ಮೈಸೂರು: ಅರಣ್ಯಾಧಿಕಾರಿಗಳ ಗುಂಡಿಗೆ ಶ್ರೀಗಂಧ ಕಳ್ಳ ಬಲಿ
Team Udayavani, Feb 11, 2017, 10:59 AM IST
ಮೈಸೂರು: ಇಲ್ಲಿನ ರಾಮಕೃಷ್ಣನಗರದ ಲಿಂಗಾಂಬುದಿ ಕೆರೆ ಆವರಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಶ್ರೀಗಂಧ ಕಳ್ಳನೊಬ್ಬ ಬಲಿಯಾದ ಬಗ್ಗೆ ವರದಿಯಾಗಿದೆ.
ಶನಿವಾರ ನಸುಕಿನ 2 ಗಂಟೆಯ ವೇಳೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿದ್ದು , ಹತನೊಂದಿಗೆ ಇದ್ದ ಇನ್ನೂ ನಾಲ್ಕರಿಂದ ಐವರು ಮರಗಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು , ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ವರದಿಯಾಗಿದೆ.