ಮೈಸೂರು ಪೇಟ, ಬಿಳಿ ಅಂಗಿ, ಪಂಚೆ ಶಲ್ಯ ಧರಿಸುವ ಸಿಬ್ಬಂದಿ


Team Udayavani, Apr 18, 2019, 3:00 AM IST

mys-peta

ಹುಣಸೂರು: ಮತದಾರರನ್ನು ಮತಗಟ್ಟೆಗೆ ಸೆಳೆಯಲು ತಾಲೂಕಿನ ಎರಡು ಹಾಡಿಗಳಲ್ಲಿ ಪಾರಂಪರಿಕ ಮತಗಟ್ಟೆ, ಮನುಗನಹಳ್ಳಿ ಹಾಗೂ ನಗರದ ಮಹಿಳಾ ಪದವಿ ಕಾಲೇಜಿನ ಮತಕೇಂದ್ರಗಳನ್ನು ಸಖಿ(ನೀಲಿ) ಮತ್ತು ಬಿಳಿಕೆರೆ ಮತಕೇಂದ್ರವನ್ನು ವಿಕಲಚೇತನರ ಮತಗಟ್ಟೆಗಳನ್ನು ಮಾದರಿ ಮತಗಟ್ಟೆಗಳನ್ನಾಗಿ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ. ಈ ವಿಶೇಷ ಮತಗಟ್ಟೆಯಲ್ಲಿ ಚುನಾವಣಾ ಸಿಬ್ಬಂದಿ ಮೈಸೂರು ಪೇಟ ತೊಟ್ಟು, ಬಿಳಿ ಅಂಗಿ, ಪಂಚೆ-ಶಲ್ಯ ತೊಡುವರು.

ಮತದಾರರು ಸಂಭ್ರಮದಿಂದ ಮತ ಚಲಾಯಿಸುವಂತೆ ಪ್ರೇರೇಪಿಸುವಂತೆ ಈ ವಿಶಿಷ್ಟ ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಆದಿವಾಸಿಗಳು ಕೊಡಗಿಗೆ ತೆರಳುವುದರಿಂದ ಅವರನ್ನು ಮತಗಟ್ಟೆಗತ್ತ ಆಕರ್ಷಿಸಲು ನಾಗಪುರ ಆಶ್ರಮ ಶಾಲೆ ಹಾಗೂ ಶೆಟ್ಟಹಳ್ಳಿ ಹಾಡಿಯ ಆವರಣದಲ್ಲಿ ಆದಿವಾಸಿಗಳ ಪಾರಂಪಾರಿಕ ಗುಡಿಸಲು ತೆರೆಯಲಾಗಿದ್ದು, ಬಿದಿರಿನಿಂದ ತಯಾರಿಸಿದ ಸ್ವಾಗತ ಕೇಂದ್ರ ನಿರ್ಮಿಸಲಾಗಿದೆ.

ಸ್ಥಳೀಯ ಮಹಿಳಾ ಸಿಬ್ಬಂದಿ ಆದಿವಾಸಿಗಳ ಪೋಷಾಕಿನೊಂದಿಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಆದಿವಾಸಿಗಳ ಸಂಸ್ಕೃತಿಯನ್ನು ಅನಾವರಣಗೊಳಿಸುವ ಭಿತ್ತಿಚಿತ್ರಗಳನ್ನು ಅಲ್ಲಲ್ಲಿ ಅಳವಡಿಸಿದ್ದಾರೆ. ಮತದಾರರು ಖಷಿಯಿಂದ ಬಂದು ಮತದಾನ ಮಾಡುವಂತೆ ಆಕರ್ಷಿಸಲು ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣಾ ಸಿಬ್ಬಂದಿ ಮೈಸೂರು ಪೇಟ ತೊಟ್ಟು, ಬಿಳಿ ಅಂಗಿ, ಪಂಚೆ-ಶಲ್ಯ ತೊಡುವರು.

ನೀಲಿ-ಸಖಿ ಮತಗಟ್ಟೆ: ನಗರದ ಮಹಿಳಾ ಕಾಲೇಜು ಹಾಗೂ ಬಿಳಿಕೆರೆ ಹೋಬಳಿಯ ಮನುಗನಹಳ್ಳಿ ಮತಕೇಂದ್ರಗಳು ಸಖಿ ಮತಕೇಂದ್ರಗಳಾಗಿದ್ದು, ನೀಲಿ ಬಣ್ಣದಲ್ಲಿ ಮಿಂಚುವಂತೆ ನಿರ್ಮಿಸಲಾಗಿದೆ. ಇಲ್ಲಿ ಸಂಪೂರ್ಣ ಮಹಿಳೆಯರೇ ನೀಲಿ ಸೀರೆ ತೊಟ್ಟು ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದು, ಇಡೀ ಮತ ಕೇಂದ್ರದ ಹೊರ ಮತ್ತು ಒಳ ಆವರಣ ಹಾಗೂ ಮುಖ್ಯದ್ವಾರವನ್ನು ನೀಲಿ ಬಣ್ಣದಿಂದಲೇ ಕಂಗೊಳಿಸುವಂತೆ ಮಾಡಲಾಗಿದೆ.

ವಿಕಲಾಂಗರ ಮತಗಟ್ಟೆ: ಇದೇ ಪ್ರಥಮ ಬಾರಿಗೆ ತಾಲೂಕಿನ ಬಿಳಿಕೆರೆಯ ಮತಗಟ್ಟೆ ವ್ಯಾಪ್ತಿಯಲ್ಲಿ ಹೆಚ್ಚು ಮಂದಿ ವಿಕಲಚೇತನರಿರುವ ಈ ಮತಗಟ್ಟೆಯನ್ನು ವಿಶಿಷ್ಟವಾಗಿ ನಿರ್ಮಿಸಲಾಗಿದ್ದು, ಇಡೀ ಕಟ್ಟಡವನ್ನು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಲಾಗಿದೆ. ವಿಕಲಚೇತನರು ಸರಾಗವಾಗಿ ಮತಚಲಾಯಿಸಲು ಅಗತ್ಯವಾದ ವೀಲ್‌ಚೇರ್‌ ಸೇರಿದಂತೆ ಉಪಕರಣಗಳನ್ನು ಸಹ ಒದಗಿಸಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ, ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಈ ಮಾದರಿ ಮತಗಟ್ಟೆಗಳನ್ನು ಗ್ರಾಪಂಗಳ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಪಿಡಿಒ ಹಾಗೂ ಸಿಬ್ಬಂದಿ ನಿರ್ಮಿಸಿದ್ದಾರೆ. ಈ ವಿಶಿಷ್ಟ ಮತಗಟ್ಟೆಗಳಲ್ಲಿ ಮತದಾರರಿಗೆ ತಂಪು ಪಾನೀಯ, ಮಜ್ಜಿಗೆ, ಕಾಳುಮೆಣಸು ಹಾಕಿರುವ ಬೇಲದಹಣ್ಣಿನ, ನಿಂಬೆಹಣ್ಣಿನ ಪಾನಕ ಹಾಗೂ ಸಖಿ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ಉಗುರು ಬಣ್ಣ ಹಾಗೂ ಟೋಪಿಯನ್ನು ವಿತರಿಸಲಾಗುವುದು. ನಾಗಾಪುರ ಮತಕೇಂದ್ರಕ್ಕೆ ಆದಿವಾಸಿಗಳನ್ನು ಆಕರ್ಷಿಸುವ ಮತದಾನಕ್ಕಾಗಮಿಸುವ ಎಲ್ಲರಿಗೂ ಸಲುವಾಗಿ ವಿವಿಧ ಜಾತಿಯ ಸಸಿ ವಿತರಿಸಲಾಗುವುದು,
-ಮಹೇಶ್‌, ತಾಲೂಕು ಚುನಾವಣಾ ಅಧಿಕಾರಿ

* ಸಂಪತ್‌ ಹುಣಸೂರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.