ಮೈಸೂರಲ್ಲಿಂದು ದಸರಾ ಸಾಂಸ್ಕೃತಿಕ ಮೆರವಣಿಗೆ
Team Udayavani, Oct 14, 2018, 6:00 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಸಕಲಾ ತಂಡಗಳಿಗೆ ಹೆಚ್ಚಿಅವಕಾಶ ಸಿಗುವುದಿಲ್ಲ ಎಂಬ ಹಲವು ವರ್ಷಗಳ ಕೊರಗನ್ನು ಹೋಗಲಾಡಿಸಲು ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ದಸರಾ ಸಾಂಸ್ಕೃತಿಕ ಮೆರವಣಿಗೆ ಆಯೋಜಿಸಿದೆ.
750 ಕೆ.ಜಿ.ತೂಕದ ಚಿನ್ನದ ಅಂಬಾರಿ, ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ ಮೂಲಕ ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳು ಇರುವುದಿಲ್ಲ ಎಂಬುದನ್ನು ಬಿಟ್ಟರೆ, ಜಂಬೂಸವಾರಿ ಮೆರವಣಿಗೆ ಮಾದರಿಯಲ್ಲೇ ಅದೇ ಮಾರ್ಗದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಅರಮನೆ ಬಲರಾಮ ದ್ವಾರದಿಂದ ಬನ್ನಿಮಂಟಪ ಮೈದಾನದವರೆಗೆ ಜಂಬೂಸವಾರಿ ಸಾಗುವ ಮಾರ್ಗದಲ್ಲೇ ಮೆರವಣಿಗೆಯಲ್ಲಿ ಸಾಗುವ ಸ್ಥಳೀಯ ಕಲಾವಿದರ ವಿವಿಧ ತಂಡಗಳು, ಕಲಾ ಸ್ಪರ್ಶ ನೀಡಲಿವೆ. ಭಾನುವಾರ 2ರಿಂದ 2.30ರ ನಡುವೆ
ಡಿಸಿಎಂ ಡಾ.ಜಿ.ಪರಮೇಶ್ವರ ಅವರು ದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಯೋಗ ಚಾರಣ: ಈ ಮಧ್ಯೆ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಶನಿವಾರ ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರಕ್ಕೆ ಸಚಿವ ಸಾ.ರಾ.ಮಹೇಶ್ ಚಾಲನೆ ನೀಡಿದರು. ನೂರಾರು ಯೋಗಾಸಕ್ತರು ಸಹಸ್ರ ಮೆಟ್ಟಿಲೇರಿ ಚಾಮುಂಡಿಬೆಟ್ಟಕ್ಕೆ ತೆರಳಿ ದುರ್ಗಾ ನಮಸ್ಕಾರ ಹಾಗೂ ಯೋಗಪ್ರದರ್ಶನ ನೀಡಿದರು. ಅಲ್ಲದೆ, ನಗರದಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್ ಕೂಡ ಆಯೋಜಿಸಲಾಗಿತು. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಶನಿವಾರ ವೈಮಾನಿಕ ಪ್ರದರ್ಶನದ ಪೂರ್ವ ಭಾವಿ ತಾಲೀಮು ನಡೆಯಿತು. ಸುಡುಬಿಸಿಲಿನನಡುವೆಯೂ ಪಂಜಿನ ಕವಾಯತು ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಕಮಾಂಡೋಗಳು ನಡೆಸಿಕೊಟ್ಟ ಸಾಹಸ ಪ್ರದರ್ಶನಕ್ಕೆ ಮನಸೋತರು.
ಟಾಂಗಾ ಸವಾರಿ ಮೆರಗು: ಮೈಸೂರಿನ ಪಾರಂಪರಿಕ ಕಟ್ಟಡಗಳ ಕುರಿತು ಜನಸಾಮಾನ್ಯರು ಹಾಗೂ ಪ್ರವಾಸಿಗರಿಗೆ
ಪರಿಚಯ ಮಾಡಿಕೊಡುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಪಾರಂಪರಿಕ ಟಾಂಗಾ ಸವಾರಿ ಗಮನ ಸೆಳೆಯಿತು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿ ಕಾರ್ಯಕ್ರಮ
ಆಯೋಜಿಸಲಾಗಿತ್ತು. ನಗರದಪುರಭವನದಿಂದ ಆರಂಭಗೊಂಡ ಟಾಂಗಾ ಸವಾರಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.
ಮಹೇಶ್ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ