ಬರೀ 1 ತಾಸಿಗೆ ಸೀಮಿತವಾಗಿದ್ದ ಜಿಲ್ಲಾಧಿಕಾರಿ ನಡೆ

ಡೀಸಿ ಬಂದರೂ ಸ್ಥಳದಲ್ಲಿ ಪರಿಹಾರ ಕಾಣದ ಸಮಸ್ಯೆ! 6 ತಾಸು ತಡವಾಗಿ ರೋಹಿಣಿ ಸಿಂಧೂರಿ ಆಗಮನ

Team Udayavani, Mar 21, 2021, 7:51 PM IST

Untitled-2

ಎಚ್‌.ಡಿ.ಕೋಟೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ ಕೇವಲ ಒಂದು ತಾಸಿಗೆ ಮಾತ್ರ ಸೀಮಿತ ವಾಗಿತ್ತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬರೋಬ್ಬರಿ 6 ತಾಸು ತಡವಾಗಿ ಆಗಮಿಸಿದ್ದರಿಂದ ‌ ಗೊಂದಲದಲ್ಲಿ ಆರಂಭಗೊಂಡ ಸಭೆ ಒಂದೇ ತಾಸಿನಲ್ಲಿ ಗೊಂದಲದಲ್ಲಿಯೇ ತರಾತುರಿಯಲ್ಲಿ ಅಂತ್ಯಗೊಂಡಿತು.

ಇದು ತಾಲೂಕಿನ ಎಲೆಹುಂಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದಲ್ಲಿ ಕಂಡು ಬಂದ ಪ್ರಸಂಗ. ಎಲೆಹುಂಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕಾರ್ಯಕ್ರಮ ಬೆಳಗಿನ 10 ಗಂಟೆಯಿಂದ ಸಂಜೆ 5 ಗಂಟೆ ತನಕ ನಿಗದಿಪಡಿಸಲಾಗಿತ್ತು. ಜಿಲ್ಲಾಧಿಕಾರಿಗಳು ಆಗಮಿಸು ವುದರಿಂದ ನಮ್ಮೂರಿನ ಸಮಸ್ಯೆ ಪರಿಹಾರದ ಜೊತೆಗೆ ಸರ್ಕಾರಿ ಸಲವತ್ತುಗಳ ವಂಚಿತರಿಗೆ ಸವಲತ್ತುಗಳು ದೊರೆಯುತ್ತವೆ. ಸ್ಥಳದಲ್ಲಿಯೇ ಹಲವು ಸಮಸ್ಯೆಗಳು ಪರಿಹಾರ ಕಾಣುತ್ತವೆ  ಎಂಬ ಮಹದಾಸೆಯಿಂದ ಮುಂಜಾನೆಯಿಂದ ಕಾರ್ಯಕ್ರಮ ಆಯೋಜನೆ ಗೊಂಡಿದ್ದ ಜಾಗದಲ್ಲಿ ಅಪಾರ ಪ್ರಮಾಣದಲ್ಲಿ ಜನರು ಕಾದು ನಿಂತಿದ್ದರು.

6 ತಾಸು ತಡವಾಗಿ ಬಂದ ಡೀಸಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಮೈಸೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಶಿಷ್ಟಾಚಾರದಂತೆ ಜಿಲ್ಲಾಧಿಕಾರಿಗಳು ನ್ಯಾಯಾ ಧೀಶರನ್ನು ಸ್ವಾಗತಿಸುವ ಸಲುವಾಗಿ ಮೈಸೂ ರಿನಲ್ಲೇ ಉಳಿದುಕೊಂಡಿದ್ದರು. ಹೀಗಾಗಿ 10 ಗಂಟೆಗೆ ಬರಬೇಕಾಗಿದ್ದ ಜಿಲ್ಲಾಲ್ಲಾಧಿಕಾರಿಗಳು 6 ಗಂಟೆ ತಡವಾಗಿ ಎಲೆಹುಂಡಿ ಗ್ರಾಮಕ್ಕೆ ಭೇಟಿ ನೀಡಿದರು.

ವೇದಿಕೆಗೆ ಆಗಮಿಸುವ ವೇಳೆಗೆ 3 ಗಂಟೆಯಾಗಿತ್ತು. ಅಲ್ಲಿಂದ ನೇರ ಭೀಮ ನಹಳ್ಳಿ ಆಶ್ರಮ ಶಾಲೆಗೆ ತೆರಳಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೋಜನ ಮುಗಿಸಿ ಅಹವಾಲು ಆಲಿಸುವ ಸ್ಥಳಕ್ಕೆ ಆಗಮಿಸುವಾಗ ಸಂಜೆ 4 ಗಂಟೆ ಯಾಗಿತ್ತು.

ತರಾತುರಿ‌ ಸಭೆ: ಗೊಂದಲದೊಂದಿಗೆ ಆರಂಭಗೊಂಡ ಸಭೆಯಲ್ಲಿ ಬಹುಸಂಖ್ಯೆಯಲ್ಲಿ ರೈತರ ಜಮೀನುಗಳ ರಸ್ತೆ, ಓಣಿ ಒತ್ತುವರಿ, ಹಲವಾರು ವರ್ಷಗಳಿಂದಲೂ ಕೃಷಿ ನಡೆಸುತ್ತಿರುವ ಭೂಮಿಗೆ ಏಕವ್ಯಕ್ತಿ ದುರಸ್ತಿ ಮಾಡದೇ ಇರುವುದು, ಲಂಚ ನೀಡದೆ ಕಂದಾಯ ಇಲಾಖೆ ಅಧಿಕಾರಿಗಳು ರೈತರ ಕೆಲಸ ಕಾರ್ಯಗಳನ್ನು ನೆರವೇರಿಸುತ್ತಿಲ್ಲ. ಹಲವು ಮಂದಿಗೆ ವಾಸಕ್ಕೆ ನಿವೇಶನವೇ ಇಲ್ಲ, ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ತಡೆಗೆ ರೈಲ್ವೆಕಂಬಿಗಳನ್ನು ಅಳವಡಿಬೇಕು ಎಂಬ ದೂರುಗಳು ಸಭೆಯಲ್ಲಿ ಕೇಳಿ ಬಂದವು. ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸಂಬಂಧ ಪಟ್ಟ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ತ್ವರಿತಗತಿ ಯಲ್ಲಿ ಸರಿಪಡಿಸುವ ಭರವಸೆ ನೀಡಿದರು.

ಏಕ ವ್ಯಕ್ತಿ ದುರಸ್ತಿ ಕಾರ್ಯ ಮಾಡುವುದು ಕಷ್ಟಕರ, ಇರುವ ಭೂಮಿ ವಿಸ್ತೀರ್ಣಕ್ಕಿಂತ ಹೆಚ್ಚಿನ ಸಾಗುವಳಿ ಪತ್ರ ವಿತರಿಸ ಲಾಗಿದೆ. ಇದರಿಂದ ಗೊಂದಲ ಉಂಟಾಗುವುದರನ್ನು ಸರಿಪಡಿಸಲು ನಿಯಮ ಪಾಲನೆ ಮಾಡಿ ಎಲ್ಲಾ ಭೂಮಿ ಒಟ್ಟಿಗೆ ಸರ್ವೆ ನಡೆಸಿ ದುರಸ್ತಿಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

ನಿರಾಸೆ ಜನ: ಜಿಲಾಧಿಕಾರಿ ಆಗಮನದಿಂದ ಸ್ಥಳದಲ್ಲಿಯೇ ಬಹುತೇಕ ಸಮಸ್ಯೆಗಳು ಪರಿಹಾರವಾಗು ತ್ತವೆ ಅನ್ನುವ ಮಹದಾಸೆ ಹೊಂದಿದ್ದ ಜನರಿಗೆ ಸ್ಥಳದಲ್ಲಿ ಒಂದೂ ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಜನರು ನಿರಾಸೆ ವ್ಯಕಪಡಿಸಿದರು.

ಅಂಗವಿಕಲನ ದೂರಿಗೆ ಸ್ಪಂದನೆ ಇಲ್ಲ: ಸುಮಾರು ‌ 35 ವರ್ಷಗಳ ಹಿಂದಿನಿಂದಲೂ ಎಲೆಹುಂಡಿ ಗ್ರಾಮದ ರಸ್ತೆಬದಿಯಲ್ಲಿ ವಾಸಿವಾಗಿದ್ದು ಅಂಗವಿಕಲ ರಾಮಯ್ಯ, ಜಿಲ್ಲಾಧಿಕಾರಿಗಳಿಂದ ನಿವೇಶನ ಮಂಜೂರು ಮಾಡುವಂತೆ ಮನವಿ ಮಾಡಿಕೊಳ್ಳಲು ವೇದಿಕೆಯತ್ತ ಆಗಮಿಸಿದರು. ಈ ವೇಳೆ ಆತನ ದೂರನ್ನೂ ಆಲಿಸಲಿಲ್ಲ. ಜಿಲ್ಲಾಧಿಕಾರಿ ಮತ್ತು ತಂಡವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರಾಮಯ್ಯ ಅಲ್ಲಿಂದ ನಿರ್ಗಮಿಸಬೇಕಾಯಿತು. ಅವ್ಯವಸ್ಥೆ: ಜಿಲ್ಲಾಧಿಕಾರಿ ಬಳಿ ಸಮಸ್ಯೆ ಹೇಳಿಕೊಳ್ಳಲು ನೂರಾರು ಮಂದಿ ಅದರಲ್ಲೂ ವಿಶೇಷವಾಗಿ ಮಹಿಳೆಯರೇ ಬಹುಸಂಖ್ಯೆಯಲ್ಲಿ ಅಗಮಿಸಿದ್ದರು . ಆದರೆ, ಅಲ್ಲಿ ಶೌಚಾಲಯ ಇರಲಿ, ಕನಿಷ್ಠ ಪಕ್ಷ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಒಂದು ಕಡೆ ಊಟವೂ ಇಲ್ಲದೆ ಕುಡಿಯಲು ನೀರೂ ಇಲ್ಲದೆ, ಕುಳಿತುಕೊಳ್ಳಲು ಸಮರ್ಪಕ ಆಸನಗಳ ವ್ಯವಸ್ಥೆಗಳೂ ಇಲ್ಲದೆ ಜನ ಪರದಾಡಿದರು. ಕಡೆಗೆ ತಾಲೂಕು ಆಡಳಿತಕ್ಕೆ ಹಿಡಿ ಶಾಪಹಾಕಿ ತೆರಳುತ್ತಿದ್ದ ದೃಶ್ಯಗಳು ಕಂಡುಬಂದವು.

ಒಟ್ಟಾರೆ ಇಷ್ಟೆಲ್ಲಾ ಬೆಳವಣಿಗೆಗಳು ಕೇವಲ 1 ತಾಸಿನಲ್ಲಿ ನಡೆಯಿತು. ಸ್ಥಳದಲ್ಲಿ ಬೆರಳೆಣಿಯಷ್ಟು ಸಮಸ್ಯೆಗಳು ಪರಿಹಾರವಾಗದೇ ಇದ್ದದ್ದಕ್ಕೆ ನೆರೆದಿದ್ದ ಜನರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಧವಾ ವೇತನ, ಅಂಗವಿಲವೇತನ ಸೇರಿದಂತೆ ಒಂದೆರಡು ಸರ್ಕಾರಿ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಈ ವೇಳೆ ಜಿಪಂ ಸಿಇಒ ಯೋಗೇಶ್‌, ಉಪವಿಭಾಗಾಧಿಕಾರಿ ವೀಣಾ, ರಾಜಸ್ವ ನಿರೀಕ್ಷ ಮಹೇಶ್‌ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ, ತಾಪಂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.