ಬ್ಯಾಂಕ್ ವಿಲೀನ ವಿರೋಧಿಸಿ ಮೈಸೂರಲ್ಲಿ ಬ್ಯಾಂಕ್ ನೌಕರರ ಮುಷ್ಕರ
Team Udayavani, Mar 1, 2017, 12:44 PM IST
ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರ್ವಜನಿಕ ರಂಗದ ಬ್ಯಾಂಕ್ಗಳ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ದೇಶವ್ಯಾಪಿ ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲೂ ಬ್ಯಾಂಕಿಂಗ್ ಸೇವೆ ಸ್ತಬ್ಧವಾಗಿತ್ತು.
ಬ್ಯಾಂಕ್ ನೌಕರರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಗರದ ಅಶೋಕ ರಸ್ತೆಯಲ್ಲಿರುವ ಎಸ್ಬಿಎಂ ಪ್ರಧಾನ ಶಾಖೆ ಮುಂಭಾಗ ಸಮಾವೇಶಗೊಂಡ ಬ್ಯಾಂಕ್ ನೌಕರರು, ಎಸ್ಬಿಐ ಜೊತೆ ಸಹವರ್ತಿ ಬ್ಯಾಂಕ್ಗಳ ವಿಲೀನಕ್ಕೆ ವಿರೋಧ, ನೋಟು ಅಪನಗದೀಕರಣ ವೇಳೆ ಹೆಚ್ಚುವರಿ ಕೆಲಸಕ್ಕೆ ವಿಶೇಷ ಭತ್ಯೆ ನೀಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಗ್ರಾಚ್ಯುಟಿ ಮೇಲಿನ ತೆರಿಗೆ ವಾಪಸ್ ಪಡೆಯುವುದು, ಐಡಿಬಿಐ ಬ್ಯಾಂಕ್ಗಳ ವೇತನವನ್ನು ಪರಿಷ್ಕರಿಸುವುದು, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಜತೆ ಸಹವರ್ತಿ ಬ್ಯಾಂಕ್ಗಳನ್ನು ವಿಲೀನಗೊಳಿಸ ದಿರುವುದು, ಹೊಸ ಕಾರ್ಮಿಕ ನೀತಿಯನ್ನು ಜಾರಿಗೊಳಿಸದಿರುವುದು, ನೋಟು ಅಪನಗದೀ ಕರಣದ ವೇಳೆ ಮಾಡಿದ ಹೆಚ್ಚುವರಿ ಕೆಲಸಕ್ಕೆ ವಿಶೇಷ ಭತ್ಯೆ ನೀಡುವುದು, ವಸೂಲಾಗದ ಸಾಲಕ್ಕೆ ಉನ್ನತ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ, ಹೊರಗುತ್ತಿಗೆ ಹೆಚ್ಚಳ ಮಾಡುವ ನಿರ್ಧಾರವನ್ನು ಕೈಬಿಡಬೇಕೆಂದು ಮನವಿ ಮಾಡಿದರು.
ಮುಷ್ಕರದ ಹಿನ್ನೆಲೆಯಲ್ಲಿ ಮುಖ್ಯವಾಗಿ ಸ್ಟೇಟ್ ಬ್ಯಾಂಕ್ ಸಮೂಹ, ಕಾರ್ಪೊರೇಷನ್ ಬ್ಯಾಂಕ್, ಕೆನರಾ ಬ್ಯಾಂಕ್, ಐಡಿಬಿಐ ಬ್ಯಾಂಕ್, ಎಸ್ಬಿಐ, ಎಸ್ಬಿಎಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್ ಸೇರಿದಂತೆ ಇನ್ನಿತರ ರಾಷ್ಟ್ರೀಕೃತ ಬ್ಯಾಂಕ್ಗಳ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಉಳಿದಂತೆ ಐಸಿಐಸಿಐ, ಎಚ್ಡಿಎಫ್ಸಿ, ಆ್ಯಕ್ಸಿಸ್, ಕೊಟಕ್ ಮಹೀಂದ್ರ ಸೇರಿದಂತೆ ಹೊಸ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ