ಮೈಸೂರಲ್ಲಿ ಮಾದರಿ ಕೋವಿಡ್‌ಕೇರ್‌ ಸೆಂಟರ್‌


Team Udayavani, Oct 10, 2020, 2:53 PM IST

MYSURU-TDY-1

ನಗರದ ಮಂಡಕಳ್ಳಿಯಲ್ಲಿರುವ ಕೆಎಸ್‌ಒಯು ಕಟ್ಟಡದಲ್ಲಿ ತೆರೆದಿರುವ ಕೋವಿಡ್‌ ಆರೈಕೆ ಕೇಂದ್ರ.

ಮೈಸೂರು: ನಗರದ ಹೊರವಲಯದ ಮಂಡಕಳ್ಳಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅಕಾಡೆಮಿಕ್‌ ಭವನದಲ್ಲಿ ಜಿಲ್ಲಾಡಳಿತ ತೆರೆದಿರುವ ಕೋವಿಡ್‌ ಕೇರ್‌ ಸೆಂಟರ್‌ ಇತರೆ ಕೋವಿಡ್‌  ಕೇರ್‌ ಕೇಂದ್ರಗಳಿಗೆ ಮಾದರಿಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದರೂ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಪ್ರತಿದಿನ ಹೆಚಾÌಗುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಮಂಡಕಳ್ಳಿ ಕೋವಿಡ್‌ ಕೇರ್‌ ಕೇಂದ್ರವೂ ಒಂದು. ಇಲ್ಲಿ ರೋಗ ಲಕ್ಷಣ ರಹಿತ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ರುಚಿಯಾದಊಟೋಪಚಾರ, ಮನರಂಜನಾ ವ್ಯವಸ್ಥೆಮುಂತಾದ ಸೌಲಭ್ಯಗಳ ಜೊತೆಗೆ ಚಿಕಿತ್ಸೆನೀಡಲಾಗುತ್ತಿದೆ ಎಂಬುದು ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರ ಮಾತು.

ಅಕಾಡೆಮಿಕ್‌ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್‌ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಛಗೊಳಿಸಲು ಅಗತ್ಯ ವ್ಯವಸ್ಥೆ ಎಲ್ಲವನ್ನು ಕಲ್ಪಿಸಿರುವುದು ವಿಶೇಷ.

ವೈದ್ಯರಿಗೆ ಪ್ರತ್ಯೇಕ ವಿಭಾಗ: ರೋಗಿಗಳು ಸುರಕ್ಷತೆಯಷ್ಟೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೂಆದ್ಯತೆ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್‌  ವೈದ್ಯರು, ಸ್ಟಾಫ್ ನರ್ಸ್‌ ಹಾಗೂ ಆಡಳಿತ ಸಿಬ್ಬಂದಿ ಇರುತ್ತಾರೆ.

ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ: ಕೇಂದ್ರದಲ್ಲಿ ಶುಚಿತ್ವಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುಚಿತ್ವದ ಕೊರತೆನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನುನೇಮಿಸಲಾಗಿದೆ.  ಶೌಚಾಲಯ ನಿರ್ವಹಣೆಸೇರಿದಂತೆ ಕೋವಿಡ್‌ಔಷಧೀಯ ತ್ಯಾಜ್ಯವನ್ನು ಅತ್ಯಂತಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

ಮಹಿಳೆಯರಿಗೆ ಪ್ರತ್ಯೇಕ: ಕೇಂದ್ರದಲ್ಲಿ ಮೂರನೇ ಮಹಡಿಯ ಕೊಠಡಿಗಳನ್ನು ಮಹಿಳೆಯರಿಗೆ ಹಾಗೂ ಒಂದೇಕುಟುಂಬದ ಸದಸ್ಯರಿಗೆ ಮೀಸಲಿಡಲಾಗಿದೆ. ವಿಶೇಷ ಎಂದರೆ ಕೇರ್‌ನಲ್ಲಿ ಕೋವಿಡ್ ವಾರಿಯರ್ಸ್‌ ಗಳಿಗೂಪ್ರತ್ಯೇಕವಾದ ಕೊಠಡಿಗಳನ್ನು ಮೀಸಲಿಡಲಾಗಿದೆ.

ಮನರಂಜನೆಗೂ ಅವಕಾಶ : ಕೋವಡ್ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಕೇಂದ್ರದಲೇ ಉಳಿದುಕೊಳ್ಳ ಬೇಕಾಗಿರುವುದರಿಂದ ಏಕಾಂಗಿತನ, ಬೇಸರ ಉಂಟಾಗಬಾರದು ಎಂಬ ಉದ್ದೇಶ‌ದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣ ಕಲ್ಪಿಸಲಾಗಿದೆ. ಸಭಾಂಗಣದಲ್ಲಿ ಒಳಾಂಗಣ ಕ್ರೀಡಾ ಪರಿಕರಗಳಾದ ಕೇರಂ ಬೋರ್ಡ್‌, ಚೆಸ್‌ ಹಾಗೂ ಬ್ಯಾಡ್ಮಿಂಟನ್‌ ಪರಿಕರಗಳನ್ನು ನೀಡಲಾಗಿದೆ. ಕೇಬಲ್‌ ಸಂಪರ್ಕವಿರುವ ಟೀವಿ, ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ.

ನಿಜವಾದ ವಾರಿಯರ್ಸ್‌ಡಿ ಗ್ರೂಪ್‌ ನೌಕರರು : ನಿಜವಾದಕೊರೊನಾ ವಾರಿಯರ್ಸ್‌ಗಳಿಗೆ ಉದಾಹರಣೆ ಎಂದರೆಕೊರೊನಾ ಚಿಕಿತ್ಸಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವಡಿಗ್ರೂಪ್‌ ನೌಕರರು. ತಮ್ಮ ಸುತ್ತಲ್ಲೂ ಕೋವಿಡ್ ಸೋಂಕಿತರೆ ಇದ್ದರೂ ಯಾವುದನ್ನು ಲೆಕ್ಕಿಸದೇ ಸೋಂಕಿತರ ಕೊಠಡಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನಡೆಯಲು ಆಗದ ಸೋಂಕಿತರಿಗೆ ನಡೆಯಲು ಸಹಾಯ ಮಾಡುತ್ತಿದ್ದಾರೆ. ಇಡೀ ಕೇಂದ್ರವನ್ನು ಸದಾ ಶುಚಿಯಾಗಿಡುತ್ತಾ ಕೋವಿಡ್ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.