ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತ : ಪ್ರತಾಪ್ ಸಿಂಹ
25-30 ವರ್ಷದ ಹಿಂದೆ ಜಾರ್ಜ್,ಎಂ.ಬಿ ಪಾಟೀಲ್, ಡಿಕೆಶಿ ಏನಾಗಿದ್ದರು?
Team Udayavani, May 4, 2022, 7:00 PM IST
ಮೈಸೂರು : ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತ ಇದೆ.ಇಂತಹ ವಿಶೇಷ ಪ್ರಯತ್ನ ಮೋದಿ ನೇತೃತ್ವದಲ್ಲಿ ಸದಾ ಆಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಬುಧವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಹಾಗೂ ಉಳಿದವರು ನನಗೆ ಅವಕಾಶ ಕೊಟ್ಟಿದಕ್ಕೆ ನಾನು ಎರಡನೇ ಬಾರಿ ಸಂಸದನಾಗಿದ್ದೇನೆ. ಪೊಲೀಸ್ ಇಲಾಖೆ, ಕ್ರೀಡಾ ಕ್ಷೇತ್ರದಿಂದ ರಾಜಕಾರಣಿಗಳಾಗಿದ್ದಾರೆ. ಮಕ್ಕಳು ಸಂಬಂಧಿಕರು ದುಡ್ಡಿರುವವರಿಗೆ ಮಾತ್ರ ಅವಕಾಶವಿತ್ತು. ಆದರೆ ಎಲ್ಲರನ್ನೂ ಕರೆ ತಂದವರು ಮೋದಿ. ಸಂತೋಷ್ ಅವರ ಹೇಳಿಕೆ ಸೂಕ್ತವಾಗಿದೆ. ರಾಜಕಾರಣ ಯಾರ ಅಪ್ಪನ ಆಸ್ತಿ ಅಲ್ಲ. ಯಾರು ಕೆಲಸ ಮಾಡುತ್ತಾರೋ ಅವರು ರಾಜಕಾರಣದಲ್ಲಿ ಇರುತ್ತಾರೆ. ಮಾಡದವರನ್ನು ಮನೆಗೆ ಕಳುಹಿಸುತ್ತಾರೆ. ಅವರ ಮಾತಿಗೆ ನನ್ನ ಸಂಪೂರ್ಣ ಸಹಮತ ಇದೆ. ಅವರು ಯೋಚನೆ ಮಾಡಿಯೇ ಮಾತನಾಡಿದ್ದಾರೆ. ಇದು ಎಲ್ಲಾ ಕಡೆಯೂ ಯಶಸ್ವಿಯಾಗುತ್ತದೆ ಎಂದರು.
ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ
ಆಂಜನೇಯ ಪ್ರಕರಣ ಆದಾಗ ಏನು ಕ್ರಮ ತೆಗೆದುಕೊಂಡರು. ಹಿಂದೆ ಸಿದ್ದರಾಮಯ್ಯ ಜತೆ ಸಚಿವರಾಗಿದ್ದವರು ಹಿಂದೆ ಏನಾಗಿದ್ದರು. 25-30 ವರ್ಷದ ಹಿಂದೆ ಕೆ.ಜೆ. ಜಾರ್ಜ್, ಎಂ.ಬಿ ಪಾಟೀಲ್, ಡಿ. ಕೆ. ಶಿವಕುಮಾರ್ ಏನಾಗಿದ್ದರು? ಎಲ್ಲಿ ದುಡಿದು ಸಂಪಾದನೆ ಮಾಡಿದ್ದಾರೆ ? ವೈಟಾಪಿಂಗ್ ಸ್ಟೀಲ್ ಬ್ರಿಡ್ಜ್ ನಲ್ಲಿ ಎಷ್ಟು ಲೂಟಿ ಮಾಡಲು ಮುಂದಾಗಿದ್ದರು ? 5 ವರ್ಷದ ಹಿಂದಿನದು ಜನ ಮರೆತಿದ್ದಾರೆ ಎಂದು ಭಾವಿಸಬೇಡಿ. ದೇಶಕ್ಕೆ 10 ಪರ್ಸೆಂಟ್ ಸರ್ಕಾರ ಅಂತಾ ನಿಮ್ಮ ಸರ್ಕಾರ ಫೇಮಸ್ ಆಗಿತ್ತು. ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗಿದೆ. ತಿನ್ನೋದು ಬದನೆಕಾಯಿ ಹೇಳೋದು ವೇದಾಂತ . ಇವರೆಲ್ಲರ ಆಸ್ತಿ 30 ವರ್ಷದ ಹಿಂದೆ ಎಷ್ಟು ಇತ್ತು? ಈಗ ಇರುವ ಆಸ್ತಿ ಎಲ್ಲಿ ದುಡಿದರು ಹೇಳಲಿ. ಸಿದ್ದರಾಮಯ್ಯನ ಹುಂಡಿಯಿಂದ ಬಂದೆ ಅಂತಾರೆ. ಒಂದುವರೆ ಕೋಟಿ ವಾಚ್ ಎಲ್ಲಿಂದ ಬಂತು ? ಯಾರಿಗೂ ಲಾಭ ಆಗದೇ ವಾಚ್ ಕೊಟ್ಟರಾ ? ಇಷ್ಟರ ಮಟ್ಟಿಗೆ ನಿಮ್ಮನ್ನು ಮೇಲೆ ಏರಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ? ಸುಮ್ಮನೆ ಆರೋಪ ಟಾರ್ಗೆಟ್ ಮಾಡುವುದನ್ನು ಜನ ಒಪ್ಪಲ್ಲ, ಸೊಪ್ಪು ಹಾಕಲ್ಲ. ನೀವು ಸಿಎಂ ಆದಾಗಲೇ ನಿಮ್ಮ ಕ್ಷೇತ್ರದ ಜನ ನಿಮ್ಮನ್ನು ಒಪ್ಪಲಿಲ್ಲ ಎಂದರು.
ಬಾಯಲ್ಲಿ ಕಡುಬು ಹಾಕಿಕೊಂಡಿದ್ದರಾ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ , ವು ಕಡುಬು ಹಾಕಿಕೊಂಡಿರಲಿಲ್ಲ. ನಾವು ಹೇಳಿದಕ್ಕೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದು. ಸ್ವಕ್ಷೇತ್ರದಲ್ಲಿ ಅವರನ್ನು ಜನ ಸೋಲಿಸಿದ್ದು. ಸ್ವಕ್ಷೇತ್ರದಲ್ಲಿ ಸೋತಿದ್ದು ಯಾವಾಗ ? ಸಿದ್ದರಾಮಯ್ಯ ವೈಫಲ್ಯ ಜನರಿಗೆ ನಾವು ಹೇಳಿದಕ್ಕೆ ಜನ ಅವರನ್ನು ಕಿತ್ತು ಒಗೆದಿದ್ದು ಎಂದರು.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಅಶ್ವಥ್ ನಾರಾಯಣ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶ್ವತ್ಥ್ ನಾರಾಯಣ್ ಅವರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ರಾಜಕಾರಣ. ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡುತ್ತಿದ್ದಾರೆ. ಸದ್ಯ ಪ್ರಕರಣ ತನಿಖೆ ಆಗುತ್ತಿದೆ. ತನಿಖೆ ಬಳಿಕ ನಿಜಾಂಶ ಹೊರಬರಲಿದೆ. ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದು ದ್ವೇಷದ ರಾಜಕಾರಣ. ಸಾವಿರಾರು ಕೋಟಿಯ ಸೆಮಿ ಕಂಡಕ್ಟರ್ ಯೂನಿಟ್ ಕೊಡಿಸಿದ್ದಾರೆ. ಇದನ್ನು ಹೇಳುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ. ಅದನ್ನು ಬಿಟ್ಟು ಪಿಎಸ್ಐ ಪ್ರಕರಣದಲ್ಲಿ ಸಿಕ್ಕಿಸಲು ನೋಡಬೇಡಿ. ಯಾರೋ ದರ್ಶನ್ ಗೌಡ ಸಿಕ್ಕಿ ಬಿದ್ದಿದ್ದಾನೆ, ಅವನಿಗೂ ಅಶ್ವತ್ಥ್ ನಾರಾಯಣ್ಗೂ ಸಂಬಂಧ ಇದೆ ಅಂತ ಎಳೆಯೋದು ಬೇಡ ಅಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ