Mysore; ರಾಮ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ: ಜಿಟಿ ದೇವೇಗೌಡ


Team Udayavani, Jan 20, 2024, 12:12 PM IST

Mysore; ರಾಮ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ: ಜಿಟಿ ದೇವೇಗೌಡ

ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಕೆತ್ತಲಾಗಿರುವ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿರುವ ಹಾರೋಹಳ್ಳಿಯ ಸ್ಥಳ ಇದೀಗ ಧಾರ್ಮಿಕ ಸ್ಥಳವಾಗಿದೆ. ಜನರು ಈಗಾಗಲೇ ಸ್ಥಳಕ್ಕೆ ಬಂದು ಪೂಜೆ ಮಾಡುತ್ತಿದ್ದಾರೆ. ಇದೀಗ ಈ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಘೋಷಿಸಿದ್ದಾರೆ.

ಜನವರಿ 22ರಂದು ಶಿಲೆ ಸಿಕ್ಕ ಜಾಗದಲ್ಲಿ ಭೂಮಿ ಪೂಜೆ ಮಾಡುತ್ತೇವೆ. ನಂತರ ಎಲ್ಲಾ ಜನರ ಬಳಿ ದೇಣಿಗೆ ಸಂಗ್ರಹ ಮಾಡಿ ಮಂದಿರ ನಿರ್ಮಾಣ ಮಾಡುತ್ತೇವೆ. ಇದಕ್ಕೆ ಜಮೀನು ಮಾಲೀಕ ರಾಮದಾಸ್ ಕೂಡ ಒಪ್ಪಿದ್ದಾರೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದರು.

ಮೈಸೂರಿನ ಜನದರ್ಶಿನಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ದೇಶದ ಜನರು ಎದುರು ನೋಡುತ್ತಿರುವ ಬಾಲ ರಾಮನ ವಿಗ್ರಹವು ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿಯ ದಲಿತ ಸಮುದಾಯದ ಮುಖಂಡ ರಾಮದಾಸ್ ಜಮೀನಿನಲ್ಲಿ ಸಿಕ್ಕ ಕೃಷ್ಣ ಶಿಲೆಯಲ್ಲಿ ಆಗಿದೆ. ಇದು ನಮಗೆಲ್ಲ ಸಂತೋಷ. ಇದು ನಮ್ಮ ದಲಿತ ಬಾಂಧವರ ಜಮೀನಿನಲ್ಲಿ ಮೂಡಿ ಬಂದಿರುವ ಶಿಲೆ. ಈ ಶಿಲೆಯನ್ನ ಕೆತ್ತನೆ ಮಾಡಿರುವವರು ನಮ್ಮ ಮೈಸೂರಿನವರು. ಕೃಷ್ಣ ಶಿಲೆಯನ್ನ ಹುಡುಕಿದ್ದ ಶ್ರೀನಿವಾಸ್ ಕೂಡ ನಮ್ಮ ಮೈಸೂರಿನವರು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿದ್ದ ವೇಳೆ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಅದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿದೆ. ಜ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತದೆ. ಅದೇ ವೇಳೆ ಕೃಷ್ಣ ಶಿಲೆ ಸಿಕ್ಕ ಸ್ಥಳದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಆಭಾರಿಯಾಗಿರುತ್ತೇನೆ ಎಂದು ಹೇಳಿದರು.

ರಾಮಲಲ್ಲಾ ಮೂರ್ತಿಗೆ ಶಿಲೆ ಕೊಟ್ಟ ಜನರಿಗೆ ದೇವರ ದರ್ಶನ ಮಾಡಿಸುವ ವ್ಯವಸ್ಥೆ ಮಾಡುತ್ತೇವೆ. ಜನವರಿ 27ಕ್ಕೆ ಅರುಣ್ ಯೋಗಿರಾಜ್ ಮೈಸೂರಿಗೆ ಬರುತ್ತಾರೆ. ಅವರ ಜೊತೆ ಮಾತನಾಡಿ ಇವರನ್ನು (ರಾಮದಾಸ್) ಹೇಗೆ ಅಯೋಧ್ಯೆಗೆ ಕರೆದುಕೊಂಡು ಹೋಗಬೇಕು ತೀರ್ಮಾನ ಮಾಡುತ್ತೇವೆ. ಜನರಿಗೆ 22 ರಂದು ಇವರೆಲ್ಲರಿಗೂ ಗೌರವ ಸಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಶಾಸಕ ಜಿಟಿ.ದೇವೇಗೌಡ ಹೇಳಿದರು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.