ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು


Team Udayavani, Aug 28, 2022, 7:15 AM IST

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು

ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊÕà ಕಾಯಿದೆಯಡಿ
ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಮಕ್ಕಳ ವಸತಿ ಕೇಂದ್ರ ವಾದ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆ ಸಂಸ್ಥೆ ಬಾಲಕಿಯರನ್ನು ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತುಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ಶುಕ್ರವಾರ ರಾತ್ರಿ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಘಟನೆ ನಡೆದಿರುವುದರಿಂದ ಪ್ರಕರಣವನ್ನು ಅಲ್ಲಿಯ ಠಾಣೆಗೆ ವರ್ಗಾಯಿಸಲಾಗಿದೆ. ಜತೆಗೆ ತನಿಖೆಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಡಿಸಿಪಿ ಪ್ರದೀಪ್‌ ಗುಂಟಿ ತಿಳಿಸಿದ್ದಾರೆ.

ಈ ಮಧ್ಯೆ, ಶನಿವಾರ ಇಡೀ ದಿನ ಚಿತ್ರದುರ್ಗದ ಮಠದಲ್ಲಿ ಬಿರುಸಿನ ಚಟುವಟಿಕೆಗಳು ನಡೆದವು. ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್‌ ಸ್ವಾಮೀಜಿ ಸಹಿತ ವಿವಿಧ ಮಠಾಧೀಶರು, ವಿವಿಧ ಸಮಾಜಗಳ ಮುಖಂಡರು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಮಠದ ಭಕ್ತರು ಮಠಕ್ಕೆ ಆಗಮಿಸಿ ಸ್ವಾಮೀಜಿಯವರನ್ನು ಬೆಂಬಲಿಸಿದರು. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಠಕ್ಕೆ ಭೇಟಿ ನೀಡಿ ಈ ದೂರಿನ ಬಗ್ಗೆ ನಂಬಿಕೆ ಇಲ್ಲ ಎಂದರು.

ಮತ್ತೊಂದೆಡೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್‌.ಕೆ. ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯಬಸವರಾಜನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

21ನೇ ಶತಮಾನದ ಕರಾಳ ಘಟನೆ: ಮುರುಘಾ ಶ್ರೀ
ಚಿತ್ರದುರ್ಗ: ಮುರುಘಾ ಶರಣರ ಬದುಕಿನಲ್ಲಿ ಅತ್ಯಂತ ದೊಡ್ಡ ಕಿರುಕುಳ ಇದಾಗಿದೆ. 21ನೇ ಶತಮಾನದ ಕರಾಳ ಘಟನೆ ಇದಾಗಿದೆ. ರೋಲ್‌ಕಾಲ್‌, ಬ್ಲಾಕ್‌ವೆುàಲ್‌ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಮುಖ್ಯವಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ಮಠದಲ್ಲಿ ಭಕ್ತರ ಜತೆ ಜರಗಿದ ಅನೌಪಚಾರಿಕ ಮಾತುಕತೆ ವೇಳೆ ಮಾತನಾಡಿರುವ ಶರಣರು, ಜಗತ್ತಿನಲ್ಲಿ ಧರ್ಮಾಂಧರು ಹಾಗೂ ಕಳ್ಳರು ಈ ರೀತಿ ಸನ್ನಿವೇಶ ಎದುರಿಸಿಲ್ಲ. ತಾತ್ವಿಕ ತಳಹದಿಯ ಮೇಲೆ ನಡೆದವರಿಗೆ ಕುತ್ತು ಎದುರಾಗುತ್ತದೆ. ಗಾಂಧೀಜಿ, ಬಸವಣ್ಣ ಕೂಡ ನೋವಿನ ದಿನಗಳನ್ನು ಎದುರಿಸಿದ್ದಾರೆ ಎಂದು ಹೇಳಿದರು.
ಮಠದ ಒಳಗೆ ಇರುವವರೇ ಷಡ್ಯಂತ್ರ, ಪಿತೂರಿ ನಡೆಸಿದ್ದಾರೆ. ಈ ಸಮಸ್ಯೆ ಶಾಶ್ವತವಲ್ಲ. ಯಾರೊಬ್ಬರೂ ದುಃಖಿಸಬೇಡಿ. ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ. ಸಾಧ್ಯವಾದರೆ ಸಮಸ್ಯೆ ಬಗೆಹರಿಸಿಕೊಳ್ಳೋಣ, ಇಲ್ಲವೇ ಹೋರಾಟ ಮಾಡೋಣ. ಎರಡಕ್ಕೂ ನಾವು ಸಿದ್ಧ. ಸಮರ ಹಾಗೂ ಸಂಧಾನದ ಹಾದಿಗಳು ನಮ್ಮ ಎದುರಿನಲ್ಲಿವೆ ಎಂದಿದ್ದಾರೆ.

ಎಲ್ಲ ಸಮಾಜ ಸುಧಾರಕರ ಕಾಲದಲ್ಲಿಯೂ ಸಾತ್ವಿಕ ಮತ್ತು ದುಷ್ಟಶಕ್ತಿಯ ನಡುವೆ ಹೋರಾಟ ನಡೆದಿವೆ. ಸಾತ್ವಿಕರು ಸಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ಅನೇಕರು ನಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಏಸುಕ್ರಿಸ್ತರನ್ನು ಶಿಲುಬೆಗೆ ಏರಿಸಿದವರು ಅದೇ ಧರ್ಮದವರು. ಪೈಗಂಬರರಿಗೆ ಕಿರುಕುಳ ನೀಡಿದವರು, ಗೌತಮ ಬುದ್ಧನಿಗೆ ಹಂದಿಯ ಮಾಂಸದ ರಸ ಉಣಿಸಿದವರು ಅದೇ ಧರ್ಮದವರು ಎಂದು ಮುರುಘಾ ಶರಣರು ಹೇಳಿದ್ದಾರೆ.

ಮಠದ ಉದ್ಯೋಗಿಯೊಬ್ಬ ಸರಿ ಇರಲಿಲ್ಲ. ಆತನೇ ಏನೋ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಚಿತ್ರದುರ್ಗ ಪೊಲೀಸ್‌ ಠಾಣೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌ ಎಂಬವರ ವಿರುದ್ಧವೂ ದೂರು ನೀಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ.
– ಆರಗ ಜ್ಞಾನೇಂದ್ರ, ಗೃಹ ಸಚಿವ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.