ಮೈಸೂರು ದರೋಡೆ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು: ಪುಣೆಯಲ್ಲಿ ಇಬ್ಬರು ಆರೋಪಿಗಳ ಬಂಧನ
Team Udayavani, Aug 27, 2021, 9:22 AM IST
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಆ.23ರಂದು ನಡೆದಿದ್ದ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಏರ್ ಫೋರ್ಟ್ ನಲ್ಲಿ ಆರೋಪಿಗಳ ಬಂಧನವಾಗಿದೆ. ಇವರಲ್ಲದೆ ಓರ್ವ ಸ್ಥಳೀಯನನ್ನೂ ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಮಾಜಿ ಗ್ವಾಂಟನಾಮೊ ಬಂಧಿತ ಉಗ್ರ ಈಗ ತಾಲಿಬಾನ್ ನ ನೂತನ ರಕ್ಷಣಾ ಸಚಿವ!
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಆಗಸ್ಟ್ 23ರಂದು ಈ ತಂಡ ಚಿನ್ನಾಭರಣ ಅಂಗಡಿಗೆ ದಾಳಿ ಮಾಡಿತ್ತು. ಅಲ್ಲಿ ಮಾಲೀಕನಿಗೆ ಥಳಿಸಿ ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಅಲ್ಲದೆ ಚಿನ್ನದ ಅಂಗಡಿಗೆ ಬಂದಿದ್ದ ಚಂದ್ರು ಎಂಬ ಗ್ರಾಹಕನಿಗೆ ಗುಂಡು ಹಾರಿಸಿತ್ತು. ಪರಿಣಾಮ ಚಂದ್ರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ದರೋಡೆಕೋರರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದಲ್ಲಿ ತನಿಖೆ ಚುರುಕು ಮಾಡಿದ್ದ ವಿದ್ಯಾರಣ್ಯಪುರಂ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ.