ಮೈಸೂರು, ಎಚ್‌.ಡಿ.ಕೋಟೆಯಲ್ಲಿ ಮಳೆ


Team Udayavani, Mar 8, 2017, 12:50 PM IST

mys4.jpg

ಮೈಸೂರು: ಮೈಸೂರು ಜಿಲ್ಲೆಗೆ ಎರಡನೇ ದಿನವು ಮಳೆಯ ಸಿಂಚನವಾಗಿದ್ದು, ಈ ಬೇಸಿಗೆಯಲ್ಲಿ ಮೈಸೂರು ನಗರಕ್ಕೆ ಇದೇ ಮೊದಲ ಬಾರಿಗೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದ್ದು, ದಟ್ಟವಾದ ಮೋಡ ಕವಿದು, ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆಯಿತು.

ಎಚ್‌.ಡಿ.ಕೋಟೆ ತಾಲೂಕಿನ ಮುಳ್ಳೂರಿನಲ್ಲಿ ಅತಿ ಹೆಚ್ಚು 73.5 ಮಿ.ಮೀ ಮಳೆ ಆಗಿದೆ. ಉಳಿದಂತೆ ಕಂದಲಿಕೆ-25 ಮಿ.ಮೀ, ಸರಗೂರು 12.5 ಮಿ.ಮೀ, ಮನುಗನಹಳ್ಳಿ 12.5 ಮಿ.ಮೀ, ನೂರಲಕುಪ್ಪೆ- 13 ಮಿ.ಮೀ, ಸಾಗರೆ 22 ಮಿ.ಮೀ ಮಳೆ ಆಗಿದೆ. ಕೆ.ಆರ್‌.ನಗರ ತಾಲೂಕಿನಲ್ಲಿ 43 ಮಿ.ಮೀ ಮಳೆ ಆಗಿದ್ದು, ಬೇರ್ಯದಲ್ಲಿ 13 ಮಿ.ಮೀ ಮಳೆ ಆಗಿದೆ.

ಮೈಸೂರು ತಾಲೂಕಿನ ಮೋಸಂಬಾಯನಹಳ್ಳಿ 22.5 ಮಿ.ಮೀ, ಇಲವಾಲ 9 ಮಿ.ಮೀ, ರಮ್ಮನಹಳ್ಳಿ 8.5 ಮಿ.ಮೀ. ಹುಣಸೂರು ತಾಲೂಕಿಮ ಬಿಳಿಕೆರೆಯಲ್ಲಿ 7.5 ಮಿ.ಮೀ, ನಂಜನಗೂಡು ತಾಲೂಕಿನ ಹಲ್ಲೆರೆ-16 ಮಿ.ಮೀ, ಹಾಡ್ಯ 17 ಮಿ.ಮೀ. ತಿ.ನರಸೀಪುರ ತಾಲೂಕಿನ ಸೋಸಲೆ 13 ಮಿ.ಮೀ, ಸೋಮನಾಥಪುರ 25.5 ಮಿ.ಮೀ, ಹೊಸಕೋಟೆ 22 ಮಿ.ಮೀ. ಪಿರಿಯಾಪಟ್ಟಣ ತಾಲೂಕಿನ ಚಿಟ್ಟೇನಹಳ್ಳಿಯಲ್ಲಿ 12.5 ಮಿ.ಮೀ ಹಾಗೂ ಪಂಚವಳ್ಳಿ ಸುತ್ತಮುತ್ತ ಹಗುರವಾದ ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಎಚ್‌.ಡಿ.ಕೋಟೆಯಲ್ಲಿ ಮಳೆ: ಕಳೆದ ಹಲವು ತಿಂಗಳಿಂದ ಬೇಸಿಗೆ ಬಿಸಿಲಿನ ತಾಪಕ್ಕೆ ಬೆಂದಿದ್ದ ಇಳೆಗೆ ಮಂಗಳವಾರ ಸಂಜೆ ವರ್ಷಾರಂಭದ ಮೊದಲ ಮಳೆಯ ಆಗಮನ ಕೊಂಚ ತಂಪೆರೆಯಿತು.

ಕಳೆದ 3 ದಿನಗಳಿಂದ ಆಗಾಗ ಆಗಸದಲ್ಲಿ ಮೋಡ ಕವಿದ ವಾತಾವರಣ ಮಳೆಯ ಆಗಮನವನ್ನು ಹೇಳುತ್ತಿತ್ತಾದರೂ ಮಳೆಯಾಗಿರಲಿಲ್ಲ. ಮಂಗಳವಾರವೂ ಅದೇ ರೀತಿ ಮೋಡ ಮುಸುಕಿದ ವಾತಾವರಣವಿತ್ತು. ಸಂಜೆ 5 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು.

ಕಳೆದ ವರ್ಷ ನಿರೀಕ್ಷೆ ಪ್ರಮಾಣದಲ್ಲಿ ಮಳೆಯಾಗದೇ ಜನ, ಜಾನುವಾರುಗಳ ಕುಡಿಯುವ ನೀರಿಗೂ ಹಾಹಾಕಾರ ಪಡುವಂತೆ ಮಾಡಿದ್ದ ಮಳೆ ಈಗ ಅಕಾಲಿಕವಾಗಿ ಆಗಮಿಸಿದೆ. ಇದರಿಂದ ಕೆರೆಕಟ್ಟೆಗಳಲ್ಲಿ ನೀರು ತುಂಬಿ ನೀರಿನ ಸಮಸ್ಯೆ ಬಗೆಹರಿಯುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.