ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ


Team Udayavani, Oct 17, 2021, 12:40 PM IST

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ಹುಣಸೂರು: ಗ್ರಾಮದ ಕೆರೆ ಬಳಿ ನಿರ್ಮಿಸಿಕೊಂಡಿರುವ 20 ಮನೆಗಳಿಗೆ ವಾರದಲ್ಲಿ ವಿದ್ಯುತ್ ಸೌಕರ್ಯ, ಖಾತೆ ಸೇರಿದಂತೆ ಗ್ರಾ.ಪಂ.ವತಿಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಯಿತು. ಅಲ್ಲದೆ ಕಂದಾಯ ಗ್ರಾಮವೆ ಹೊರತು ಬೇಚಾರಕ್ ಗ್ರಾಮವಲ್ಲವೆಂದು ಉಪತಹಸೀಲ್ದಾರ್ ವೆಂಕಟೇಶ್ ಪ್ರಕಟಿಸಿದರು.

ಶಾಸಕ ಎಚ್.ಪಿ.ಮಂಜುನಾಥ್ ನೇತೃತ್ವದಲ್ಲಿ, ಉಪವಿಭಾಗಾಧಿಕಾರಿ ವರ್ಣಿತ್‌ ನೇಗಿ ಸಮ್ಮುಖದಲ್ಲಿ ತಾಲೂಕಿನ ಗಾವಡಗೆರೆ ಹೋಬಳಿಯ ಮನುಗನಹಳ್ಳಿ ಗ್ರಾಮದಲ್ಲಿ  ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ನಮ್ಮ ಗ್ರಾಮ ಬೇಚಾರಕ್ ಗ್ರಾಮವಾಗಿದ್ದು, ಯಾವುದೇ ಸೌಲಭ್ಯಗಳು ಪಡೆಯಲಾಗುತ್ತಿಲ್ಲ. ಪಂಚಾಯ್ತಿಯಲ್ಲಿ ಖಾತೆಯಾಗುತ್ತಿಲ್ಲ. ವಿದ್ಯುತ್ ಸಂಪರ್ಕ  ಪಡೆಯಲು ಎನ್.ಓ.ಸಿ.ಸಿಗುತ್ತಿಲ್ಲ. ಸಾಲಸೌಲಭ್ಯ ಪಡೆಯಲಾಗುತ್ತಿಲ್ಲ.  ಹೀಗೆ ಹತ್ತಾರು ಸಮಸ್ಯೆಗಳನ್ನು ಪ್ರತಿಬಿಂಬಿಸಿದಾಗ ಗಾವಡಗೆರೆ ಉಪತಹಸೀಲ್ದಾರ್ ವೆಂಕಟೇಶ್‌ರವರು ಬಹಳ ದಿನಗಳಿಂದ ಇದೊಂದು ಬೇಚಾರಕ್ ಗ್ರಾಮವೆಂದು ಹೇಳುತ್ತಿದ್ದರಿಂದ ಕಳೆದ ಮೂರುದಿನಗಳಿಂದ ಗ್ರಾಮವನ್ನು ಸರ್ವೆಕಾರ್ಯ ನಡೆಸಲಾಗಿದೆ. 1976ರಲ್ಲಿ  ಜವರಯ್ಯನವರ ಅಳಿಯರವರು ಸರ್ವೆನಂ.19ರಲ್ಲಿ 2ಎಕರೆ ಭೂಮಿಯನ್ನು ದಾನ ಮಾಡಿದ್ದಾರೆ. ಆದರೆ 2ಎಕರೆ ಗ್ರಾಮಠಾಣಾ ಭೂಮಿಯನ್ನು ಆ ಕುಟುಂಬ ಅನುಭವಿಸುತ್ತಿದ್ದಾರೆ.

ಸರ್ವೆ ಮೂಲಕ ಈ ಗ್ರಾಮ ಕಂದಾಯ ಗ್ರಾಮವಾಗಿದೆ ಎಂದು ಧೃಡೀಕರಿಸಿದರು. ಅಲ್ಲದೆ ಸರ್ವೆ ನಂ.32ರಲ್ಲಿ ಸುಮಿತ್ರಬಾಯಿ ಹೆಸರಿನಲ್ಲಿದ್ದು, ಇಲ್ಲಿ 13 ಮನೆಗಳು, 16 ನಿವೇಶನಗಳಿದ್ದು, ಸಮಿತ್ರಾಬಾಯಿ ಕುಟುಂಬ ವಾಸಿಸುತ್ತಿರುವವರಿಗೆ ನೀಡಲು ಸಿದ್ದವಿದ್ದು, ಅವರಿಂದ ಪಡೆದುಕೊಳ್ಳಬೇಕಿದೆ ಹಾಗೂ ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸಲು ಕನಿಷ್ಟ 400 ಮತದಾರರಿರಬೇಕು, ಇಲ್ಲಿ ಬರೀ 135 ಮಂದಿ ಇದ್ದು, ಸಾದ್ಯವಿಲ್ಲವೆಂದರು.

ಇಂದಿನಿಂದಲೇ ಬಿಳಿಗೆರೆ ಗ್ರಾ.ಪಂ.ವತಿಯಿಂದ ಖಾತೆ ಸೇರಿದಂತೆ ದಾಖಲಾತಿ ನೀಡುವಂತೆ ಶಾಸಕ ಮಂಜುನಾಥರ ಸೂಚನೆಗೆ ತಾ.ಪಂ.ಇ.ಓ.ಗಿರೀಶ್ ಸ್ಥಳದಲ್ಲೇ ದಾಖಲಾತಿ ನೀಡಲು ಕ್ರಮವಹಿಸಬೇಕೆಂದು ಪಿಡಿಓ ಭವ್ಯರಿಗೆ ಸ್ಥಳದಲ್ಲೇ ಆದೇಶಿಸಿದರು.

ವಿದ್ಯುತ್ ಸಂಪರ್ಕಕ್ಕೆ ಆದೇಶ:

ಶಿವನಕೆರೆ ಬಳಿ 20ಮನೆಗಳು ನಿರ್ಮಿಸಿಕೊಂಡಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ನಿವಾಸಿಗಳು ಮಾಡಿದ ಮನವಿಗೆ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ. ವಾರದಲ್ಲಿ ವಿದ್ಯುತ್‌ಸೌಲಭ್ಯ ಕಲ್ಪಿಸಲು ಶಾಸಕರು ಚೆಸ್ಕಾಂ ಎ.ಇ.ಇ.ಸಿದ್ದಪ್ಪರಿಗೆ ಸೂಚಿಸಿದರು.

ಪಡಿತರ ಉಪಕೇಂದ್ರ ತೆರೆಯಿರಿ:

ಸತ್ಯಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಮಾತನಾಡಿ ಮನುಗನಹಳ್ಳಿಯನ್ನು ಕಂದಾಯ ಗ್ರಾಮವಾಗಿಸುವ ಜೊತೆಗೆ ಪಡಿತರ ಉಪಕೇಂದ್ರ ಹಾಗೂ ಮತಗಟ್ಟೆ ಸ್ಥಾಪಿಸಬೇಕು. ಮನೆಗಳ ಹಕ್ಕುಪತ್ರ ನೀಡಬೇಕು. ಕಟ್ಟೆಮಳಲವಾಡಿ ಅಣೆಕಟ್ಟೆ ವ್ಯಾಪ್ತಿಯ ನಾಲೆಗಳ ಹೂಳೆತ್ತಬೇಕು. ಹುಲ್ಯಾಳು ಕೆರೆಗೆ ನೀರು ತುಂಬಿಸಲು ಕ್ರಮವಹಿಸಬೇಕೆಂದರೆ, ಗಾವಡಗೆರೆ ಗ್ರಾ.ಪಂ.ಮಾಜಿ ಅಧ್ಯಕ್ಷ ಹೊನ್ನಪ್ಪರಾವ್‌ಕಾಳಿಂಗೆ ತುರುಕನಕಟ್ಟೆ ಸರ್ವೆ ನಂ.1ರಲ್ಲಿ 562ಎಕರೆ ಭೂಮಿ ಇದ್ದು, ದುರಸ್ತಾಗದೆ ಸಾಲಸೌಲಭ್ಯ ಸಿಗುತ್ತಿಲ್ಲ. ಪೋಡಿ ಮುಕ್ತ ಗ್ರಾಮವನ್ನಾಗಿಸಬೇಕೆಂದು ಮನವಿ ಮಾಡಿದರು.

ರೈತಮುಖಂಡ ರಾಮೇಗೌಡ ಗೊಬ್ಬರದ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಯೂರಿಯಾ ಮತ್ತಿತರ ರಸಗೊಬ್ಬರ ಮಾರಾಟವಾಗುತ್ತಿದ್ದು, ಕ್ರಮವಹಿಸಬೇಕೆಂದು ಕೋರಿದರು. ಹಲವಾರು ಮಂದಿ ಸಮಸ್ಯೆಗಳನ್ನು ಹೇಳಿಕೊಂಡರು.

ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ ಇಂದಿನಿಂದಲೇ ಪಂಚಾಯ್ತಿ ಮೂಲಕ ಖಾತೆ ಮಾಡಿಕೊಡಬೇಕು. ಅಧಿಕಾರಿಗಳಲ್ಲಿ ವೈರುದ್ಯ ಬಿಟ್ಟು ಮೊದಲು ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಿಕೊಡಿ. ಆದಷ್ಟು ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಬೇಕೆಂದು ತಾಕೀತುಮಾಡಿದರು. ಇದೇ ವೇಳೆ 16ಮಂದಿ ಫಲಾನುಭವಿಗಳಿಗೆ ವಿವಿಧ ಮಾಶಾಸನದ ಆದೇಶಪತ್ರ ವಿತರಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವರ್ಣಿತ್‌ನೇಗಿ, ತಹಸೀಲ್ದಾರ್ ಡಾ.ಅಶೋಕ್, ತಾ.ಪಂ.ಇ.ಓ.ಗಿರೀಶ್, ಗ್ರಾ.ಪಂ.ಅಧ್ಯಕ್ಷ ಮೋಹನ್, ಉಪಾಧ್ಯಕ್ಷೆ ರುಕ್ಮಿಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಬೇಕಾಬಿಟ್ಟಿ ಸಭೆ ನಡೆಸಬೇಡಿ ;ವೇದಿಕೆ ನಿರ್ಮಿಸದೆ ಸಮಸ್ಯೆ ಬಗೆಹರಿಸಿ:

ಜನರ ಕಲ್ಯಾಣಕ್ಕಾಗಿರುವ ಕಾರ್ಯಕ್ರಮಗಳಲ್ಲಿ ವೇದಿಕೆ ನಿರ್ಮಿಸದೆ, ಇಲಾಖಾವಾರು ಕೌಂಟರ್ ತೆರೆಯಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಇದ್ದು ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಿ, ಜನರಿಂದ ಬರುವ ಅರ್ಜಿಗಳಿಗೆ ಹಿಂಬರಹ ನೀಡುವ ಬದಲು ಆದಷ್ಟು ಬಗೆಹರಿಸುವ ಪ್ರಯತ್ನವಾಗಬೇಕು ಹಾಗಾದಲ್ಲಿ ಮಾತ್ರ ಕಾರ್ಯಕ್ರಮಕ್ಕೆ ಅರ್ಥಬರಲಿದೆ ಈ ಬಗ್ಗೆ ಮುಂದಿನ ಸಭೆಯಲ್ಲಿ ಸಮರ್ಪಕವಾಗಿ ಕಾರ್ಯಕ್ರಮ ಆಯೋಜಿಸುವಂತೆ ಶಾಸಕ ಮಂಜುನಾಥ್ ಸೂಚಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.