ಹುಲಿಗಳ ಆವಾಸ ಸ್ಥಾನ ಹಳೇ ಮೈಸೂರು ಭಾಗ


Team Udayavani, Dec 31, 2019, 3:00 AM IST

huligala

ಮೈಸೂರು: ವ್ಯಾಘ್ರಗಳ ಆವಾಸಕ್ಕೆ ಹಳೇ ಮೈಸೂರು ಭಾಗವು ಅಗತ್ಯ ನೆಲೆಯನ್ನು ಕಲ್ಪಿಸಿಕೊಟ್ಟಿದ್ದು, ಮೈಸೂರು-ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹುಲಿಗಳು ಹೆಚ್ಚು ಕಂಡು ಬರುತ್ತಿವೆ. ಅದರಲ್ಲೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಹುಲಿಗಳಿರುವುದು ಗಮನಾರ್ಹ ಸಂಗತಿ.

ಒಂದೇ ಜಿಲ್ಲೆಯಲ್ಲೂ ಎರಡು ರಾಷ್ಟ್ರೀಯ ಉದ್ಯಾನವಿದ್ದು, ಬಂಡೀಪುರ, ಬಿಆರ್‌ಟಿ ಮತ್ತು ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಸೂಕ್ತ ಸಂರಕ್ಷಣೆ ಫ‌ಲವಾಗಿ ಬಲಿ ಪ್ರಾಣಿಗಳು (ಹುಲಿಯ ಆಹಾರ)ಹೆಚ್ಚಿದಂತೆ ಹೆಚ್ಚಿನ ಸಂಖ್ಯೆಯ ಹುಲಿಗಳು ನೆಲೆ ಕಂಡುಕೊಂಡಿವೆ.

ಈ ಬಾರಿ ಗಣತಿಯಲ್ಲಿ ಬಂಡೀಪುರದಲ್ಲಿ ಅಂದಾಜು 170ಕ್ಕಿಂತ ಹೆಚ್ಚು, ಬಿಆರ್‌ಟಿಯಲ್ಲಿ 60ರಷ್ಟು ಮತ್ತು ಮಹದೇಶ್ವರಬೆಟ್ಟದ ವನ್ಯಜೀವಿಧಾಮದಲ್ಲಿ 20 ರಷ್ಟು ಹುಲಿಗಳಿವೆ ಎಂದು ಅಂದಾಜಿಸಲಾಗಿದೆ. ಮೈಸೂರು-ಕೊಡಗು ಜಿಲ್ಲೆಯ ವ್ಯಾಪ್ತಿಗೆ ಬರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವದಲ್ಲಿ 110ಕ್ಕೂ ಹೆಚ್ಚು ಹುಲಿಗಳಿವೆ ಎಂದು ಹೇಳಲಾಗಿದ್ದು, ಕಳೆದ ಬಾರಿಗಿಂತ ಈ ವರ್ಷ ಏರಿಕೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

2ನೇ ಸ್ಥಾನ: ಕಳೆದ ಮೂರು ಬಾರಿಯ ಹುಲಿ ಗಣತಿಯಲ್ಲಿ ಅಗ್ರ ಪಂಕ್ತಿ ಕಾಯ್ದುಕೊಂಡಿದ್ದ ಕರ್ನಾಟಕ ಈ ಬಾರಿ 2ನೇ ಸ್ಥಾನಕ್ಕೆ ಬಂದರೂ ರಾಜ್ಯದಲ್ಲಿ ಹುಲಿಗಳ ಸಂತಾನ ವೃದ್ಧಿ ಸಕರಾತ್ಮಕವಾಗಿದೆ. 1973ರಲ್ಲಿ ಹುಲಿ ಯೋಜನೆ ಕೈಗೆತ್ತಿಕೊಂಡ ನಂತರ ರಾಜ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡಿದೆ. ಕರ್ನಾಟಕದಲ್ಲಿ ಇನ್ನು ಹೆಚ್ಚಿನ ಹುಲಿಗಳು ವಾಸಿಸುವಷ್ಟು ಅರಣ್ಯ ಪ್ರದೇಶವಿದ್ದು, ಅವುಗಳನ್ನು ಸಂರಕ್ಷಣೆ ಮಾಡಬೇಕಾದ ತುರ್ತು ಅಗತ್ಯವಿದೆ.

ಕಾರಿಡಾರ್‌: ರಾಜ್ಯದ ಅರಣ್ಯ ಪ್ರದೇಶದಲ್ಲಿ ಇಲಾಖೆ ಕೈಗೊಂಡ ಬಿಗಿ ಕ್ರಮಗಳಿಂದಾಗಿ ಕಳೆದ ಅವಧಿಯಲ್ಲಿ 406 ಇದ್ದ ಹುಲಿಗಳ ಸಂಖ್ಯೆ ಈ ವರ್ಷ 524ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇನ್ನೂ ಸಾವಿರ ಹುಲಿಗಳು ವಾಸಿಸುವಷ್ಟು ಅರಣ್ಯವಿದ್ದು, ನೀಲಗಿರಿ ಜೈವಿಕ ಮಂಡಲದಿಂದ ಉತ್ತರ ಕರ್ನಾಟಕ, ಉತ್ತರ ಭಾರತದ ರಾಷ್ಟ್ರೀಯ ಉದ್ಯಾನ ಮತ್ತು ಅಭಯಾರಣ್ಯಗಳಿಗೆ ಹುಲಿಗಳು ಸಂಚಾರ ಮಾಡಲು ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡಬೇಕಿದೆ.

ಜೊತೆಗೆ ಮತ್ತಷ್ಟು ಹುಲಿಗಳ ಹೆಚ್ಚಳಕ್ಕೆ ಬಯೋಲಾಜಿಕಲ್‌ ಕಾರಿಡಾರ್‌ ನಿರ್ಮಾಣ ಮಾಡುವ ಸವಾಲು ಸರ್ಕಾರದ ಮೇಲಿದೆ. ರಾಜ್ಯದಲ್ಲಿ ಅರಣ್ಯ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ರಕ್ಷಿತಾರಣ್ಯದ ಮೇಲೆ ಮಾನವ ಹಸ್ತಕ್ಷೇಪ, ಅರಣ್ಯ ಒತ್ತುವರಿ, ಅಭಿವೃದ್ಧಿ ಚಟುವಟಿಕೆಗಳು, ಪ್ರವಾಸಿಗರ ಭೇಟಿ, ಕಳ್ಳಬೇಟೆ ಕ್ಷೀಣಿಸಿ, ವನ್ಯ ಜೀವಿಗಳು ನಿರಾತಂಕವಾಗಿ ಬದುಕಲು ಸಾಧ್ಯವಾಗಿದೆ.

ಹುಲಿ ಸರಹದ್ದು: ಜೀವ ವೈವಿಧ್ಯ ತಾಣ, ಹುಲಿ ಸಂರಕ್ಷಿತ ಪ್ರದೇಶ, ವನ್ಯಜೀವಿ ಧಾಮಗಳಲ್ಲಿ ಇಂದಿಗೂ ಆದಿವಾಸಿ ಸಮುದಾಯ ವಾಸಿಸುತ್ತಿರುವುದು ಹುಲಿಗಳ ಸುಗಮ ಜೀವನಕ್ಕೆ ಸಮಸ್ಯೆಯಾಗಿದೆ. ತನ್ನ ಸರಹದ್ದಿನಲ್ಲಿ ಹುಲಿ ಸ್ವತ್ಛಂದವಾಗಿ ಬದುಕಲು ಮಾನವನ ಹಸ್ತಕ್ಷೇಪ ಅಡ್ಡಿಯಾಗಿದೆ.

ಜೊತೆಗೆ ಒತ್ತಡ ಉಂಟಾಗುತ್ತಿರುವುದು ಹುಲಿಗಳ ವಂಶಾಭಿವೃದ್ದಿಗೆ ಮಾರಕವಾಗಿದೆ. ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಕಾಡಿನಲ್ಲಿರುವವರಿಗೆ ಅಗತ್ಯ ಸೌಲಭ್ಯ ನೀಡಿ ಕಾಡಿನಿಂದ ಹೊರಗಿಡುವ ಪ್ರಯತ್ನ ಮಾಡುವ ಮೂಲಕ ವ್ಯಾಘ್ರ ಸಂತತಿ ಹೆಚ್ಚಳಕೆ ಕಾರಣವಾಗಬೇಕಿದೆ.

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.