ಅನಿಲ ಪೈಪ್‌ಲೈನ್ ಯೋಜನೆ ಆಗಬೇಕು,ಇದರಿಂದ ಬಡಜನರಿಗೆ ಅನುಕೂಲವಾಗಲಿದೆ: ಎಚ್.ವಿಶ್ವನಾಥ್


Team Udayavani, Jan 30, 2022, 7:01 PM IST

ಅನಿಲ ಪೈಪ್‌ಲೈನ್ ಯೋಜನೆ ಆಗಬೇಕು,ಇದರಿಂದ ಬಡಜನರಿಗೆ ಅನುಕೂಲವಾಗಲಿದೆ: ಎಚ್.ವಿಶ್ವನಾಥ್

ಹುಣಸೂರು:  ಕ್ಷೇತ್ರದ ಕೆಲಸ ಆಗದಿದ್ದಲ್ಲಿ, ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ  ಕಚೇರಿ ಮುಂದೆ ಧರಣಿ ನಡೆಸುವುದು ತರವಲ್ಲಾ, ಶಾಸಕರು ಸದನದಲ್ಲಿ ಗುಟುರು ಹಾಕಬೇಕು, ಅಭಿವೃದ್ದಿಯಾಗದಿದ್ದಲ್ಲಿ ಪ್ರತಿಭಟನೆಗೆ ನಿಮ್ಮೊಂದಿಗೆ ನಾನು ಸಹ ಕೈಜೋಡಿಸುವೆನೆಂದು  ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಶಾಸಕ ಎಚ್.ಪಿ.ಮಂಜುನಾಥರು ಲೋಕೋಪಯೋಗಿ ಇಲಾಖೆ ಇ.ಇ.ಕಚೇರಿ ಎದುರು ಧರಣಿ ನಡೆಸಿರುವುದು ಸರಿಯಲ್ಲ. ಕಾರ್ಯಪಾಲಕ ಇಂಜಿನಿಯರ್ ಅನುಷ್ಟಾನಗೊಳಿಸುವ ಅಧಿಕಾರಿಯಷ್ಟೆ, ಅನುದಾನ ಬರದಿದ್ದಲ್ಲಿ ಅವರೇನು ಮಾಡುತ್ತಾರೆ. ಕೊರೊನಾದಿಂದಾಗಿ ಸರಕಾರದ ಅನುದಾನ ತಡವಾಗುತ್ತಿದೆ. ಈ ಬಗ್ಗೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಚುರುಕು ಮುಟ್ಟಿಸಬೇಕು. ನಾನು ಸಹ ತಾಲೂಕಿನ ಪರವಾಗಿರುವವನು, ಈತಾಲೂಕಿನ ಜನರ ಋಣ ನನ್ನ ಮೇಲಿದೆ. ತಾವು ರಾಜಿನಾಮೆ ನೀಡಿದ್ದರಿಂದಾಗಿ ಶಾಸಕರಾಗಿದ್ದೀರಾ. ಶಾಸಕರು ಜನಹಿತಕ್ಕಾಗಿ ದುಡಿಯಬೇಕು. ಅದುಬಿಟ್ಟು ಧರಣಿ ನಡೆಸುವುದು ಸರಿಯಲ್ಲ.  ಅನ್ಯಾಯವಾಗಿದ್ದಲ್ಲಿ ಇಬ್ಬರೂ ಸೇರಿ ಪ್ರತಿಭಟನೆ ಮಾಡೋಣ, ಕ್ಷೇತ್ರದ ಅಭಿವೃದ್ದಿಗೆ ಶಾಸಕರು, ತಾವು ಸಂಸದರು ಒಟ್ಟಾಗಿ ಸೇರಿ ಅಭಿವೃದ್ದಿ ಪಡಿಸೋಣವೆಂದು ಸಲಹೆ ನೀಡಿದರು.

ಚತುಷ್ಪತ ರಸ್ತೆ ನನ್ನ ಅವಧಿಯದ್ದು:

ತಾವು ಸಂಸದರಾಗಿದ್ದ ವೇಳೆ ಬೆಂಗಳೂರು-ಮೈಸೂರು ಹಾಗೂ  ಮೈಸೂರು-ಮಡಿಕೇರಿ ಹೆದ್ದಾರಿಯನ್ನು ಪ್ರಧಾನಿ ಮನಮೋಹನ್‌ಸಿಂಗ್‌ರ ಅವಧಿಯಲ್ಲಿ ಭೂಸಾರಿಗೆ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಅವಧಿಯಲ್ಲಿ 3 ಸಾವಿರ ಕೋಟಿರೂ ವೆಚ್ಚದ ಚತುಷ್ಪತ ರಸ್ತೆಯ ಯೋಜನೆಯನ್ನು ಮಂಜೂರು ಮಾಡಿಸಿದ್ದೆ. ಜೆಡಿಎಸ್ ಶಾಸಕನಾಗಿದ್ದ ಅವಧಿಯಲ್ಲಿ ಮೈಸೂರು ಹೆದ್ದಾರಿಯ ಚಿಕ್ಕಾಡಿಗನಹಳ್ಳಿಯಿಂದ ಹುಣಸೂರು ನಗರಕ್ಕೆ ಸಮೀಪದ ಹಾಳಗೆರೆವರೆಗೆ 22 ಕೋಟಿರೂ ವೆಚ್ಚದ ರಸ್ತೆ ಅಭಿವೃದ್ದಿ ಮತ್ತು 27 ಕೋಟಿ ವೆಚ್ಚದಲ್ಲಿ ಹುಣಸೂರು ನಗರದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವ ಯೋಜನೆ ಮಂಜೂರು ಮಾಡಿಸಿದ್ದೆ. ಬದಲಾದ ಸರಕಾರ, ತಾಂತ್ರಿಕ ಕಾರಣದಿಂದಾಗಿ ತಡವಾಗಿದೆಯಷ್ಟೆ. ಆದರೆ ಇವೆಲ್ಲವನ್ನೂ ನಾನೇ ಮಾಡಿಸಿದ್ದು ಎಂಬಂತೆ ಸಂಸದ ಪ್ರತಾಪಸಿಂಹ ಸುಳ್ಳು ಹೇಳುತ್ತಿದ್ದಾರೆ. ಇಷ್ಟೆಅಲ್ಲ ಎಲ್ಲವನ್ನೂ ನಾನೇ ಮಾಡಿಸಿರೋದು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆಂದು ಛೇಡಿಸಿದರು.

ಅನಿಲ ಪೈಪ್‌ಲೈನ್ ಆಗಲೇಬೇಕು:

ಇದೀಗ ಮೈಸೂರಿನಲ್ಲಿ  ಅಳವಡಿಸುತ್ತಿರುವ ಗ್ಯಾಸ್ ಪೈಪ್‌ಲೈನ್ ಕಾಮಗಾರಿಗೆ ಶಾಸಕರಾದ ನಾಗೇಂದ್ರ, ರಾಮದಾಸ್ ವಿರೋಧ ವ್ಯಕ್ತಪಡಿಸುತ್ತಿರುವುದು ತರವಲ್ಲ, ಜಿಯೋ ಕಂಪನಿಯವರು ರಸ್ತೆ ಅಗೆದಾಗ ಎಲ್ಲಿಗೋಗಿದ್ರು ಇವರೆಲ್ಲಾ. ಇದೊಂದು ಗ್ರಾಹಕರ ಸ್ನೇಹಿ ಯೋಜನೆಯಾಗಿದ್ದು, ಸಾವಿರ ರೂನ ಸಿಲೆಂಡರ್ 500 ರೂಗೆ ಗ್ಯಾಸ್ ದೊರೆಯಲಿದೆ ಇದರಿಂದ ಬಡಜನರಿಗೆ ಅನುಕೂಲವಾಗಲಿದೆ. ಪ್ರತಿಷ್ಟೆ ಬಿಟ್ಟು ಪೈಪ್ ಲೈನ್ ಅಳವಡಿಸಲು ಸಹಕರಿಸಬೇಕು.

ರಸ್ತೆ ಗುಂಡಿ ಬೀಳಲಿದೆ ಎಂಬುದರಲ್ಲಿ ಅರ್ಥವಿಲ್ಲ.  ಗ್ಯಾಸ್‌ಲೈನ್‌ನ್ನು ಸಂಸದ ನಾನೇ ತಂದಿದ್ದೇನೆAದು ಕೊಚ್ಚಿಕೊಳ್ಳುವುದರಲ್ಲಿ ಅರ್ಥವಿಲ್ಲ. ಇದು ಸಂಸದರ ಯೋಜನೆಯಲ್ಲ, ಕೇಂದ್ರದ ಮೋದಿ ಸರಕಾರದ ನಿರಂತರ ಯೋಜನೆಗಳಲ್ಲೊಂದು ಎಂದು ಸಂಸದರ ಕಾಲೆಳೆದರು.

2023 ರ ಚುನಾವಣೆ ಬೊಮ್ಮಾಯಿ ನೇತೃತ್ವ: ಮುಖ್ಯ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಯತ್ನಾಳ್ ಮತ್ತಿತರರಿಂದ ಸರಕಾರಕ್ಕೆ ತೊಂದರೆ ಇದೆಯೇ ಎಂಬ ಪ್ರಶ್ನೆಗೆ ಹಾಗೇನೂ ಆಗಲ್ಲ. ಬಸವರಾಜ ಬೊಮ್ಮಯಾಯಿಯವರು ಕೋವಿಡ್-೧೯ ಸಂಕಷ್ಟದಲ್ಲೂ ಸಾಕಷ್ಟು ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಬೊಮ್ಮಾಯಿ ನೇತೃತ್ವದ ಸರಕಾರ ಅವಧಿ ಪೂರೈಸಲಿದೆ. 2023 ರ ಚುನಾವಣೆಯೂ ಬೊಮ್ಮಾಯಿಯವರ ನೇತೃತ್ವದಲ್ಲೇ ನಡೆಯಲಿದೆ.

ಯಾರೇನು ಪತಿವ್ರತಾ ಶಿರೋಮಣಿಗಳಲ್ಲ:

ತಾವು ಹಿಂದೆ 17 ಪಕ್ಷಾಂತರ ಶಾಸಕರ ನೇತೃತ್ವ ವಹಿಸಿದ್ದು, ಇದೀಗ ಮತ್ತೆ ಪಕ್ಷಾಂತರ ಮಾತು ಕೇಳಿ ಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಶಾಸಕರು ನಮ್ಮ ಪಕ್ಷ ಸೇರ್ತಾರೆ ಎಂದು ಹೇಳಿಕೆ ನೀಡುವ ರಮೇಶ್ ಜಾರಕಿಹೋಳಿ, ಸಿದ್ದರಾಮಯ್ಯ, ನಮ್ಮ ಬಿಜೆಪಿ ಅಧ್ಯಕ್ಷರು ಸೇರಿದಂತೆ ಪಕ್ಷಾಂತರ ಕುರಿತು ಮಾತನಾಡುತ್ತಿರುವ ಪತೀವ್ರತಾ ಶಿರೋಮಣಿಗಳ ಬಗ್ಗೆ ಶೀಘ್ರದಲ್ಲೇ ಬುತ್ತಿ ಬಿಚ್ಚಿಡಲಿದ್ದೇನೆ ಯಾರೇನು ಪತಿವ್ರತಾಶಿರೋಮಣಿಗಳಾ ಎಂದು ಪಕ್ಷಾಂತರ ಹೇಳಿಕೆ ನೀಡುವವರ ಬಗ್ಗೆ ತೀಷ್ಣವಾಗಿ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಟಿಯಲ್ಲಿ ಹುಡಾ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಶಿವಕುಮಾರ್ ಇದ್ದರು.

 

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.