ಜ.14ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ


Team Udayavani, Dec 21, 2017, 5:02 PM IST

mys1.jpg

ಮೈಸೂರು: ಮೈಸೂರು ರಂಗಾಯಣ ಪ್ರತಿ ವರ್ಷ ಆಯೋಜಿಸುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ವಲಸೆ ಶೀರ್ಷಿಕೆಯಡಿ ಜನವರಿ 14ರಿಂದ 21ರವರೆಗೆ ನಡೆಯಲಿದೆ. ಪ್ರತಿ ವರ್ಷದಂತೆ ಸಂಕ್ರಾಂತಿಯ ದಿನದಂದೇ ಆರಂಭವಾಗುವ ಈ ಉತ್ಸವವು ನಾಟಕ, ವಿಚಾರ ಸಂಕಿರಣ, ಜಾನಪದ ಕಲೆಗಳ ಪ್ರದರ್ಶನ, ಪುಸ್ತಕ ಮೇಳ, ಕರಕುಶಲ ಮೇಳ, ಚಲನಚಿತ್ರೋತ್ಸವ, ಬೀದಿ
ನಾಟಕ ಹೀಗೆ ತನ್ನೆಲ್ಲಾ ಸಾಂಸ್ಕೃತಿಕ ವೈವಿಧ್ಯತೆಯಿಂದ ನಾಡಿನ ಜನತೆಗೆ ರಸದೌತಣ ನೀಡಲಿದೆ ಎಂದು ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ ತಿಳಿಸಿದ್ದಾರೆ.

ವಲಸೆ ಶೀರ್ಷಿಕೆ: ಈ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ವಲಸೆ ಶೀರ್ಷಿಕೆ ಯಡಿ ಸಂಘಟಿಸಲಾಗುತ್ತಿದೆ. ಜಗತ್ತಿನಾದ್ಯಂತ ಮನುಷ್ಯರನ್ನೂ ಒಳಗೊಂಡಂತೆ ಜೀವರಾಶಿಯ ಸಹಜ ಜೀವನದ ನೆಲೆಗೆ ಬೇರೆ ಬೇರೆ ಆತಂಕಗಳು ಎದುರಾಗುತ್ತಿರುವ ಈ ಸಂದರ್ಭದಲ್ಲಿ ಅನೇಕ ಸಮುದಾಯಗಳು ತಮ್ಮ ಬದುಕಿನ ನೆಲೆ ಕಂಡು ಕೊಳ್ಳಲು ಒಂದೆಡೆಯಿಂದ ಮತ್ತೂಂದೆಡೆಗೆ ವಲಸೆ ಹೋಗುವುದು ನಿರಂತರವಾಗಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಚಲಿತ ವಿಷಯಗಳಿಗೆ ಸಂವೇದಿ
ಸುವ ಆಶಯದಿಂದ ಬಹುರೂಪಿಗೆ ಈ ಶೀರ್ಷಿಕೆ ಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬಹುರೂಪಿ ನಾಟಕೋತ್ಸವ ನಾಡಿನ ಹೆಮ್ಮೆಯ
ಉತ್ಸವವಾಗಿದ್ದು, ಕಳೆದ 17ನೇ ವರ್ಷಗಳಿಂದ ದೇಶದಾದ್ಯಂತ ನೂರಾರು ಬೇರೆ ಬೇರೆ ಭಾಷೆಯ ನಾಟಕಗಳಲ್ಲದೆ, ಬೇರೆ ಬೇರೆ ದೇಶದ ನಾಟಕಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೇ ರಾಜ್ಯದ ಬೇರೆ ಬೇರೆ ಪ್ರದೇಶದಲ್ಲಿ ರಂಗ ಸೇವೆಯಲ್ಲಿ ತೊಡಗಿರುವ ಅನೇಕ ಹವ್ಯಾಸಿ ರಂಗತಂಡಗಳ ನಾಟಕಗಳು ಪ್ರದರ್ಶನಗೊಂಡಿವೆ. 

ಬಹುರೂಪಿ ಉತ್ಸವದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ವಿವಿಧ ಭಾಷೆಗಳ 9 ನಾಟಕಗಳು ಹಾಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ
ಕನ್ನಡ ನಾಟಕಗಳು ಮತ್ತು 6ಏಕವ್ಯಕ್ತಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಜನವರಿ 14ರಂದೇ ಆರಂಭವಾಗುವ ಅಂತಾ
ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಕ್ಷ್ಯಚಿತ್ರಗಳನ್ನು ಒಳಗೊಂಡಂತೆ ಪ್ರತಿ ದಿನ 3 ಚಲನಚಿತ್ರಗಳಂತೆ ಬೇರೆ ಬೇರೆ ಭಾಷೆಯ ಸುಮಾರು 24 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಉದ್ಘಾಟನೆ: ಜನವರಿ 20 ಮತ್ತು 21 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಆಗಮಿಸುವ ಸಾಧಕರು, ರಂಗತಜ್ಞರು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ. ಇದೇ ಪ್ರಥಮ ಬಾರಿಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಯುವ ಸಮೂಹವನ್ನು ಆಕರ್ಷಿ ಸುವ ದೃಷ್ಟಿಯಿಂದ ಮೈಸೂರು ಜಿಲ್ಲೆಯ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳ ತಂಡಕ್ಕೆ ವಿವಿಧ ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿದ್ದು, ಅವರಿಗೆ ತರಬೇತಿ ನೀಡಲು ತಜ್ಞರನ್ನು ನೇಮಿಸಲಾಗಿದೆ.

2018ರ ಜನವರಿ 14ರಂದು ಉದ್ಘಾಟನೆಗೊಳ್ಳುವ ಈ ನಾಟಕೋತ್ಸವದಲ್ಲಿ ಪ್ರತಿದಿನ ಬೀದಿನಾಟಕ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದಿಂದ ಪ್ರಾಯೋಜಿಸಲ್ಪಡುವ ವಿವಿಧ ರಾಜ್ಯಗಳ ಜಾನಪದ ತಂಡಗಳಿಂದ ಕಲಾಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳ ತಂಡದಿಂದ ಜಾನಪದ ಕಲಾ ಪ್ರದರ್ಶನಗಳಲ್ಲದೆ ಭೂಮಿಗೀತ, ಕಲಾಮಂದಿರ, ಕಿರುರಂಗಮಂದಿರಗಳಲ್ಲಿ ಕ್ರಮವಾಗಿ ಸಂಜೆ 6.30,
7 ಹಾಗೂ 7.30ಕ್ಕೆ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಬಹುರೂಪಿ ನಾಟಕೋತ್ಸವ ಆಯೋಜನೆ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಂದೀಪ್‌ ಡಿ., ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.