ವಾರಿಯರ್ಸ್‌ ಗೆ ವಿಮೆ ಸೌಲಭ್ಯ,10 ಸಾವಿರ ಮಕ್ಕಳಿಗೆ ಟಾನಿಕ್‌ ವಿತರಣೆ ಮಾಡಿದ ಶಾಸಕ ಮಂಜುನಾಥ್‌

ಕೋವಿಡ್ ವಾರಿಯರ್ಸ್‌ ಗೆ ವಿಮೆ ಸೌಲಭ್ಯ

Team Udayavani, Jun 16, 2021, 9:33 PM IST

Mysore, News, Udayavani

ಹುಣಸೂರು: ಕೋವಿಡ್ ಹಿನ್ನೆಲೆಯಲ್ಲಿ ಶಾಸಕ ಎಚ್.ಪಿ.ಮಂಜುನಾಥ್‌ರ 54ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಸರಳವಾಗಿ ಆಚರಿಸಿದರಾದರೂ ಎಂದಿನಂತೆ ವಿವಿಧ ಸಮಾಜ ಸೇವಾ ಕೈಂಕರ್ಯಗಳನ್ನು ಆಯೋಜಿಸಿ ಜನ್ಮದಿನವನ್ನು  ಸಾರ್ಥಕಗೊಳಿಸಿದರು.

ಬೆಳಗ್ಗೆ ಮೈಸೂರು ಮನೆಯಲ್ಲಿ ಪೂಜ್ಯರಿಂದ ಆಶೀರ್ವಾದ ಪಡೆದುಕೊಂಡ ಶಾಸಕರು ಬಿಳಿಕೆರೆಯ ಕೋಡಿ ಗಣಪತಿ ದೇವಾಲಯ, ಹುಣಸೂರಿನ ಸಾಯಿಬಾಬ ಮಂದಿರ, ಕನ್ಯಕಾಪರಮೇಶ್ವರಿ, ಮುತ್ತುಮಾರಮ್ಮ ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.

10 ಸಾವಿರ ಮಕ್ಕಳಿಗೆ ಟಾನಿಕ್‌ ವಿತರಣೆ :

ಕೋವಿಡ್ ಮೂರನೇ ಅಲೆಯ ಮುಂಜಾಗೃತೆಯಾಗಿ ತಾಲೂಕಿನ ಅಂಗನವಾಡಿಯ 3-6 ವರ್ಷದೊಳಗಿನ ಎಲ್ಲಾ ಪುಟಾಣಿಗಳಿಗೆ ಮಕ್ಕಳ ತಜ್ಞರ ಸಲಹೆ ಮೇರೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್ ಜೊತೆಗೆ ಮಾಸ್ಕ್‌ ನನ್ನು ಸಿಡಿಪಿಓ ರಶ್ಮಿಯವರ ಮಾರ್ಗದರ್ಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿತರಿಸಲಾಯಿತು. ಅಲ್ಲದೆ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡೆ ಹಾಗೂ ಎನ್-95 ಮಾಸ್ಕ್‌ ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಇದನ್ನೂ ಓದಿ : ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

ವಾರಿಯರ್ಸ್‌ ಗೆ ವಿಮೆ ಸೌಲಭ್ಯ:

ಕೋವಿಡ್ ಸೋಂಕಿತರ ಶವ ಸಂಸ್ಕಾರ ನಡೆಸುವ 35 ಮಂದಿ ವಾರಿಯರ್ಸ್‌ ಗಳಿಗೆ 2 ಲಕ್ಷರೂಪಾಯಿಯ ವಿಮೆ ಬಾಂಡ್ ಹಾಗೂ ಪಿಪಿಇ ಕಿಟ್ ವಿತರಿಸಲಾಯಿತು. ರೈತರಿಗೆ ತೆಂಗಿನ ಸಸಿ ವಿತರಿಸಿದರು. ನಗರಸಭಾ ಸದಸ್ಯೆ ಪ್ರಿಯಾಂಕಾ ಥಾಮಸ್ ವೆನ್ನಿಯವರು ನರಸಿಂಹಸ್ವಾಮಿ ತಿಟ್ಟು ಬಡಾವಣೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸಿದ್ದರು.

ಬೈ ಪ್ಯಾಕ್, ಆಕ್ಸಿಜನ್ ಮಾಸ್ಕ್ ವಿತರಣೆ :

ನಗರದ ಡಿ. ದೇವರಾಜ ಅರಸು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಸೋಂಕಿತರಿಗಾಗಿ ಬೈಪ್ಯಾಕ್, ಆಕ್ಸಿಜನ್ ಮಾಸ್ಕ್‌ ನನ್ನು ಟಿಎಚ್‌ಓ ಡಾ.ಕೀರ್ತಿಕುಮಾರ್‌ ರಿಗೆ ಹಸ್ತಾಂತರಿಸಿದರು. ಕಾಂಗ್ರೆಸ್ ಯುವ ಮುಖಂಡ ರಾಜು ಶಿವರಾಜೇ ಗೌಡರು ಪತ್ರಕರ್ತರಿಗೆ ಕೊಡಮಾಡಿದ ಫೇಸ್‌ ಶೀಲ್ಡ್ ವಿತರಿಸಿದರು. ತಾಲೂಕಿನ ಐದು ಕೋವಿಡ್ ಕೇರ್‌ ಸೆಂಟರ್‌ ಗಳಲ್ಲಿ ಆರೈಕೆಯಲ್ಲಿರುವವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸ್ನೇಹಜೀವಿ ಬಳಗ, ಶಾಸಕರ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ನ ವಿವಿಧ ಘಟಕಗಳವರು ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸೌಲಭ್ಯ ವಿತರಿಸಿ ಮಾತನಾಡಿದ ಶಾಸಕರು ತಮ್ಮ ಹುಟ್ಟುಹಬ್ಬವನ್ನು ಈ ಕೋವಿಡ್ ಸಂದರ್ಭದಲ್ಲೂ ಸ್ನೇಹಜೀವಿಯ ಸ್ನೇಹಿತರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿ ಸರಳ ಹಾಗೂ ಅರ್ಥಪೂರ್ಣ, ಜನಹಿತ ಕಾರ್ಯಗಳನ್ನು ಆಯೋಜಿಸಿದ್ದಕ್ಕೆ ಅಭಿನಂದಿಸಿ, ಈ ಕಾರ್ಯಕ್ಕೆ ಅನೇಕ ದಾನಿಗಳು ನೆರವು ನೀಡಿದ್ದಾರೆಂದು ಕೃತಜ್ಞತೆ ಸಲ್ಲಿಸಿದರು.

ತಾಲೂಕಿನ ಕೋವಿಡ್ ನಿಯಂತ್ರಣದಲ್ಲಿ ತಹಸೀಲ್ದಾರ್ ಬಸವರಾಜು, ಇಓ. ಗಿರೀಶ್, ಪಿಡಿಓಗಳು ಸೇರಿದಂತೆ ವೈದ್ಯರು, ಆರೋಗ್ಯ,ಆಶಾ-ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರೀಯವಾಗಿ ತೊಡಗಿಸಿಕೊಂಡಿರುವ ತೊಡಗಿಸಿಕೊಂಡಿದ್ದೀರಾ ನಿಮ್ಮ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲವೆಂದು ಅಭಿನಂದಿಸಿ, ಇನ್ನು 15 ದಿನದಲ್ಲಿ ಎಲ್ಲರೂ ಸೇರಿ ಕೋವಿಡ್ ನಿಯಂತ್ರಿಸುವಲ್ಲಿ ಶ್ರಮವಹಿಸೋಣವೆಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮಸೋಮಶೇಖರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಅಮರ್‌ನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ವಿಜಯಕುಮಾರ್, ಜಿಲ್ಲಾ ಯುವ ಅಧ್ಯಕ್ಷ ಡೊನಾಲ್ಡ್, ಮಹಿಳಾ ಘಟಕದ ಕವಿತಾಕಾಳೆ,  ಕಾಂಗ್ರೆಸ್ ಮುಖಂಡ ಹರೀಶ್‌ಗೌಡ, ಯುವ ಮುಖಂಡ ರಾಜುಶಿವರಾಜೇಗೌಡ, ಉದ್ಯಮಿನಂಜುಂಡಸ್ವಾಮಿ, ಬೆಂಕಿಪುರಕುಮಾರಸ್ವಾಮಿ, ತಿಪ್ಪೂರುಮಹದೇವ್, ದಿಲೀಪ್, ಸ್ನೇಹಜೀವಿ ಬಳಗದ ಆನಂದ್, ಹರ್ಷವರ್ಧನ್‌ರಮೇಶ್, ಡಾ,ವೃಷಬೇಂದ್ರಪ್ಪ, ಗಣಪತಿಇಂಡೋಲ್ಕರ್, ಲೋಕೇಶರಾವ್‌ ಕದಂ, ದೇವರಾಜ್ ಸೇರಿದಂತೆ ಅನೇಕ ಮುಖಂಡರಿದ್ದರು.

ಹನಗೋಡು ಆಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆ:

ಶಾಸಕರ ಹುಟ್ಟು ಹಬ್ಬದ ಅಂಗವಾಗಿ ಅವರ ಸಹೋದರ ಉದ್ಯಮಿ ಎಚ್.ಪಿ.ಅಮರ್‌ನಾಥ್-ಡಾ.ಪುಷ್ಪಅಮರ್‌ನಾಥ್ ಕೊಡುಗೆಯಾಗಿ ನೀಡಿದ ಆಂಬುಲೆನ್ಸ್‌ನ್ನು ಹನಗೋಡು ಆಸ್ಪತ್ರೆಗೆ ನೀಡಿದ್ದು, ಡಾ.ಜೋಗೇಂದ್ರನಾಥರಿಗೆ ಕೀ ಹಸ್ತಾಂತರಿಸಿ, ಆಸ್ಪತ್ರೆಯ ರಕ್ಷಾಸಮಿತಿವತಿಯಿಂದ ನಿರ್ವಹಣೆ ಮಾಡಬೇಕೆಂದು ಸೂಚಿಸಿದರು. ಡಾ.ಪುಷ್ಪಅಮರ್‌ನಾಥ್, ತಹಸೀಲ್ದಾರ್ ಬಸವರಾಜು, ಇಓ ಗಿರೀಶ್, ಟಿಎಚ್‌ ಓ ಡಾ.ಕೀರ್ತಿಕುಮಾರ್,ಡಾ.ವೃಷಭೇಂದ್ರಸ್ವಾಮಿ ಇದ್ದರು.

ಇದನ್ನೂ ಓದಿ : ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.