ಮೈಸೂರು ಡಿಸಿಯಾಗಿ ವರ್ಗಾವಣೆ ರೋಹಿಣಿ ಸಿಂಧೂರಿಗೆ ನೀಡಿದ ಗಿಫ್ಟ್: ಸಾ.ರಾ.ಮಹೇಶ್ ಆರೋಪ


Team Udayavani, Oct 1, 2020, 1:15 PM IST

ಮೈಸೂರು ಡಿಸಿಯಾಗಿ ವರ್ಗಾವಣೆ ರೋಹಿಣಿ ಸಿಂಧೂರಿಗೆ ನೀಡಿದ ಗಿಫ್ಟ್: ಸಾ.ರಾ.ಮಹೇಶ್ ಆರೋಪ

ಮೈಸೂರು: ಈ ಮೊದಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿರುವುದು ಗಿಫ್ಟ್ ನೀಡಿದಂತಾಗಿದೆ ಎಂದು ಶಾಸಕ ಸಾ. ರಾ. ಮಹೇಶ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ನೆರೆಯ ಆಂಧ್ರಪ್ರದೇಶಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆಂಧ್ರಪ್ರದೇಶದ ತಿರುಮಲದಲ್ಲಿನ ಕರ್ನಾಟಕ ರಾಜ್ಯದ ಛತ್ರಕ್ಕೆ ಸೇರಿದ ಜಾಗದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗಳ ಅಂದಾಜುಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ವಿಚಾರದಲ್ಲಿ ಕರ್ನಾಟಕದ ಹಣವನ್ನು ಆಂಧ್ರದ ಪಾಲಾಗುವಂತೆ ರೋಹಿಣಿ ಸಿಂಧೂರಿ ಮಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಛತ್ರಕ್ಕೆ ಸೇರಿದ 7.05 ಎಕರೆ ಜಾಗದಲ್ಲಿ ಕಲ್ಯಾಣಮಂಟಪ ಅಭಿವೃದ್ಧಿಗೆ ಸಂಬಂಧಿಸಿದ 200 ಕೋಟಿಗಳ ವೆಚ್ಚದ ಕಾಮಗಾರಿಯ ವಿನ್ಯಾಸವನ್ನು ಮೆಸರ್ಸ್ ಗಾಯತ್ರಿ ಅಂಡ್ ನಮಿತ್ ಆರ್ಕಿಟೆಕ್ಟ್ಸ್ ಅವರು ತಯಾರಿಸಲಿದ್ದಾರೆ. ಇದರ ಇಂಜಿನಿಯರಿಂಗ್ ವಿನ್ಯಾಸ ಮತ್ತು ತಾಂತ್ರಿಕ ಸೇವೆಗಳನ್ನು ಮೆಸರ್ಸ್ ಡಿಸೈನ್ ವೆಂಚರ್ ಕನ್ಸಲ್ಟೆಂಟ್ ಪ್ರೈವೇಟ್ ಲಿಮಿಟೆಡ್ ಅವರಿಗೆ ಯೋಜನೆಯ ವೃತ್ತಿ ಶುಲ್ಕ 2.5% ರಂತೆ ಎರಡೂ ಸೇರಿ ಅಂದಾಜು ಮೊತ್ತಕ್ಕೆ 5% ರಂತೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಯಡಿ ವಿನಾಯಿತಿ ನೀಡುವ ಪ್ರಸ್ತಾವನೆಯಾಗಿರುತ್ತದೆ. ಇದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಆಂಧ್ರಪ್ರದೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜಾಗ ನಮ್ಮದು, ಹಣ ನಮ್ಮದಾಗಿದ್ದು, ನಮ್ಮಲ್ಲೂ ವಿನ್ಯಾಸಕಾರರು ಇರಲಿಲ್ಲವಾ? ನಮ್ಮ ಲೋಕೋಪಯೋಗಿ ಇಲಾಖೆ ಇರಲಿಲ್ವಾ ಎಂದು ಪ್ರಶ್ನಿಸಿದರು.

ಸದರಿ ಕಾಮಗಾರಿಯನ್ನು ರಾಜ್ಯದ ಲೋಕೋಪಯೋಗಿ ಇಲಾಖೆಗೆ ವಹಿಸಬಹುದಿತ್ತು. ಆದರೆ ಎಲ್ಲವನ್ನೂ ಟಿಟಿಡಿ ಮೇಲ್ವಿಚಾರಣೆ ಮೂಲಕ ಆಂಧ್ರಪ್ರದೇಶದ ಖಾಸಗಿ ಸಂಸ್ಥೆಗೆ ರೋಹಿಣಿ ಸಿಂಧೂರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದರ ಪ್ರತಿಫಲವಾಗಿ ರೋಹಿಣಿ ಸಿಂಧೂರಿಯವರಿಗೆ ಮೈಸೂರು ಜಿಲ್ಲಾಧಿಕಾರಿ ಸ್ಥಾನ ಗಿಫ್ಟ್ ನಂತೆ ಸಿಕ್ಕಿದೆ ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.