‘ನಾನೊಬ್ಬ ಸುಸಂಸ್ಕೃತ ರಾಜಕಾರಣಿ’ : ಸಂಸದ ಸದಾನಂದ್ ಗೌಡ
Team Udayavani, Jul 13, 2021, 6:24 PM IST
ಮೈಸೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಕೆಲ ರಾಜ್ಯಗಳ ಮುಂದಿನ ಚುನಾವಣೆಯ ಸಂಘಟನಾ ದೃಷ್ಟಿಯಿಂದ ರಾಜಿನಾಮೆ ಕೇಳಿದ್ರು. ತಕ್ಷಣ ರಾಜೀನಾಮೆ ನೀಡಿದ್ದೇವೆ ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಸದಾನಂದ್ ಗೌಡ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ..! ನನಗೆ ಪಕ್ಷ ಕೊಟ್ಟಂತಹ ಅವಕಾಶಗಳು ಬಹುಶಃ ರಾಜ್ಯದಲ್ಲಿ ಯಾರಿಗೂ ಸಿಕ್ಕಿಲ್ಲ. ನಾನೊಬ್ಬ ಸುಸಂಸ್ಕೃತ ರಾಜಕಾರಣಿ. ಅಧಿಕಾರ ಕೊಟ್ಟಾಗ ಎತ್ತರಕ್ಕೆ ಏರುವುದು, ಕೊಡದಿದ್ದಾಗ ಕೆಳಕ್ಕೆ ಇಳಿಯುವು ಮಾಡಬಾರದು. ಸಮಾನ ಮನಸ್ಸಿನಲ್ಲಿ ಸ್ವೀಕರಿಸಿ ಮುಂದೆ ನಡೆಯಬೇಕು ಎಂದರು.
ಇನ್ನು ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಇದು ಪಕ್ಷದ ಸಂಘಟನೆ ವಿಚಾರ. ನಮ್ಮ ಪಕ್ಷ ಬೆಳೆಯಬೇಕು ಅಂದ್ರೆ ಇತರ ಪಕ್ಷದಿಂದ ಬಂದವರೂ ಸಿದ್ದಾಂತ ಒಪ್ಪಿಕೊಳ್ಳಬೇಕು. ಹೊರಗಿನಿಂದ ಬಂದವರನ್ನ ಸ್ಟ್ರೀಮ್ ಲೈನ್ ಮಾಡುವ ಅವಶ್ಯಕತೆ ಇದೆ. ಪಕ್ಷ ಆ ದಾರಿಯಲ್ಲಿ ಕೆಲಸ ಮಾಡ್ತಿದೆ ಎಂದರು.
ರಾಜೀನಾಮೆ ವಿಚಾರವಾಗಿ ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರಿಸಿದ ಸದಾನಂದ್ ಗೌಡ, ರಾಜಕೀಯ ಅಂದ್ರೆ ದೊಡ್ಡ ಸಮುದ್ರ ಇದ್ದಂತೆ.ಸಮುದ್ರ ಸ್ನಾನಕ್ಕೆ ಇಳಿದರು ಅಲೆಗಳಿಗೆ ಕಾಯಬಾರದು. ರಾಜಕೀಯದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ನಮ್ಮ ಕಾರ್ಯಾಚರಣೆ, ಕಮಿಟ್ಮೆಂಟ್ ಮೂಲಕ ಉತ್ತರ ಕೊಡಬೇಕು. ನಾನು ಏರ್ಪೋರ್ಟ್ಗೆ ಬಂದಾಗ ಸ್ವಾಗತ ಮಾಡೊಕೆ ನಾಲ್ಕು ಸಾವಿರ ಜನ ಬಂದಿದ್ರು.ಇದಕ್ಕಿಂತ ದೊಡ್ಡ ಸಂಪಾದನೆ ಏನಿದೆ, ಎಲ್ಲಾ ಟೀಕೆಗೆಗೂ ಇದೇ ಉತ್ತರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್