ಮಂಗನಕಾಯಿಲೆಗೆ ಇಬ್ಬರು ಬಲಿ?
Team Udayavani, Jan 27, 2019, 12:30 AM IST
ಎಚ್.ಡಿ.ಕೋಟೆ: ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮನಹೊಸಳ್ಳಿ ಹಾಡಿಯಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತರಾಗಿದ್ದು, ಮಂಗನಕಾಯಿಲೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕೇರಳದ ಮಾನಂದವಾಡಿ ತಾಲೂಕಿನ ಆಸ್ಪತ್ರೆಯಲ್ಲಿ ಮತ್ತು ಕೋಜಿಕ್ಕೋಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಮತ್ತು ಸುರೇಶಯ್ಯ ಎಂಬುವರು ತಿಮ್ಮನ ಹೊಸಳ್ಳಿ ಹಾಡಿಗೆ ವಿಶ್ರಾಂತಿಗಾಗಿ ಬಂದಿ ದ್ದರು. ಜ್ವರ ತೀವ್ರವಾಗಿ, ಸ್ಥಳೀಯ ಆಸ್ಪತ್ರೆಗೆ ದಾಖಲಾದರಾದರೂ, ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇವರಿಂದ ಪಡೆದ ರಕ್ತಪರೀಕ್ಷೆಯ ವರದಿ ಬಂದಿದ್ದು, ಮಂಗನಕಾಯಿಲೆ ಇರುವ ಲಕ್ಷಣಗಳು ಕಂಡು ಬಂದಿವೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ತಿಮ್ಮನಹೊಸಳ್ಳಿ ಹಾಡಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಕಾಡಿನಲ್ಲಿರುವ ಉಣ್ಣೆಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಇವರು ಅನಾರೋಗ್ಯ, ಅತಿಯಾದ ಕುಡಿತ ಹಾಗೂ ಇತರ ಕಾರಣದಿಂದ ಮೃತರಾಗಿದ್ದಾರೆಯೇ ಹೊರತು ಮಂಗನ ಕಾಯಿಲೆಯಿಂದ ಅಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಟಿ.ರವಿಕುಮಾರ್ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಮಂಗನ ಕಾಯಿಲೆ ಶಾಶ್ವತ ನಿರ್ಮೂಲನೆಗೆ ಕ್ರಮ
ಬಾಗಲಕೋಟೆ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹರಡುತ್ತಿರುವ ಮಂಗನ ಕಾಯಿಲೆ ಹತೋಟಿಗೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಈ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಯೋಜನೆ ಹಾಕಿ ಕೊಂಡಿದ್ದು, ಪ್ರಸಕ್ತ ಬಜೆಟ್ನಲ್ಲಿ 10 ಕೋಟಿ ರೂ.ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1957ರ ಬಳಿಕ ಮಂಗನ ಕಾಯಿಲೆ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈ ಕಾಯಿಲೆ ಹರಡದಂತೆ ಮುಂಚಿತವಾಗಿಯೇ ಎಚ್ಚರಿಕೆ ವಹಿಸುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿ ಮತ್ತು ಅರಣ್ಯ ಇಲಾಖೆಯದ್ದು. ಮಂಗನ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಹೊಸ ಪ್ರಯೋಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಈಗಾಗಲೇ ಎರಡು ಬಾರಿ ಔಷಧ ವಿತರಣೆ ಅಭಿಯಾನ ನಡೆಸಲಾಗಿದೆ. ಇನ್ನೊಂದು ಬಾರಿ ನಡೆಸಲಾಗುವುದುಎಂದು ಹೇಳಿದರು.
ರಾಜ್ಯದಲ್ಲಿ ಆಪರೇಶನ್ ಕಮಲ ಮಾಡಿ, ಅಧಿಕಾರಕ್ಕೆ ಬರಬೇಕೆಂದು ಯಡಿಯೂರಪ್ಪ ಮತ್ತು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ಬಿಜೆಪಿಯವರು ಮೈತ್ರಿ ಸರ್ಕಾರ, ಇಂದು-ನಾಳೆ ಬೀಳುತ್ತದೆ ಎಂದೂ ಹೇಳುತ್ತಿದ್ದಾರೆ. ಇದನ್ನು ಕೇಳಿ ಮಾಧ್ಯಮದವರೂ ಸುಸ್ತಾಗಿದ್ದಾರೆ. ಆಪರೇಶನ್ ಕಮಲ ವಿಚಾರದಲ್ಲಿ ಎಲ್ಲರೂ ಬೇಸತ್ತಿದ್ದಾರೆ.
– ಶಿವಾನಂದ ಪಾಟೀಲ, ಆರೋಗ್ಯ ಸಚಿವ.
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ವೈಯಕ್ತಿಕವಾಗಿ 50 ಸಾವಿರ ರೂ.ನೀಡಲಾಗುತ್ತಿದೆ.
ಕಾಯಿಲೆ ನಿಯಂತ್ರಣಕ್ಕೂ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ.
– ಡಿ.ಸಿ.ತಮ್ಮಣ್ಣ , ಸಾರಿಗೆ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ