ಮೈಸೂರು ದಸರಾ; 90 ದಿನಗಳ ಕಾಲ ನಡೆಯಲಿರುವ ವಸ್ತುಪ್ರದರ್ಶನ

ಈ ಬಾರಿಯ ವಸ್ತು ಪ್ರದರ್ಶನ ಹಲವಾರು ವಿಶೇಷತೆಗಳಿಂದ ಕೂಡಿರುವಂತೆ ಮಾಡಲಿದೆ

Team Udayavani, Sep 27, 2022, 1:32 PM IST

ಮೈಸೂರು ದಸರಾ; 90 ದಿನಗಳ ಕಾಲ ನಡೆಯಲಿರುವ ವಸ್ತುಪ್ರದರ್ಶನ

ಮೈಸೂರು: ಸ್ಥಳೀಯ ಹಾಗೂ ಹೊರ ರಾಜ್ಯ, ದೇಶಗಳ ಪ್ರೇಕ್ಷಕರನ್ನು ಕೈ ಬೀಸಿ ಕರೆಯುವ ದಸರಾ ವಸ್ತು ಪ್ರದರ್ಶನ ಈ ಬಾರಿಯ ದಸರೆಯಲ್ಲೂ ಅರೆಬರೆಯಲ್ಲಿ ಚಾಲನೆ ಪಡೆದುಕೊಂಡಿತು.

ಶೇ.80 ರಷ್ಟು ಮಳಿಗೆಗಳು ಭರ್ತಿ ಆಗುವ ಜತೆಗೆ ಎಲ್ಲಾ ಜಿಲ್ಲೆಗಳ ಜಿಪಂ ಮಳಿಗೆಗಳು ಭರ್ತಿಗಳು ತೆರೆದಿವೆ ಎನ್ನುವ ಮಾತನ್ನೂ ಹೇಳಿಕೊಂಡು ಬಂದಿದ್ದರೂ ಅರ್ಧಕ್ಕೆ ಅರ್ಧ ಮಳಿಗೆಗಳು ಖಾಲಿಯಾಗಿತ್ತು. ಮೇಲೆ ಥಳಕು-ಒಳಗೆ ಹುಳುಕು ಎನ್ನುವ ಗಾದೆ ಮಾತಿನಂತೆ ವಸ್ತುಪ್ರದರ್ಶನದ ಆವರಣದಲ್ಲಿ ವಿದ್ಯುತ್‌ ದೀಪಾಲಂಕಾರ, ತಳಿರು-ತೋರಣಗಳನ್ನು ಕಟ್ಟಿ ಸಿಂಗಾರ ಮಾಡಿದ್ದರೂ ಒಳಗೆ ಮಾತ್ರ ನೀರಸವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನು ಬರಮಾಡಿಕೊಂಡರಲ್ಲದೆ, ಟೇಪು ಕತ್ತರಿಸಿ ಉದ್ಘಾಟಿಸಿದರು. ನಂತರ, ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ 90 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಬೇಕು. ಈ ಬಾರಿಯ ವಸ್ತು ಪ್ರದರ್ಶನ ಹಲವಾರು ವಿಶೇಷತೆಗಳಿಂದ ಕೂಡಿರುವಂತೆ ಮಾಡಲಿದೆ ಎಂದರು.

ವಸ್ತು ಪ್ರದರ್ಶನದಲ್ಲಿ ಮಕ್ಕಳ ಬಟ್ಟೆ ಮಳಿಗೆಗಳು, ಮಕ್ಕಳ ಆಟಿಕೆ ವಸ್ತುಗಳ ಮಳಿಗೆಗಳಲ್ಲಿ ಅರ್ಧ ಭರ್ತಿಯಾಗಿದ್ದರೆ, ಹಲವರು ಈಗ ಜೋಡಿಸುವ ಕೆಲಸ ಮಾಡುತ್ತಿದ್ದರು. ಮತ್ತೂಂದೆಡೆ ವಾಹನ ಪಾರ್ಕಿಂಗ್‌ ಗೇಟಿನ ಕಡೆ ಬರುವ ಇರುವ ಆಹಾರ ಮಳಿಗೆಗಳಲ್ಲಿ ಶೇ.20ರಷ್ಟು ಭರ್ತಿಯಾಗಿದ್ದರೆ, ಈಗ ತಮ್ಮ ಅಂಗಡಿಗಳಿಗೆ ಸಾಮಗ್ರಿಗಳನ್ನು ತುಂಬುತ್ತಿದ್ದರೆ, ನಾಮಫ‌ಲಕಗಳನ್ನು ಅಳವಡಿಸುತ್ತಿದ್ದು ಕಂಡುಬಂದಿತು. ಮತ್ತೊಂದೆಡೆ ಶೇ.80ರಷ್ಟು ಸರ್ಕಾರಿ ಮಳಿಗೆಗಳು ಭರ್ತಿಯಾಗಿ ಪ್ರವಾಸಿಗರ ವೀಕ್ಷಣೆಗೆ ಲಭ್ಯವಾಗಲಿದೆ ಎನ್ನುವ ಮಾತನ್ನು ಹೇಳಿದ್ದರೂ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಹತ್ತು ಮಳಿಗೆಗಳು ಮಾತ್ರ ವೀಕ್ಷಣೆ ಮಾಡಬಹುದು ಎನ್ನುವಂತಿದ್ದವು. ಕೆಲವು ಮಳಿಗೆಗಳ ಕಾರ್ಯದಲ್ಲಿ ಕಲಾವಿದರು ಕಾರ್ಯೋನ್ಮುಖವಾಗಿದ್ದರು.

ಪಿ.ಕಾಳಿಂಗರಾವ್‌ ಕಲಾಮಂಟಪದ ಸಮೀಪ ವಿದ್ಯುತ್‌ ದೀಪಾಲಂಕಾರ ಮಾಡಿದ್ದರೆ, ಮತ್ತೂಂದು ಕಡೆ ಪ್ರವಾಸಿಗರು ವಿಹರಿಸಲು ಹಾಕಿರುವ ಕುರ್ಚಿಗಳಿಗೆ ಸಿಂಗಾರ ಮಾಡಿದ್ದರಿಂದ ಗಮನ ಸೆಳೆಯುತ್ತಿದ್ದವು. ಎಂ.ಜಿ.ರಸ್ತೆಗೆ ಹೊಂದಿಕೊಂಡಂತೆ ಇರುವ ಜಾಗದಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್ ಗಳಲ್ಲಿ ಕೆಲವು ಸಜ್ಜಾಗಿದ್ದರೆ, ಹಲವು ಜೋಡಿಸಲಾಗುತ್ತಿದ್ದು ಕಾಣಿಸಿತು.

ವಸ್ತು ಪ್ರದರ್ಶನದಲ್ಲಿ ಒಂದು ಸುತ್ತು ಹಾಕಿ ಬರುವುದಕ್ಕೆ ಎರಡು-ಮೂರು ಗಂಟೆಗಳ ಕಾಲ ಸಮಯ ಕಳೆಯಬಹುದೆಂದು ಸಾರ್ವಜನಿಕರಿಗೆ ಅರ್ಧಕ್ಕೆ ಅರ್ಧ ಖಾಲಿ ಖಾಲಿ ಕಾಣಿಸುತ್ತಿದ್ದರಿಂದ ಬಹುಬೇಗನೆ ನಿರ್ಮಿಸಿದರು. ಮೊದಲ ದಿನವಾಗಿದ್ದರಿಂದ ಉಚಿತ ಪ್ರವೇಶ ಆಗಿದ್ದರಿಂದ ಬಂದವರೆಲ್ಲರೂ ಒಳಗೆ ಒಂದು ಸುತ್ತು ಹಾಕಿಕೊಂಡು ಇರುವಷ್ಟು ನೋಡಿ ಖುಷಿಪಟ್ಟರು.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಉಪ ಮಹಾಪೌರ ಡಾ.ಜಿ.ರೂಪಾ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌, ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ಎಚ್‌ .ಜಿ.ಗಿರಿಧರ್‌, ನಗರಪಾಲಿಕೆ ಸದಸ್ಯರಾದ ಕೆ.ಜೆ.
ರಮೇಶ್‌, ಜಗದೀಶ್‌ ಹಾಜರಿದ್ದರು.

ಹದಿನೈದು ದಿನಗಳು ಮುಂಚಿತವಾಗಿ ವಸ್ತು ಪ್ರದರ್ಶನ ಆರಂಭಿಸಬೇಕಿತ್ತಾದರೂ ಮಳೆಯ ಕಾರಣದಿಂದ ವಿಳಂಬವಾಯಿತು. ಈ ಬಾರಿ ತ್ರೀಡಿ ಮ್ಯಾಪಿಂಗ್‌, ವಿಡಿಯೋ ಮ್ಯಾಪಿಂಗ್‌, ನಟ ಪುನೀತ್‌ ರಾಜ್‌ಕುಮಾರ್‌ ,ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳ ಸ್ಯಾಂಡ್‌ ಮ್ಯೂಸಿಯಂ ಆಕರ್ಷಿಸಲಿದೆ.
ಮಿರ್ಲೆ ಶ್ರೀನಿವಾಸಗೌಡ,
ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.