Mysuru,ಚಾಮರಾಜನಗರ ಗೆಲ್ಲಲು ಸಿದ್ದು ತಂತ್ರ:  ತವರು ಜಿಲ್ಲೆಯಲ್ಲಿ 4 ದಿನಗಳ ವಾಸ್ತವ್ಯ  

ರೆಸಾರ್ಟ್‌ನಲ್ಲೇ ಕುಳಿತು  ಮುಖಂಡರೊಂದಿಗೆ ಚರ್ಚೆ;  ಡಾ| ಮಹದೇವಪ್ಪ, ಕೆ.ವೆಂಕಟೇಶ್‌, ಯತೀಂದ್ರಗೆ ಜವಾಬ್ದಾರಿ 

Team Udayavani, Mar 26, 2024, 7:30 AM IST

Mysuru,ಚಾಮರಾಜನಗರ ಗೆಲ್ಲಲು ಸಿದ್ದು ತಂತ್ರ:  ತವರು ಜಿಲ್ಲೆಯಲ್ಲಿ 4 ದಿನಗಳ ವಾಸ್ತವ್ಯ  

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಅಖಾಡಕ್ಕಿಳಿದಿದ್ದು, ಚುನಾವಣ ಕಾರ್ಯತಂತ್ರ ಹೆಣೆಯುವಲ್ಲಿ ತಲ್ಲೀನರಾಗಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯ 4 ದಿನಗಳ ಕಾಲ ಮೈಸೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಅವರು ಸಚಿವರು, ಶಾಸಕರು ಮತ್ತು ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ.

ರವಿವಾರ ಮೈಸೂರಿಗೆ ಬಂದಿರುವ ಸಿಎಂ ಬುಧವಾರದವರೆಗೆ ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸದ್ಯಕ್ಕೆ ಎಚ್‌.ಡಿ.ಕೋಟೆ ತಾಲೂಕು ಬಳಿಯ ಕಬಿನಿ ಹಿನ್ನೀರಿನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಆಪ್ತ ಸಚಿವರಾದ ಕೆ.ವೆಂಕಟೇಶ್‌, ಡಾ| ಎಚ್‌.ಸಿ. ಮಹದೇವಪ್ಪ, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ಜತೆ ಉಳಿದುಕೊಂಡು ಶಾಸಕರು ಮತ್ತು ತಾಲೂಕು, ಹೋಬಳಿ ಮಟ್ಟದ ಮುಖಂಡರೊಂದಿಗೆ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕಡೆ ಕಾಂಗ್ರೆಸ್‌ ಶಾಸಕರಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಹೀಗಾಗಿ ನಮಗೆ ಗೆಲ್ಲುವ ಪೂರಕ ವಾತಾವರಣವಿದ್ದು ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳಲ್ಲಿ ತಲಾ 50 ಸಾವಿರ ಮುನ್ನಡೆ ಕೊಡಿಸುವುದು ಹಾಗೂ ಸೋತಿರುವ ಕ್ಷೇತ್ರಗಳಲ್ಲಿ 30 ಸಾವಿರ ಮುನ್ನಡೆ ಕೊಡಿಸುವಂತೆ ಟಾರ್ಗೆಟ್‌ ಫಿಕ್ಸ್‌ ಮಾಡಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಜಾತಿ ಸಮೀಕರಣಕ್ಕೆ ಕೈ ಹಾಕಿದ ಸಿಎಂ
ಪ್ರತಿ ಕ್ಷೇತ್ರದಲ್ಲಿ ಪ್ರಬಲ ಜಾತಿಗಳ ಮತಗಳನ್ನು ಸೆಳೆಯಲು ಮುಂದಾಗಿರುವ ಸಿಎಂ, ಆಯಾ ಜಾತಿಯ ಮುಖಂಡರ‌ನ್ನು ಕರೆದು ಆಪ್ತತೆಯಿಂದ ಮಾತನಾಡಿಸಿ, ಅವರಿಗೆ ಆಯಾ ಜಾತಿಯ ಮತಗಳನ್ನು ಹೆಚ್ಚಾಗಿ ತರಲು ಸ್ಥಳೀಯ ಮಟ್ಟದ ಉಸ್ತುವಾರಿ ವಹಿಸುತ್ತಿದ್ದಾರೆ. ಹಾಗೆಯೇ ಈ ಮುಖಂಡರು ಬೂತ್‌ ಮಟ್ಟದಲ್ಲಿರುವ ತಮ್ಮ ಜಾತಿಯ ಪ್ರಮುಖರನ್ನು ಸಂಪರ್ಕಿಸಿ ಪಕ್ಷಕ್ಕೆ ಆದಷ್ಟೂ ಹೆಚ್ಚು ಮತವನ್ನು ಕೊಡಿಸುವಂತೆ ಓಲೈಸುವಲ್ಲಿ ನಿರತರಾಗಿದ್ದಾರೆ. ಜತೆಗೆ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾಕ ಮತಗಳು ವಿಭಾಗ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದು ಚಾಮರಾಜನಗರ ಕ್ಷೇತ್ರದ ಜವಾಬ್ದಾರಿಯನ್ನು ಮಹದೇವಪ್ಪ ಹೆಗಲಿಗೆ ಹಾಕಿದ್ದು, ಪುತ್ರ ಯತೀಂದ್ರಗೆ ವರುಣಾ, ಎಚ್‌.ಡಿ.ಕೋಟೆ, ನಂಜನಗೂಡು ಭಾಗದ ಜವಾಬ್ದಾರಿ ವಹಿಸಿದ್ದರೆ, ಮೈಸೂರು ಗ್ರಾಮಾಂತರ ಭಾಗದ ಜವಾಬ್ದಾರಿಯನ್ನು ಸಚಿವ ಕೆ.ವೆಂಕಟೇಶ್‌ಗೆ ನೀಡಿ ಲಕ್ಷ್ಮಣ್‌ ಪರ  ಸ್ಥಳೀಯರನ್ನು ಒಗ್ಗೂಡಿಸುವಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

– ಸತೀಶ್‌ ದೇಪುರ

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.