ದಸರಾ ಹಬ್ಬದ ವೇಳೆಗೆ ರಸ್ತೆ ಗುಂಡಿ ಮುಚ್ಚಿ


Team Udayavani, Sep 13, 2022, 1:41 PM IST

ದಸರಾ ಹಬ್ಬದ ವೇಳೆಗೆ ರಸ್ತೆ ಗುಂಡಿ ಮುಚ್ಚಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಆರಂಭಕ್ಕೂ ಮುನ್ನವೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ನಗರ ಪಾಲಿಕೆ ಅಧಿಕಾರಿಗಳಿಗೆ ಮೇಯರ್‌ ಶಿವಕುಮಾರ್‌ ಸೂಚಿಸಿದರು.

ಮೇಯರ್‌ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸೋಮವಾರ ಅಧಿಕಾರಿಗಳ ಮೊದಲ ಸಭೆ ನಡೆಸಿ ಮಾತನಾಡಿದ ಅವರು, ನಗರದ ಬಹುತೇಕ ರಸ್ತೆಗಳು ಗುಂಡಿ ಬಿದ್ದಿವೆ. ಕೆಲವು ಕಡೆ ಶಾಸಕರ ಅನುದಾನಿಂದ ಕಾಮಗಾರಿ ಆರಂಭವಾಗಿವೆ. ನವೆಂಬರ್‌ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಕೊನೇ ವಾರದಲ್ಲಿ ದಸರಾ ಆರಂಭಗೊಳ್ಳಲಿದೆ. ಹಾಳಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸುವ ಸವಾಲು ನಮ್ಮ ಮೇಲಿದೆ. ತಕ್ಷಣಕ್ಕೆ ದಸರಾ ಆರಂಭಕ್ಕೂ ಮುನ್ನವೇ ಗುಂಡಿ ಮುಚ್ಚಲು ಕ್ರಮವಹಿಸಬೇಕು ಎಂದು ಹೇಳಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಸಿವಿಲ್‌ ಎಂಜಿನಿಯರ್‌ ವಿಭಾಗದ ಅಧಿಕಾರಿ ಮೂರ್‍ನಾಲ್ಕು ದಿನಗಳು ಮಳೆ ಬರುವುದಿಲ್ಲ ಎಂಬ ಮಾಹಿತಿ ಇದೆ. ಅಷ್ಟರಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಿದ್ದೇವೆ ಎಂದು ವಿವರಿಸಿದರು.

ವೈನ್‌ ಸ್ಟೋರ್‌ ತೆರವುಗೊಳಿಸಿ: ಚಾಮರಾಜ ಜೋಡಿ ರಸ್ತೆಯಲ್ಲಿ ನಗರ ಪಾಲಿಕೆ ನಡೆಸುತ್ತಿರುವ ಅಂಬಳೆ ಅಣ್ಣಯ್ಯ ವಿದ್ಯಾರ್ಥಿನಿಯರ ನಿಲಯದಲ್ಲಿ 45 ವಿದ್ಯಾರ್ಥಿನಿಯರಿದ್ದಾರೆ. 19 ಮಳಿಗೆಗಳಿದ್ದು, ಮಾಸಿಕ 26,250 ಬಾಡಿಗೆ ಪಾವತಿಸುತ್ತಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಹಾಸ್ಟೆಲ್‌ ಮುಂಭಾಗದಲ್ಲಿ ಮದ್ಯದಂಗಡಿ ಇರುವುದ ರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆಯಾಗು ತ್ತಿದೆ. ಆ ಮಳಿಗೆಯಿಂದ ಮದ್ಯದಂಗಡಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿ ಸಿದ ಅಧಿಕಾರಿಗಳು ಮದ್ಯದಂಗಡಿ ತೆರವು ಪ್ರಕರಣ 2 ವರ್ಷ ಗಳಿಂದ ನ್ಯಾಯಾಲಯದಲ್ಲಿದೆ ಎಂದು ಹೇಳಿದರು.

ಮಳಿಗೆಗಳಿಂದ 50 ಲಕ್ಷ ಬಾಡಿಗೆ: ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿವಿಧ ಮಾರುಕಟ್ಟೆಗಳ 2,111 ಮಳಿಗೆಗಳಿಂದ ಒಟ್ಟು 50 ಲಕ್ಷ ಬಾಡಿಗೆ ಬರುತ್ತಿದೆ. ಚಾಮರಾಜ ಮತ್ತು ಕಾಳಿದಾಸ ರಸ್ತೆಯಲ್ಲಿ ಮತ್ತಷ್ಟು ಮಳಿಗೆಗಳನ್ನು ನಿರ್ಮಿಸಿ ಹೆಚ್ಚು ಬಾಡಿಗೆ ಸಂಗ್ರಹಿ ಸಬೇಕು ಎಂದು ಶಿವಕುಮಾರ್‌ ಸಲಹೆ ನೀಡಿದರು.

ಜಾಹೀರಾತು ನಿಯಮ ಪಾಲಿಸಿ: ಪಾಲಿಕೆ ವಿರುದ್ಧವಾಗಿಯೇ ನ್ಯಾಯಾಲಯಕ್ಕೆ ಹೋಗುವ ಜಾಹೀರಾತು ಸಂಸ್ಥೆಗಳಿಗೆ ಮತ್ತೆ ಜಾಹೀರಾತು ನೀಡುವುದು ಬೇಡ. ಇವರಿಂದ ದಂಡ ಸಮೇತ ಜಾಹೀರಾತು ಹಣ ವಸೂಲಿ ಮಾಡಬೇಕು. ಪಾಲಿಕೆ ವಿರುದ್ಧ ಹೋಗುವವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಈ ಬಗ್ಗೆ ಕೌನ್ಸಿಲ್‌ನಲ್ಲಿ ಚರ್ಚೆಯಾಗಿರುವುದನ್ನು ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು. ಮಾಲ್‌ ಆಫ್ ಮೈಸೂರು ಕಟ್ಟಡದ ತುಂಬ ಜಾಹೀರಾತು ಫ‌ಲಕಗಳನ್ನು ಹಾಕಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ತೆರವು ಮಾಡಬೇಕು. ಮಾಲ್‌ ಆಫ್ ಮೈಸೂರು ಹೆಸರು ಮಾತ್ರ ಇರಬೇಕು. ಉಳಿದ ಜಾಹೀರಾತು ಫ‌ಲಕಗಳಿದ್ದರೆ ಶುಲ್ಕ ಸಂಗ್ರಹಿಸಬೇಕು. ನಾವೇ ಪ್ರಶ್ನೆ ಮಾಡದಿದ್ದರೆ ಕೇಳುವವರು ಯಾರು? ಎಂದು ಪ್ರಶ್ನಿಸಿದರು.

ಟ್ರೇಡರ್ ಮಾಹಿತಿಗೆ ವಾರದ ಗಡುವು: ನಗರ ಪಾಲಿಕೆ ವ್ಯಾಪ್ತಿಯಲ್ಲಿ 44 ಸಾವಿರ ಟ್ರೇಡರ್ ನೋಂದಣಿ ಮಾಡಿಸಿರುವುದಾಗಿ ಮಾಹಿತಿ ಇದೆ. ಇತ್ತೀಚೆಗೆ ನಡೆದ ನಗರ ಸರ್ವೇಯಲ್ಲಿ 20 ಸಾವಿರ ಟ್ರೇಡರ್ ಇದ್ದಾರೆ. ಈಗ ವಾರ್ಡ್‌ಗಳಲ್ಲಿ ಬೀದಿವಾರು ಸರ್ವೇ ಮಾಡಿದ್ದೇವೆ ಎಂದು ಅಧಿಕಾರಿ ಮಾಹಿತಿ ನೀಡಿದರು. ನಗರದ ಪ್ರದೇಶ ವ್ಯಾಪ್ತಿಯಲ್ಲಿರುವ ಟ್ರೇಡರ್ಗಳ ಬಗ್ಗೆ ನಿಖರವಾದ ಮಾಹಿತಿ ಇಲ್ಲ. 2008ರಿಂದಲೂ ಈ ವಿಚಾರ ಪ್ರಸ್ತಾಪವಾಗುತ್ತಿದೆ. ಸಮರ್ಪಕ ಮಾಹಿತಿಯೇ ಇಲ್ಲದಿದ್ದರೆ ಕೆಲಸ ಮಾಡುವುದು ಹೇಗೆ? ವಾರದೊಳಗೆ ವಾರ್ಡ್‌ವಾರು, ವಲಯವಾರು ಮಾಹಿತಿ ಕೊಡುವಂತೆ ಮೇಯರ್‌ ಸೂಚಿಸಿದರು.

ಮೇಯರ್‌ ಮನೆ ದುರಸ್ತಿಪಡಿಸಿ: ಪಾರಂಪರಿಕ ನಗರಿ, ಸ್ವಚ್ಛ ನಗರಿ ಬಿರುದು ಮೈಸೂರಿಗೆ ಮೇಯರ್‌ ಆಗುವ ಮಹಾಪೌರರ ಮನೆ ಒಳಗಡೆ ಕಾಲಿಡಲು ಆಗುವುದಿಲ್ಲ. ಶೀಘ್ರ ಕ್ರಿಯಾಯೋಜನೆ ಸಿದ್ಧಪಡಿಸಿ ಕಾಮಗಾರಿಗೆ ಚಾಲನೆ ಕೊಡಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಹಾಗೆಯೇ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಆಚರಣೆಗೆ ದಿನಾಂಕ ನಿಗದಿಪಡಿಸುವಂತೆ ಹೇಳಿದರು. ಉಪಮೇಯರ್‌ ಡಾ.ಜಿ.ರೂಪಾ, ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.