ಮೋದಿ ಭಾಷಣಕ್ಕೆ ಮಾತ್ರ ಸೀಮಿತ: ರಮೇಶ್ಕುಮಾರ್
Team Udayavani, Mar 8, 2017, 12:54 PM IST
ಕೆ.ಆರ್.ನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತ ಗೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಆರ್.ರಮೇಶ್ಕುಮಾರ್ ಟೀಕಿಸಿದರು. ಪಟ್ಟಣದ ಹಳೆ ಹೆರಿಗೆ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮೋದಿಯವರು ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಚುನಾವಣೆ ಸಮಯದಲ್ಲಿ ಹೇಳಿದ ಯಾವ ಕಾರ್ಯವೂ ಅನುಷ್ಠಾನಗೊಂಡಿಲ್ಲ. ಕಪ್ಪು ಹಣ ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದ ಪ್ರಧಾನಿಗಳು ಈವರೆಗೂ ಒಬ್ಬನನ್ನು ಕೂಡ ಗುರುತಿಸಿ ಜೈಲಿಗೆ ಕಳುಹಿಸಿರುವ ಉದಾಹರಣೆಗಳು ಇಲ್ಲ ಎಂದು ತಿಳಿಸಿದರು.
ದೇಶದಲ್ಲಿ 1 ಲಕ್ಷ ಕೋಟಿ ವರೆಗೂ ಸಾಲ ಪಡೆದು ಸುಸ್ತಿ ಆಗಿರುವವರು ಇದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು ಮಾತ್ರ ರೈತರು ಎಂದ ಸಚಿವರು ಕೇಂದ್ರ ಸರ್ಕಾರ ಕೂಡಲೇ ಕಪ್ಪು ಹಣ ಇರುವವರನ್ನು ಗುರುತಿಸಿ ಮತ್ತು ಸುಸ್ತಿದಾರ ಉದ್ಯಮಿಗಳನ್ನು ಜೈಲಿಗೆ ಹಾಕಿ ಅವರಿಂದ ಹಣ ಪಡೆದು ರೈತರಿಗೆ ನೀಡಬೇಕು. ಆಗ ಮಾತ್ರ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ಸಾಧ್ಯ ಎಂದರು.
ಭಾರತದ ಸಂಸ್ಕೃತಿಯನ್ನು ಹಾಳು ಮಾಡುವ ಚಲನಚಿತ್ರಗಳು ಮತ್ತು ಧಾರವಾಹಿ ಗಳು ಕಪ್ಪು ಹಣ ಹೊಂದಿರುವ ಒಡೆಯರಿಂದ ನಿರ್ಮಾಣವಾಗುತ್ತಿವೆ. ಆದರೆ ನಮ್ಮದು ಉತ್ತಮ ಸಂಸ್ಕೃತಿ ಹೊಂದಿರುವ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯವರು ತಡೆಯುವಲ್ಲಿ ವಿಫಲಗೊಂಡಿದ್ದಾರೆ ಎಂದು ಆರೋಗ್ಯ ಮತ್ತು ಸಚಿವ ಕೆ.ಆರ್.ರಮೇಶ್ಕುಮಾರ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ
Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ
MUST WATCH
ಹೊಸ ಸೇರ್ಪಡೆ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ