ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಕಾರಣ: ಎಚ್ ವಿಶ್ವನಾಥ್ ಆರೋಪ
Team Udayavani, Aug 14, 2020, 12:05 PM IST
ಮೈಸೂರು: ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ. ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು ಎಂದು ಶಾಸಕ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್, ಈ ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ ಎಂದು ಆರೋಪಿಸಿದರು.
ಸಿಎಎ ಹೋರಾಟದಲ್ಲಿ ವಿಪಕ್ಷಗಳು ಜನರನ್ನು ಉದ್ರೇಕಗೊಳಿಸಿದ್ದು ಇನ್ನೂ ಬಿಸಿ ಕೆಂಡವಾಗಿ ಉಳಿದಿದೆ. ಆ ಕೆಂಡವನ್ನೇ ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದರು.
ಶಾಸಕ ಜಮೀರ್ ಅಹಮ್ಮದ್ ಬೆಂಕಿ ಬಿದ್ದ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ. ಬದಲಿಗೆ ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನ ಮಾಲೆ ಹಾಕಿ ಸ್ವಾಗತಿಸಿದ್ದರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಹೋಗಿದ್ದರಾ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ