಗಿ ತಂಬಾಕು ಮಂಡಳಿ ಅಧಿಕಾರಿಗಳು ಕಾರ್ಯನಿರ್ವಹಿಸಿ ರೈತರ ನೆರವಿಗೆ ನಿಲ್ಲಬೇಕೆಂದು ಸೂಚಿಸಿದರು.

ಕೆಲ ರೈತ ಮುಖಂಡರು ಮಾತನಾಡಿ, ಈ ಬಾರಿ ಸಾಲ ಮಾಡಿ 2-3 ಬಾರಿ ತಂಬಾಕು ಬೆಳೆಯಲು ರಸಗೊಬ್ಬರ ಬಳಸಿದ್ದು, ಪ್ರತಿ ವರ್ಷ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದೇವೆ. ಮಾರುಕಟ್ಟೆಯಲ್ಲಿ ಪಾರದರ್ಶಕತೆ ಜೊತೆಗೆ ಹಲವಾರು ಮೂಲ ಸೌಕರ್ಯದ ಸಮಸ್ಯೆಗಳಿದ್ದು, ತಕ್ಷಣವೇ ಸೌಕರ್ಯ ಕಲ್ಪಿಸಬೇಕೆಂದು ಅಧಿಕಾರಿಗಳು ಹಾಗೂ ಶಾಸಕರಲ್ಲಿ ಮನವಿ ಮಾಡಿದರು.

ರೈತರ ನೆರವಿಗೆ ಮಂಡಳಿ: ತಂಬಾಕು ಮಂಡಳಿ ಪ್ರಾದೇಶಿಕ ನಿರ್ದೇಶಕ ಲಕ್ಷ್ಮಣ್‌ರಾವ್‌ ಮಾತನಾಡಿ, ರಾಜ್ಯದ ಹೊಗೆಸೊಪ್ಪು ಬೆಳೆಗಾರರು ಅತಿಯಾದ ಮಳೆಯಿಂದ ತೊಂದರೆಗೊಳಗಾಗಿದ್ದಾರೆ. ಖರೀದಿ ಕಂಪನಿಗಳು ರೈತರ ನಿರೀಕ್ಷೆಯಂತೆ ಬೆಲೆ ನೀಡುವತ್ತ ಗಮನ ಹರಿಸಬೇಕೆಂದು ಸೂಚಿಸಿ, ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದ್ದು, ಮಂಡಳಿ ರೈತರ ಪರವಾಗಿದ್ದು, ಆತಂಕಕ್ಕೊಳಗಾಗಬೇಡಿ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲವೆಂಬ ಭರವಸೆ ನೀಡಿದರು. ಹುಡಿ ಮಾರಾಟಕ್ಕೂ ಅವಕಾಶ: ಇದೇ ಪ್ರಥಮ ಬಾರಿಗೆ ಹುಡಿ ಹೊಗೆಸೊಪ್ಪನ್ನು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಹಳ್ಳಿಗಳಲ್ಲಿ ದಳ್ಳಾಳಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡದಂತೆ ಆರ್.ಎಂ.ಓ.ಮನವಿ ಮಾಡಿದರು.

ಸಂಸದ-ನಿರ್ದೇಶಕರ ಗೈರು ರೈತರ ಆಕ್ರೋಶ:

ಸಂಸದ ಪ್ರತಾಪ ಸಿಂಹ, ತಂಬಾಕು ಮಂಡಳಿಯ ಹರಾಜು ನಿರ್ದೇಶಕಿ ಅಶ್ವಿನಿ ನಾಯ್ಡು ಗೈರಾಗಿದ್ದರು. ಕಳೆದ ಒಂದೂವರೆ ವರ್ಷಗಳಿಂದ ಮಾರುಕಟ್ಟೆಗೆ ಬರಲು ರೈತ ಮುಖಂಡರು ಮನವಿ ಮಾಡಿದರೂ ಮಾರುಕಟ್ಟೆಗೆ ಬಾರದ ಹರಾಜು ನಿರ್ದೇಶಕಿ ಅಶ್ವಿನಿ ನಾಯ್ಡುರನ್ನು ಕರೆಸಬೇಕೆಂದು ಆಕ್ರೋಶ ಹೊರ ಹಾಕಿದರು.

ಕಟ್ಟೆಮಳಲವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾರಾಣಿ‌ ತಗಡಯ್ಯ, ಮಾಜಿ ಅಧ್ಯಕ್ಷ ನಟರಾಜ್, ಸದಸ್ಯರು, ರೈತ ಮುಖಂಡರಾದ ಶಿವಣ್ಣೇಗೌಡ, ಚಂದ್ರೇಗೌಡ, ಎ.ಪಿ.ಸ್ವಾಮಿ, ರಾಮೇಗೌಡ, ರಾಜೇಗೌಡ, ಶ್ರೀಧರ, ಅಶೋಕ, ತಂಬಾಕು ಮಂಡಳಿಯ ಅಧಿಕಾರಿಗಳು ಹಾಗೂ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬೆಳೆಗಾರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.