ಶಾಸಕ ಮಂಜುನಾಥ್‌ ಆರೋಪಗಳು ಸಂಪೂರ್ಣ ಸುಳ್ಳು


Team Udayavani, Jan 2, 2020, 3:00 AM IST

shasaka-man

ಹುಣಸೂರು: ತಮ್ಮ ಶಾಸಕತ್ವದ ಅವಧಿಯಲ್ಲಿ ತಾಲೂಕಿಗೆ 298 ಕೋಟಿ ರೂ.ಗಳ ಅನುದಾನ ತಂದಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಈ ಸಂಬಂಧ ಮಾಜಿ ಶಾಸಕ ಅಡಗೂರು ಎಚ್‌.ವಿಶ್ವನಾಥ್‌, ಕಾಮಗಾರಿಗಳಿಗೆ ಇಲಾಖಾವಾರು ಅನುದಾನದ ಬಗ್ಗೆ ದಾಖಲೆ ಬಿಡುಗಡೆ ಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈಗಿನ ಶಾಸಕ ಎಚ್‌.ಪಿ.ಮಂಜುನಾಥ್‌, ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ವಿರುದ್ಧ ತಾಲೂಕಿಗೆ ಯಾವುದೇ ಅನುದಾನ ತಂದಿಲ್ಲವೆಂದು ಲಘುವಾಗಿ ಆರೋಪಿಸಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಬೇಕಿದ್ದರೆ ಕಾಮಗಾರಿ ನಡೆಯುತ್ತಿರುವ ಗ್ರಾಮಗಳಿಗೆ ಬರಲಿ. ನಮ್ಮ ಕಾರ್ಯಕರ್ತರು, ಮುಖಂಡರು ಮನದಟ್ಟು ಮಾಡಿಕೊಡಲಿದ್ದಾರೆ ಎಂದು ತಿರುಗೇಟು ನೀಡಿದರು.

ಎಲ್ಲ ವಿಚಾರಗಳು ಗೊತ್ತಿದ್ದರೂ ನನ್ನ ಅಭಿವೃದ್ಧಿಯನ್ನು ಮರೆ ಮಾಚಲು ಸುಳ್ಳು ಹೇಳುತ್ತಿದ್ದಾರೆ. ಇನ್ನು ಮುಂದೆ ಬಹಿರಂಗವಾಗಿ ಲಘುವಾಗಿ ಮಾತನಾಡಬೇಡಿ, ಚುನಾವನೆ ಫಲಿತಾಂಶದ ದಿನವೇ ತಾವು ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವೆನೆಂದು ಹೇಳಿದ್ದೆ, ಈಗಲೂ ಅದಕ್ಕೆ ಬದ್ಧನಿದ್ದೇನೆ. ವಿನಾಕಾರಣ ಅಧಿಕಾರಿಗಳಿಗೆ ತೊಂದರೆ ನೀಡಬೇಡಿ ಎಂದು ಎಚ್ಚರಿಕೆ ನೀಡಿದರು.

49 ಕೆರೆಗಳ ನೀರುತುಂಬಿಸುವ ಯೋಜನೆ: ತಮ್ಮ ಅವಧಿಯಲ್ಲಿ ತಾಲೂಕಿನ ಲಕ್ಷ್ಮಣತೀರ್ಥ ನದಿಯಿಂದ ಏತನೀರಾವರಿ ಮೂಲಕ ಮರದೂರು ಕುಪ್ಪೆ-ಕೊಳಗಟ್ಟ ಮಾರ್ಗವಾಗಿ ಚೈನ್‌ ಲಿಂಕ್‌ ಮಾದರಿಯಲ್ಲಿ 49 ಕೆರೆಗಳಿಗೆ ನೀರು ತುಂಬಿಸುವ 63.50 ಕೋಟಿ ರೂ. ವೆಚ್ಚದ ಕಾಮಗಾರಿಗೆ 2018-19ರ ಬಜೆಟ್‌ನಲ್ಲಿ ಸೇರಿಸಿದೆ. ಕಟ್ಟೆಮಳಲವಾಡಿ ನಾಲಾ ಆಧುನೀಕರಣ ಯೋಜನೆಗೆ 37.80 ಕೋಟಿ ಮಂಜೂರಾಗಿದೆ.

ಅಲ್ಲದೆ ಚಿಲ್ಕುಂದ ಏತ ನೀರಾವರಿ ಯೋಜನೆಯಡಿ 14 ಕೆರೆಗಳಿಗೆ ನೀರು ತುಂಬಿಸುವ 19 ಕೋಟಿ ರೂ. ವೆಚ್ಚದ ಕಾಮಗಾರಿಗೂ ಅನುಮೋದನೆ ದೊರೆತಿದ್ದು, ಈ ಹಿಂದೆ ಇದೇ ಯೋಜನೆ ಕಳಪೆ ಕಾಮಗಾರಿಯಿಂದಾಗಿ ಹಳ್ಳ ಹಿಡಿದಿತ್ತು. ಇದರಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಶಾಸಕರ ಕುಟುಂಬದವರೇ ಹಣ ಮಾಡಿಕೊಂಡಿದ್ದಾರೆಂದು ಗಂಭೀರ ಆರೋಪ ಮಾಡಿದರು.

ವಿವಿಧ ಕಾಮಗಾರಿಗಳಿಗೆ ಅನುದಾನ: 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ 10.70 ಕೋಟಿ ರೂ., ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 64 ಕೋಟಿ ರೂ. ಮಂಜೂರಾಗಿದೆ. ಅಲ್ಲದೆ 2019-20ನೇ ಸಾಲಿನಲ್ಲಿ ಯಡಿಯೂರಪ್ಪನವರು 60 ಗ್ರಾಮಗಳ ಸಾಮಾನ್ಯ ವರ್ಗಗಳ ಬೀದಿಗಳ ಅಭಿವೃದ್ಧಿ ಗೆ 35 ಕೋಟಿರೂ ಹಾಗೂ ವಿವಿಧ ಕಾಲೇಜುಗಳ ಅಭಿವೃದ್ಧಿಗೆ 11 ಕೋಟಿ ರೂ. ಹಾಗೂ ನಗರಸಭೆಗೆ 5 ಕೋಟಿ ರೂ. ವಿಶೇಷ ಅನುದಾನ,

ಮೋದೂರು ಗೌರಿಕೆರೆ ತಡೆಗೋಡೆ, ಹಾಗೂ ರಸ್ತೆ ನಿರ್ಮಾಣಕ್ಕೆ 1.62 ಕೋಟಿ ರೂ. ಹಾಗೂ ತಾಲೂಕಿನ ವಿವಿಧ ವಿದ್ಯುತ್‌ ಸಬ್‌ ಸ್ಟೇಷನ್‌ ಮತ್ತು ಕಚೇರಿ ಕಟ್ಟಡ ನಿರ್ಮಾಣಕ್ಕೆ 5,90 ಕೋಟಿ ರೂ. ಬಿಡುಗಡೆಯಾಗಿದೆ. ಮನುಗನಹಳ್ಳಿ, ನಲ್ಲೂರುಪಾಲ, ಚಿಲ್ಕುಂದ, ಹರೀನಹಳ್ಳಿಗಳಲ್ಲಿ ಬಸ್‌ನಿಲ್ದಾಣ ನಿರ್ಮಿಸಲು ಒಂದು ಕೋಟಿ ರೂ. ಮಂಜೂರು ಮಾಡಿಸಿದ್ದೇನೆ ಎಂದು ಹೇಳಿದರು. ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಯೋಗಾನಂದಕುಮಾರ್‌, ಮುಖಂಡರಾದ ಶಿವಶೇಖರ್‌, ಸತ್ಯಪ್ಪ, ಪ್ರಭು ಇದ್ದರು.

ಕಬಿನಿಯಿಂದ ಕೋಟೆ-ಹುಣಸೂರಿಗೆ ನೀರು: ಹುಣಸೂರು ಹಾಗೂ ಎಚ್‌.ಡಿ.ಕೋಟೆ ತಾಲೂಕಿನ ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರೊದಗಿಸುವ 270 ಕೋಟಿ ರೂ. ವೆಚ್ಚದ ಬೃಹತ್‌ ಯೋಜನೆ ರೂಪಿಸಲಾಗಿದೆ. ಡಿಪಿಆರ್‌ ಆಗಿದ್ದು, ಸಚಿವ ಸಂಪುಟದಲ್ಲಿ ಮಂಜೂರಾತಿ ದೊರೆಯಬೇಕಿದೆ. ಹುಣಸೂರು ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣದ ಯೋಜನೆ ಸಿದ್ದರಾಮಯ್ಯರ ಅವಧಿಯಲ್ಲಿ ಮಂಜೂರಾಗಿತ್ತಷ್ಟೆ, ಅನುದಾನ ಬಿಡುಗಡೆಯಾಗಿರಲಿಲ್ಲ. ಭೂಮಿಯನ್ನು ಮಂಜೂರು ಮಾಡಿಸಿ, ಆಡಳಿತಾತ್ಮಕ ಮಂಜೂರಾತಿ, ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಮಾಡಿಸಿದ್ದು ತಾವೆಂದು ಹೇಳಿಕೊಂಡರು.

ರಾಜ್ಯಕ್ಕೆ ಯೋಜನೆ ಕೊಟ್ಟವನು ನಾನು: ಇದೇ ಪ್ರಥಮ ಬಾರಿಗೆ ಹಳ್ಳಿಗಳ ಸಾಮಾನ್ಯ ವರ್ಗದ ಬೀದಿಗಳ ಅಭಿವೃದ್ದಿಗೆ ಅನುದಾನ ತರುವ ಜೊತೆಗೆ ತಾಲೂಕನ್ನು ಯುನಿಟ್‌ ಆಗಿ ಪರಿವರ್ತಿಸಿಕೊಂಡು ಸಮಗ್ರ ಅಭಿವೃದ್ದಿಗೆ 60 ಕೋಟಿ ರೂ ಮುಂಜೂರು ಮಾಡಿಸಿ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಇದು ರಾಜ್ಯದಲ್ಲೇ ಪ್ರಥಮವಾಗಿದ್ದು, ಉಳಿದೆಲ್ಲೆಡೆಯೂ ಆರಂಭವಾಗಿದೆ ಎಂದರು.

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.