ಮೈಸೂರು ಕೋರ್ಟ್‌ನಲ್ಲಿ ಸ್ಪೋಟ: ಮೂವರು ದೋಷಿಗಳು

ಬೆಂಗಳೂರಿನ ಎನ್‌ಐಎ ಕೋರ್ಟ್‌ನಿಂದ ತೀರ್ಪು ಅ.11ರಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ

Team Udayavani, Oct 9, 2021, 1:01 PM IST

Mysore court blast case –

Representative Image

ಬೆಂಗಳೂರು: ಐದು ವರ್ಷಗಳ ಹಿಂದೆ ಮೈಸೂರು ನ್ಯಾಯಾಲಯದ ಆವರಣದಲ್ಲಿ ನಡೆದಿದ್ದ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್‌-ಖೈದಾ ಸಂಘಟನೆ ಪ್ರೇರಿತ ಬೆಸ್‌ ಮೂಮೆಂಟ್‌ ಸಂಘಟನೆಯ ಮೂವರು ಉಗ್ರರನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾದಳ(ಎನ್‌ಐಎ) ಕೋರ್ಟ್‌ ಅಪರಾಧಿಗಳು ಎಂದು ಆದೇಶ ನೀಡಿದ್ದು, ಅ.11ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ತಮಿಳುನಾಡಿನ ನೈನಾರ್‌ ಅಬ್ಟಾಸ್‌ ಅಲಿ ಅಲಿಯಾಸ್‌ ಲೈಬ್ರರಿ ಅಬ್ಟಾಸ್‌(34), ಸಮ್‌ಸುನ್‌ ಅಬ್ದುಲ್‌ ಕರೀಂ ರಾಜ ಅಲಿಯಾಸ್‌ ಅಬ್ದುಲ್‌ ಕರೀಂ(36) ಮತ್ತು ದಾವೂದ್‌ಸುಲೈಮನ್‌(40) ಅಪರಾಧಿಗಳಾಗಿದ್ದಾರೆ. ಅವರ ಶಿಕ್ಷೆ ಪ್ರಮಾಣವನ್ನು ಅ.11ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. ಎನ್‌ಐಎ ಪರ ಸರ್ಕಾರಿ ಅಭಿಯೋಜಕರಾಗಿ ವಕೀಲ ಪಿ.ಪ್ರಸನ್ನ ಕುಮಾರ್‌ವಾದ ಮಂಡಿಸಿದ್ದರು.

ಇದನ್ನೂ ಓದಿ;- ‘ಸಲಗ’ನಿಗೆ ‘ಟಗರು’ ಸಾಥ್‌!

2016 ಆ.1ರಂದು ಮೈಸೂರಿನ ಚಾಮರಾಜಪುರಂ ಕೋರ್ಟ್‌ ಆವರಣದಲ್ಲಿರುವ ಸಾರ್ವಜನಿಕರ ಶೌಚಾಲಯದ ಬಳಿ ಅಡುಗೆಯ ಕುಕ್ಕರ್‌ನಲ್ಲಿ ಬಾಂಬ್‌ ಇಟ್ಟು ಸ್ಫೋಟಿಸಿದ್ದರು. ಈ ಸಂಬಂಧ ಲಕ್ಷೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದಲ್ಲಿ ಭಯೋತ್ಪಾದನೆ ಕರಿ ನೆರಳು ಕಂಡ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ಆದೇಶಿಸಿತ್ತು.

ಬಳಿಕ ಎನ್‌ಐಎ ಅಧಿಕಾರಿಗಳು ಪ್ರತ್ಯೇಕವಾಗಿ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿತ್ತು. 2017 ಮೇ 24ರಂದು ಕೋರ್ಟ್‌ಗೆ ಅವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿತ್ತು.

ಅಪರಾಧಿಗಳ ಪೈಕಿ ನೈನಾರ್‌ ಅಬ್ಟಾಸ್‌ ಅಲಿ ಅಲಿಯಾಸ್‌ ಲೈಬ್ರರಿ ಅಬ್ಟಾಸ್‌ ಸ್ಫೋಟಕ ವಸ್ತುಗಳನ್ನು ತಯಾರು ಮಾಡಿದ್ದ. ಎರಡನೇ ಅಪರಾಧಿ ಅಬ್ದುಲ್‌ ಕರೀಂ ಕೋರ್ಟ್‌ ಆವರಣಕ್ಕೆ ಹೋಗಿ ಸಾರ್ವಜನಿಕರು ಯಾವ ಪ್ರಮಾಣದಲ್ಲಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿದ್ದ. ಮೂರನೇ ಅಪರಾಧಿ ದಾವುದ್‌ ಸುಲೈಮನ್‌ ಬ್ಯಾಗ್‌ವೊಂದರಲ್ಲಿ ಅಡುಗೆ ಕುಕ್ಕರ್‌ ಒಳಗಡೆ ಸ್ಫೋಟಕ ಇಟ್ಟು ನ್ಪೋಟಿಸಿದ್ದ ಎಂಬುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಐದು ಸ್ಫೋಟಕ ಪ್ರಕರಣ ಪತ್ತೆ: ಅಪರಾಧಿಗಳ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕದ ಮೈಸೂರು ಸೇರಿ ದೇಶದಲ್ಲಿಟ್ಟಿದ್ದ ಸ್ಫೋಟಕ ಪ್ರಕರಣಗಳು ಪತ್ತೆಯಾಗಿವೆ. ಅಲ್‌-ಖೈದಾ ಸಂಘಟನೆಯಿಂದ ಪ್ರೇರಣೆಗೊಂಡು ಸ್ಫೋಟ ನಡೆಸುತ್ತಿದ್ದ ಅಪರಾಧಿಗಳು, 2016 ಏಪ್ರಿಲ್‌ 7ರಂದು ಆಂಧ್ರಪ್ರದೇಶದ ಚಿತ್ತೂರು ಕೋರ್ಟ್‌, ಮೇ 15ರಂದು ಕೇರಳದ ಕೊಲ್ಲಂ ಕೋರ್ಟ್‌, ಸೆ.12 ರಂದು ಆಂಧ್ರಪ್ರದೇಶದ ಚಿತ್ತೂರು ಕೋರ್ಟ್‌, ನವೆಂಬರ್‌ 1ರಂದು ಕೇರಳದ ಮಲ್ಲ ಪುರಂ ಕೋರ್ಟ್‌ ಆವರಣ ಮತ್ತು ಆ.1ರಂದು ಮೈಸೂರು ಕೋರ್ಟ್‌ ಆವರಣದ ಸ್ಫೋಟಕ ಪ್ರಕರಣಗಳು ಪತ್ತೆಯಾಗಿವೆ ಎಂದು ಎನ್‌ಐಎ ತಿಳಿಸಿದೆ.

ಅಲ್‌ಖೈದಾ ಪ್ರೇರಿತ ಬೆಸ್‌ಮೂಮೆಂಟ್‌ ತಮಿಳುನಾಡು ಮೂಲದ ಅಪರಾಧಿಗಳು ಅಲ್‌ಖೈದಾ ಸಂಘಟನೆ ಮುಖ್ಯಸ್ಥ ಒಸಮಾ ಬಿನ್‌ ಲಾಡೆನ್‌ ಸಿದ್ಧಾಂತಗಳಿಂದ ಪ್ರೇರಿತಗೊಂಡು ನೈನಾರ್‌ ಅಬ್ಟಾಸ್‌ ಅಲಿ ಅಲಿಯಾಸ್‌ ಲೈಬ್ರರಿ ಅಬ್ಟಾಸ್‌ ಮತ್ತು ದಾವೂದ್‌ ಸುಲೈಮನ್‌ 2015ರಲ್ಲಿ ತಮಿಳುನಾಡಿನಲ್ಲಿ ಬೆಸ್‌ ಮೂಮೆಂಟ್‌ ಸಂಘಟನೆ ಸದಸ್ಯರಾಗಿದ್ದರು. ನಂತರ ಸಾಕಷ್ಟು ಮಂದಿಯನ್ನು ಸಂಘಟನೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ತೊಡಗಿದ್ದರು.

ಈ ವೇಳೆ ಸರ್ಕಾರಿ ಕಚೇರಿಗಳು, ಮುಖ್ಯವಾಗಿ ನ್ಯಾಯಾಲಯಗಳಿಗೆ ಬೆದರಿಕೆಯೊಡ್ಡಲು ಸಂಚು ರೂಪಿಸಿದ್ದರು. ಅಲ್ಲದೆ, ನಿರ್ದಿಷ್ಟ ಧಾರ್ಮಿಕ ಸಮುದಾಯಕ್ಕೆ ಆದಂತಹ ಅನ್ಯಾಯದ ವಿರುದ್ಧ ಹೋರಾಟದ ಹೆಸರಿನಲ್ಲಿ ಕೋರ್ಟ್‌ಗಳು, ವಿವಿಧ ರಾಜ್ಯಗಳ ಪೊಲೀಸ್‌ ಅಧಿಕಾರಿಗಳು ಮತ್ತು ಮುಖ್ಯವಾಗಿ ಭಾರತದಲ್ಲಿರುವ ಫ್ರೆಂಚ್‌ ರಾಯಭಾರಿ ಕಚೇರಿಗಳ ಮೇಲೆ ದಾಳಿ ನಡೆಸಿ ಬೆದರಿಕೆಯೊಡುತ್ತಿದ್ದರು ಎಂದು ಎನ್‌ಐಎ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.