ಭೂ ಮಾಲೀಕರ ಜಂಟಿ ಸಹಯೋಗದಲ್ಲಿ ಬಡಾವಣೆ


Team Udayavani, Nov 13, 2020, 7:25 PM IST

mysuru-tdy-2

ಮೈಸೂರು: ನಗರ ವರ್ಷದಿಂದ ವರ್ಷದಿಂದಬೆಳೆಯುತ್ತಿದ್ದು, ನಿವೇಶನ ರಹಿತ ಜನರಿಂದನಿವೇಶನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿ ಹೊಸಯೋಜನೆ ರೂಪಿಸಿದ್ದು, ಭೂ ಮಾಲೀಕರ ಜಂಟಿ ಸಹಯೋಗದಲ್ಲಿ ಬಡಾವಣೆಗಳನ್ನು ನಿರ್ಮಿಸುವಉದ್ದೇಶ ಹೊಂದಿದೆ ಎಂದು ಮುಡಾ ಅಧ್ಯಕ್ಷಎಚ್‌.ವಿ. ರಾಜೀವ್‌ ತಿಳಿಸಿದರು.

ನಗರದ ಮುಡಾಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಿವೇಶನಗಳಿಗೆ ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಡಾ ಹಾಗೂ ಭೂ ಮಾಲೀಕರ ಜಂಟಿಸಹಯೋಗದಲ್ಲಿ 50:50 ಅನುಪಾತದಲ್ಲಿಬಡಾವಣೆ ನಿರ್ಮಿಸಲು ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ದೊರೆತಿದೆ.ಈಗಾಗಲೇ ಸುಮಾರು 700 ಎಕರೆ ಜಮೀನನ್ನು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಂದರ್ಭಿಕ ಪರಿಹಾರ ಕಂಡುಕೊಳ್ಳುವಸಲುವಾಗಿ ಜಮೀನು ಮಾರಾಟ ಮಾಡಿದರೆವಂಶಪಾರಂಪರ್ಯವಾಗಿ ಬಂದಿದ್ದ ಭೂ ಮಾಲೀಕತ್ವ ರೈತರ ಕೈತಪ್ಪುತ್ತದೆ. ಅಲ್ಲದೆ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೂ ದೊರೆಯುವುದಿಲ್ಲ. ನಮ್ಮ ಈ ಯೋಜನೆಯಿಂದ ಜಮೀನಿನ ಮಾಲೀಕತ್ವ ರೈತರ ಬಳಿಯೇ ಉಳಿಯಲಿದ್ದು, ಅವರ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ. ಈ ಸಂಬಂಧ ರೈತರೊಂದಿಗೆ ಸಂವಾದ ನಡೆಸಿ ಸುದೀರ್ಘ‌ವಾಗಿ ಚರ್ಚಿಸಲಾಗಿದೆ. ಜಮೀನು ನೀಡಲು ರೈತರು ಒಪ್ಪಿಕೊಂಡಿದ್ದು, ಒಪ್ಪಂದದ ಬಳಿಕ ಬಡಾವಣೆ ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಮೈಸೂರು ಸುತ್ತಲಿನ ಉದ್ಬೂರು, ಕಲ್ಲಹಳ್ಳಿ, ತಳೂರು, ದೊಡ್ಡಕಾಟೂರು, ದಾರಿಪುರ,ಮುಳ್ಳೂರು, ಬೊಮ್ಮನಹಳ್ಳಿ, ಕಮರಹಳ್ಳಿ,ಶೀಗಹಳ್ಳಿ ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಬಡಾವಣೆ ನಿರ್ಮಾಣಕ್ಕೆ ಜಮೀನುನೀಡಲು ಮುಂದಾಗಿದ್ದಾರೆ. ಪ್ರತಿಯೊಬ್ಬರ ಬಳಿಯೂಐದರಿಂದಹತ್ತು ಎಕರೆಇದೆ.50 ಎಕರೆ ಭೂಮಿ ಹೊಂದಿರುವ ಮಾಲೀಕರು ಭೂಮಿ ನೀಡಿದರೆ ನಾವೇ ಬಡಾವಣೆ ನಿರ್ಮಿಸಿ ಕೊಡುತ್ತೇವೆ. ಈಮಾದರಿಈಗಾಗಲೇ ಗುಜರಾತ್‌ ರಾಜ್ಯ ಹಾಗೂ ನಮ್ಮ ಪಕ್ಕದ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಾಲ್ತಿಯಲ್ಲಿದೆ ಎಂದರು.

ರೈತರಿಗೆ 50:50ರ ಅನುಪಾತದಲ್ಲಿ ಎಕರೆಗೆ 9 ನಿವೇಶನ ಸಿಗಲಿದೆ. ಈ ನಿವೇಶನಗಳನ್ನು ಅವರುಇಟ್ಟುಕೊಳ್ಳಬಹುದು ಅಥವಾ ಮಾರಾಟ ಮಾಡಬಹುದು. ರಾಜ್ಯಪಾಲರ ಹೆಸರಿನಲ್ಲಿ ಒಪ್ಪಂದದಪತ್ರ ಮಾಡಿಕೊಳ್ಳಲಿದ್ದು, ಈ ವಿಚಾರದಲ್ಲಿಕಾನೂನಾತ್ಮಕ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್‌, ಕಾರ್ಯದರ್ಶಿ ಎಂ.ಕೆ. ಸವಿತಾ ಇದ್ದರು.

 

18 ತಿಂಗಳಲ್ಲಿ ಯೋಜನೆ ಪೂರ್ಣ :  ಜಂಟಿ ಸಹಭಾಗಿತ್ವದಡಿ ಅಭಿವೃದ್ಧಿಪಡಿಸಲುಉದ್ದೇಶಿಸಿರುವ ಯೋಜನೆಗಳನ್ನು ಸಂಬಂಧಪಟ್ಟ ಎಲ್ಲಾ ಭೂಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡ18 ತಿಂಗಳೊಳಗೆ ಯೋಜನೆ ಪೂರ್ಣಗೊಳಿಸ ಲಾಗುವುದು. ಪರಸ್ಪರ ಒಪ್ಪಿಗೆ ಪತ್ರ ನೀಡಿ ಒಪ್ಪಂದದಕರಾರಿಗೆ ಒಳಪಡುವ ಭೂಮಾಲೀಕರಿಗೆ ಮುಂಗಡವಾಗಿ 10 ಲಕ್ಷ ರೂ.ನೀಡಲಾಗುವುದು. ಜಂಟಿ ಸಹಭಾಗಿತ್ವದಡಿ ಅಭಿವೃದ್ಧಿಪಡಿಸಲು ಅಧಿಸೂಚಿಸಿದಜಮೀನುಗಳಿಗೆ ಪರಿಹಾರವಾಗಿ ಯೋಜಿತ ಬಡಾವಣೆ ರಚಿಸಿದ ಬಾಬ್ತು ಲಭ್ಯವಾಗುವ ಒಟ್ಟು ನಿವೇಶನಗಳಲ್ಲಿ ಶೇ.50-50ರ ಅನುಪಾತದಲ್ಲಿ ನಿಯಮಗಳನ್ವಯ ಭೂ ಮಾಲೀಕರಿಗೆ ನಿವೇಶನ ನೀಡಲಾಗುವುದು ಎಂದು ರಾಜೀವ್‌ ವಿವರಿಸಿದರು.

ಖಾಸಗಿಯವರಿಂದಲೂ ಬೇಡಿಕೆ: ರಾಜೀವ್‌ :  ಮುಡಾದ ಈ ಯೋಜನೆಗೆ ರೈತರಿಂದಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಖಾಸಗಿ ಡೆವಲಪರ್ಸ್‌ಗಳೂ ಸಹ ತಾವು ಖರೀದಿಸಿರುವ ಜಮೀನನ್ನು50:50 ಅನುಪಾತದಲ್ಲಿ ಅಭಿವೃದ್ಧಿಪಡಿಸಿಕೊಡುವಂತೆ ಬೇಡಿಕೆಇಡುತ್ತಿದ್ದಾರೆ. ಖಾಸಗಿಯವರು ನಮ್ಮಯೋಜನೆ ಆರಂಭವಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿ ಹಲವು ಗೊಂದಲಸೃಷ್ಟಿಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ಮಾಲೀಕರಿಗೆ ಪ್ರಾಧಿಕಾರದ ಮೇಲೆ ವಿಶ್ವಾಸ ಇರುವುದರಿಂದ ಅಂತಹ ಯಾವುದೇ ಪ್ರಯತ್ನ ಸಫ‌ಲವಾಗುವುದಿಲ್ಲ ಎಂದು ರಾಜೀವ್‌ ಹೇಳಿದರು.

ವ್ಯಾಜ್ಯ ಇತ್ಯರ್ಥಕ್ಕೆ ಜಾಗೃತದಳ ರಚನೆ :  ಮುಡಾದಲ್ಲಿ ನಕಲಿ ದಾಖಲೆ, ವಂಚನೆ ಮೊದಲಾದ ಅಕ್ರಮಗಳನ್ನು ತಡೆಗಟ್ಟಲು ಬಿಡಿಎ ಮಾದರಿಯಲ್ಲಿ ಜಾಗೃತದಳ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಡಾದಿಂದ ಯಾವುದಾದರೂ ಒಂದು ಠಾಣೆಗೆ ದೂರು ನೀಡಿದರೆ ಪ್ರಕರಣ ಇತ್ಯರ್ಥಪಡಿಸಲುವಿಳಂಬವಾಗುವುದಲ್ಲದೆ ಹಲವು ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಪ್ರತ್ಯೇಕ ಜಾಗೃತದಳ ರಚಿಸಲು ಮುಂದಾಗಿದ್ದೇವೆ. ಡಿವೈಎಸ್‌ಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ ಹಂತದ ಅಧಿಕಾರಿಗಳ ನ್ನೊಳಗೊಂಡ ಜಾಗೃತದಳ ರಚಿಸಿದರೆ ಸಾರ್ವಜನಿಕರಿಂದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯಲಿದೆ ಎಂದ ಅವರು, ನಕಲಿ ದಾಖಲೆ ಸೃಷ್ಟಿಸಿ ಮುಡಾ ಆಸ್ತಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧಕಠಿಣ ಕ್ರಮಕ್ರಮಕೈಗೊಳ್ಳುವುದಾಗಿ ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌ ಎಚ್ಚರಿಸಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.