ಕೋವಿಡ್ ನೆರವು ಇತರೆ ಹಿಂದುಳಿದ ವರ್ಗಕ್ಕೂ ವಿಸ್ತರಿಸಿ ಶಾಸಕ ಮಂಜುನಾಥ್‌ ಆಗ್ರಹ

ಕಾರ್ಮಿಕ ಇಲಾಖೆ ನೊಂದಾಯಿತ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆಗೆ ಚಾಲನೆ

Team Udayavani, Jul 6, 2021, 9:26 PM IST

Mysore News, Hunusuru

ಹುಣಸೂರು : ಕೋವಿಡ್ ಮಹಾಮಾರಿಯಿಂದಾಗಿ ಅನ್ ಲಾಕ್ ಚಾರಿಗೊಂಡಿದ್ದರೂ ಸಹ ಅಸಂಘಟಿತ ಕಾರ್ಮಿಕ ವಲಯಕ್ಕೆ ಸಂಕಷ್ಟ ಎದುರಾಗಿದ್ದು, ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ  ಅಗತ್ಯ ಆಹಾರದ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಅದೇರೀತಿ ದರ್ಜಿಗಳು ಮತ್ತಿತರ ಅಸಂಘಟಿತ ಕಾರ್ಮಿಕರಿಗೂ ಸರಕಾರದ ನೆರವು ನೀಡಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಆಗ್ರಹಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರದಂದು ಕಾರ್ಮಿಕ ಇಲಾಖೆವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ಪದಾರ್ಥಗಳನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡಿ ತಾಲೂಕಿನಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ ನೊಂದಾಯಿಸಿಕೊಂಡಿದ್ದಾರೆ, ಈ ಪೈಕಿ 5 ಸಾವಿರ ಮಂದಿಗೆ ಮಾತ್ರ ಪಡಿತರ ಕಿಟ್ ನೀಡಲಾಗುತ್ತಿದೆ. ಗುಣಮಟ್ಟ ಕಾಪಾಡಲು ತಾಲೂಕು ಆಡಳಿತಕ್ಕೆ ಜವಾಬ್ದಾರಿವಹಿಸಿ ತಪಾಸಣೆ ನಡೆಸಿದ ನಂತರವಷ್ಟೆ ವಿಕಿಟ್ ಸಿದ್ದಪಡಿಸಲಾಗಿದೆ.

ನೊಂದಾಯಿತ ಕುಟುಂಬದ ಒಬ್ಬರಿಗಷ್ಟೆ ಕಿಟ್ ನೀಡಲಾಗುತ್ತಿದೆ. ಹೊಸಬರಿಗೂ ಕಿಟ್ ನೀಡಲು ಹಾಗೂ ಹೋಟೆಲ್ ಕಾರ್ಮಿಕರು, ದರ್ಜಿಗಳು, ಸೆಲ್ಯೂನ್ ಸೇರಿದಂತೆ ಅಸಂಘಟಿತವಲಯದ ಕಾರ್ಮಿಕವರ್ಗಕ್ಕೂ ಕಿಟ್ ನೀಡಲು  ಒತ್ತಡ ಹಾಕಲಾಗುವುದೆಂದರು.

ಜಿಲ್ಲಾ ಕಾರ್ಮಿಕ ಆಯುಕ್ತ ರಾಜೀವ್ ಕೆ.ಜಾದವ್ ಮಾತನಾಡಿ ಜಿಲ್ಲೆಯಲ್ಲಿ 1.4 ಲಕ್ಷದಷ್ಟು ಮಂದಿ ನೊಂದಾಯಿಸಿಕೊಂಡಿದ್ದಾರೆ. ತಾಲೂಕಿನ ೮ ಸಾವಿರಕ್ಕೂ ಹೆಚ್ಚು ಮಂದಿಗೆ ಕಿಟ್ ವಿತರಿಸಲು ಸಿದ್ದತೆ ನಡೆದಿದೆ. ಮೊದಲ ಹಂತದಲ್ಲಿ ೫ ಸಾವಿರ ಮಂದಿಗೆ ಉಳಿದವರಿಗೆ ಹಂತಹಂತವಾಗಿ ವಿತರಿಸಲಾಗುವುದು.

7500 ಮಂದಿಯ ಖಾತೆಗೆ 33.5 ಕೋಟಿ ಜಮೆ:

ಜಿಲ್ಲೆಯಲ್ಲಿ ಮೊದಲ ಹಂತದ ಕೋವಿಡ್ ಅಲೆಯಲ್ಲಿ ಕಟ್ಟಡ ಕಾರ್ಮಿಕರ ಖಾತೆಗೆ ನೇರವಾಗಿ ತಲಾ 5 ಸಾವಿರ ರೂನಂತೆ 4 ಸಾವಿರ ಮಂದಿ ಖಾತೆಗೆ ನೇರಹಣ ವರ್ಗಾವಣೆ ಮಾಡಲಾಗಿದೆ, ಎರಡನೇ ಅಲೆಯಲ್ಲೂ ಸಹ ತಲಾ ೩ ಸಾವಿರದಂತೆ 4500ಮಂದಿ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ನೀಡಿದರು. 756 ಮಂದಿಗೆ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಸವರಾಜು, ನಗರಸಭೆ ಅಧ್ಯಕ್ಷೆ ಅನುಷಾ, ಉಪಾಧ್ಯಕ್ಷ ದೇವನಾಯ್ಕ, ಇನ್ಸ್‌ಪೆಕ್ಟರ್ ರವಿ, ಎಸ್.ಐ.ಪಂಚಾಕ್ಷರಿ ಕಾರ್ಮಿಕ ಇಲಾಖೆ ನಿರೀಕ್ಷಕ ಲಕ್ಷ್ಮೀಶ್, ಕಾರ್ಮಿಕ ಇಲಾಖೆ ಸಿಬ್ಬಂದಿಗಳು, ಕಲಟ್ಟಡ ಮತ್ತು ಇತರೆ ಕಾರ್ಮಿಕರ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿಶ್ರೀನಿವಾಸ್, ಕಾರ್ಮಿಕ ಬಂಧು ಪ್ರಸಾದ್,ಮಂಜುನಾಥ್, ಶಿವರಾಮು ಸೇರಿದಂತೆ ಅನೇಕರು ಇದ್ದರು.

ಎಲ್ರಪ್ಪಾ ಹೋಂಗಾಡ್ಸ್ ಎಂದ ಶಾಸಕ:

ಪಡಿತರಕಿಟ್ ವಿತರಣೆ ಮಾಡುವ ಬಗ್ಗೆ ಮಾಹಿತಿ ಪಡೆದ ಕಾರ್ಮಿಕರು ಬೆಳಗ್ಗೆಯಿಂದಲೇ ಅಂಬೇಡ್ಕರ್ ಭವನದ ಬಳಿಯಲ್ಲಿ ಜಮಾಯಿಸಿದ್ದರಿಂದ ಜನಜಂಗುಳಿ ಉಂಟಾಗಿತ್ತು, ಕಾರ್ಯಕ್ರಮಕ್ಕಾಗಮಿಸಿದ ಶಾಸಕರು ಜನರನ್ನು ಕಂಡು ಹೌಹಾರಿ ಎಲ್ರಪ್ಪಾ ಹೋಂಗಾಡ್ಸ್‌ಗಳು ನಿನ್ನೆವರೆಗೆ ಲ್ಲೇ ಇದ್ರಲ್ಲ ಎಲ್ಲಿಗೆ ಹೋದರು ಎಂದಿದ್ದಕ್ಕೆ ಜು.5ರವರೆಗೆ ಡ್ಯೂಟಿ ಮಾಡಿ ಜಿಲ್ಲಾಡಳಿತದ ಸೂಚನೆಯಂತೆ ವಾಪಾಸ್ಸಾಗಿದ್ದಾರೆಂಬ ಅಧಿಕಾರಿಗಳ ಮಾಹಿತಿಗೆ ತಾವೇ ಮುಂದೆ ನಿಂತು ಎಲ್ಲರನ್ನು ಮೈದಾನದತ್ತ ಕಳುಹಿಸಿ,ಎಲ್ಲರಿಗೂ ಕಿಟ್ ವಿತರಿಸಲಾಗುವುದು. ಸಾಮಾಜಿಕ ಅಂತರ ಕಾಪಾಡುವಂತೆ ಮೈಕ್ ಮೂಲಕ ಮನವಿ ಮಾಡಿದರು. ಇನ್ಸ್‌ಪೆಕ್ಟರ್ ರವಿ, ಎಸ್.ಐ.ಪಂಚಾಕ್ಷರಿ ಹಾಗೂ  ಸಿಬ್ಬಂದಿಗಳು ಭವನದ ಸುತ್ತ ಬ್ಯಾರಿಕೇಡ್ ಹಾಕಿ ಜನರನ್ನು ನಿಯಂತ್ರಿಸಿದರು.

ಇತರೆ ನಿಗಮಕ್ಕೂ ವಿಸ್ತರಣೆಯಾಗಲಿ:

ಸರಕಾರ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳ ಆರ್ಥಕ ಸಬಲೀಕರಣಕ್ಕಾಗಿ  ಅಂಬೇಡ್ಕರ್ ಮತ್ತು ವಾಲ್ಮಿಕಿ ನಿಗಮಗಳ ಮೂಲಕ ಎಸ್.ಸಿ ಮತ್ತು ಎಸ್.ಟಿ.ಸಮುದಾಯಕ್ಕೆ  ಒಂದು ಲಕ್ಷ ಸಹಾಯಧನದೊಂದಿಗೆ 5 ಲಕ್ಷದವರೆಗೆ ವೈಯಕ್ತಿ ಸಾಲ ನೀಡುವ ಯೋಜನೆ ಜಾರಿಗೊಳಿಸಿದ್ದು, ಇದೇ ಮಾದರಿಯಲ್ಲಿ ಇತರೆ ಹಿಂದುಳಿದ ನಿಗಮಗಳವತಿಯಿಂದಲೂ ವಿತರಣೆಗೆ ಸರಕಾರ ಮುಂದಾಗಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಒತ್ತಾಯಿಸಿದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.