ಕಾಯಕ ವರ್ಗಗಳಿಗೆ ನೆರವು ನೀಡಿ
Team Udayavani, Jul 26, 2021, 7:37 PM IST
ಹುಣಸೂರು: ಕೋವಿಡ್ನಿಂದ ನಲುಗಿರುವ ಕಾಯಕ ಸಮುದಾಯಗಳಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಕಾಯಕ ಸಮಾಜಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 21 ವಿವಿಧ ವೃತ್ತಿಗಳಲ್ಲಿರುವ ಮಗ್ಗದಶೆಟ್ಟರು, ತೆಲಗು ಬಣಜಿಗಶೆಟ್ಟಿ, ಗವರಿಗರು, ಸವಿತಾ ಸಮಾಜ, ಕೊರಮಶೆಟ್ಟಿ, ಯಾದವರು, ಸಾಧರು, ಅಲೆಮಾರಿಗಳು, ಗೆಜ್ಜೆಗಾರರು, ವಿಶ್ವಕರ್ಮ, ಮೇದರು, ಕುಂಬಾರ, ಮಡಿವಾಳ ಸೇರಿದಂತೆ ಕಾಯಕ ಸಮುದಾಯದಲ್ಲಿ 197 ಜಾತಿಗಳು ಸೇರಿವೆ. ಈ ವರ್ಗಗಳಿಗೆ ಪ್ಯಾಕೇಜ್ ಘೋಷಿಸಬೇಕೆಂದರು.
ಪ್ರತಿ ಕ್ಷೇತ್ರದಲ್ಲಿ ಶೇ.50ರಷ್ಟು ಮಂದಿ ಕಾಯಕ ಸಮುದಾಯದ ಮಂದಿ ಮತದಾರರಿದ್ದಾರೆ. ಹೀಗಾಗಿ ಶೇ.15ರಷ್ಟು ರಾಜಕೀಯ ಮೀಸಲಾತಿ ನೀಡಬೇಕು. ಮುಂಬರುವ ಚುನಾವಣೆ ವೇಳೆ ಎಲ್ಲಾ ಪಕ್ಷಗಳು ಕಾಯಕ ಸಮಾಜವನ್ನು ಗುರುತಿಸಬೇಕು. ಕಡೆಗಣಿಸಿದರೆ ಸಮುದಾಯದವರು ತಕ್ಕ ಪಾಠ ಕಲಿಸಲಿದ್ದಾರೆಂದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹೊನ್ನಪ್ಪ, ಗೌರವಾಧ್ಯಕ್ಷ ಸಿ.ಎಸ್.ನಾಗರಾಜ್, ಪ್ರಧಾನ ಕಾರ್ಯದರ್ಶಿ ಬೋರಪ್ಪಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ