ಮೈಸೂರು ಜಿಲ್ಲೆಯಲ್ಲಿ ನಿತ್ಯ 10 ಸಾವಿರ ಟೆಸ್ಟ್ ಗೆ ಗುರಿ
ಕೋವಿಡ್ ನಿರ್ವಹಣೆಗೆ ವಿಶೇಷಕಾರ್ಯಪಡೆ ರಚನೆಗೆ ಸಿದ್ಧತೆ: ಡಾ. ವೆಂಕಟೇಶ್
Team Udayavani, Oct 6, 2020, 1:03 PM IST
ಮೈಸೂರು: ಜಿಲ್ಲೆಯಲ್ಲಿ ಪ್ರತಿದಿನ 10 ಸಾವಿರ ಕೋವಿಡ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಕೋವಿಡ್ ನಿರ್ವಹಣೆಗೆ ವಿಶೇಷ ಕಾರ್ಯಪಡೆ ರಚನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.
ಕೋವಿಡ್ ಚಿಕಿತ್ಸೆ ಹಾಸಿಗೆಗಳ ಪಾರದರ್ಶಕ ವ್ಯವಸ್ಥೆಗೆ ಬೆಂಗಳೂರು ಮಾದರಿಯಲ್ಲಿ ಆ್ಯಪ್ ಬಳಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲೂ ಶೇ.50ರಷ್ಟು ಬೆಡ್ ಗಳನ್ನುಕೋವಿಡ್ ಚಿಕಿತ್ಸೆಗಾಗಿ ಕಾಯ್ದಿರಿಸಬೇಕು ಎಂದರು.
ಹಳೇವರದಿಹಿನ್ನೆಲೆ ಪಾಸಿಟಿವ್ ಸಂಖ್ಯೆಹೆಚ್ಚಳ: ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ಕೋವಿಡ್ ಪ್ರಕರಣಗಳ ಅಪ್ ಡೇಟ್ಗೆ ಹಿನ್ನಡೆಯಾಗಿತ್ತು. ಇದೀಗ ಹಳೆ ಪ್ರಕರಣಗಳನ್ನೂ ಅಪ್ಡೇಟ್ ಮಾಡಲಾಗುತ್ತಿದೆ. ಹಾಗಾಗಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ ಎಂದು ಹೇಳಿದರು.
ಕಳೆದ 12 ದಿನಗಳಿಂದ ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ಕೊರೊನಾ ಪ್ರಕರಣಗಳ ಅಪ್ಡೇಟ್ಗೆ ಹಿನ್ನಡೆಯಾದ ಹಿನ್ನೆಲೆ ಹಳೆ ಪ್ರಕರಣಗಳನ್ನೂ ಅಪ್ಡೇಟ್ ಮಾಡುತ್ತಿರುವುದರಿಂದ ಪಾಸಿಟಿವ್ ಕೇಸ್ಗಳ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಸೋಮವಾರವೂ 910 ಮಂದಿಯಲ್ಲಿ ಸೋಂಕು ಹರಡಿರುವುದು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.
910 ಮಂದಿಗೆ ಸೋಂಕು ದೃಢ : ಮೈಸೂರು ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ಎಂದಿನಂತೆ ಮುಂದುವರಿದಿದ್ದು, 910 ಹೊಸ ಪಾಸಿಟಿವ್ ಕೇಸ್ಗಳಿಂದ ಒಟ್ಟು ಸೋಂಕಿತರ ಸಂಖ್ಯೆ 38,238ಕ್ಕೆ ಏರಿಕೆಯಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಸೋಂಕಿಗೆ8 ಮಂದಿ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 818ಕ್ಕೆ ಹೆಚ್ಚಳವಾಗಿದೆ. ಪಾಸಿಟಿವ್ ಕೇಸ್ಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದ ಹಿನ್ನೆಲೆ ಜನತೆ ತುಸು ನಿಟ್ಟುಸಿರು ಬಿಡುವಂತಾಗಿದೆ. ಸೋಮವಾರ 427 ಮಂದಿ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ29,208 ಮಂದಿ ಗುಣಮುಖರಾಗಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ 8,212 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!