Yuva Dasara: ಹುಚ್ಚೆದ್ದು ಕುಣಿಸಿದ ಯುವ ದಸರಾ


Team Udayavani, Oct 19, 2023, 12:57 PM IST

tdy-3

ಮೈಸೂರು: ಯುವ ಮನಸ್ಸುಗಳನ್ನು ಸಂಭ್ರ ಮದ ಅಲೆಯಲ್ಲಿ ತೇಲಿಸುವ ಯುವ ದಸರಾಗೆ ಬುಧವಾರ ಸಂಭ್ರಮದ ಚಾಲನೆ ದೊರೆಯಿತು. ಮಹಾರಾಜ ಕಾಲೇಜು ಮೈದಾನದ ವರ್ಣರಂಜಿತ ವೇದಿಕೆಯಲ್ಲಿ, ಸಾವಿರಾರು ಯುವಕ, ಯುವತಿಯರ ಶಿಳ್ಳೆ, ಚಪ್ಪಾಳೆ, ಘೋಷಣೆಗಳ ನಡುವೆ ನಟ ಶಿವರಾಜಕುಮಾರ್‌ ಹಾಡಿದ ಹಾಡಿಗೆ ಯುವ ಸಮೂಹ ಸಂಭ್ರಮಿಸಿತು.

ಶಿವರಾಜಕುಮಾರ್‌ ವೇದಿಕೆ ಆಗಮಿಸಿ ಅಭಿಮಾನಿಗಳತ್ತ ಕೈ ಬೀಸುತ್ತಿದ್ದಂತೆ ಮೈದಾನದ ತುಂಬೆಲ್ಲಾ ಶಿಳ್ಳೆ, ಘೋಷಣೆ ಮೊಳಗಿತು.

ಬಳಿಕ ಮಾತನಾಡಿದ ಶಿವರಾಜಕುಮಾರ್‌, ನಾನು ಎರಡನೇ ಬಾರಿಗೆ ಯುವ ದಸರಾದಲ್ಲಿ ಭಾಗವಹಿಸುತ್ತಿದ್ದೇನೆ. ಸರ್ಕಾರ ಸರಳವಾಗಿ ದಸರಾ ಆಚರಣೆ ಮಾಡುತ್ತಿದ್ದರೂ ಹೆಚ್ಚು ಖುಷಿ ಪಡಿ. ಜೀವನದಲ್ಲಿ ಖುಷಿ ಇರಬೇಕು. ಓದುವ ಸಮಯದಲ್ಲಿ ಓದಬೇಕು. ಖುಷಿ ಪಡುವ ಸಮಯದಲ್ಲಿ ಖುಷಿಯಾಗಿರಿ. ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ. ಪ್ರಾಮಾಣಿಕವಾಗಿದ್ದರೆ ಸಾಧನೆ ಸಾಧ್ಯ ಎಂದರು.

ಮೋಡಿ: ಸರಿಗಮಪ ರನ್ನರ್‌ ಅಪ್‌ ಐಶ್ವರ್ಯ ರಂಗರಾಜ್‌ ತಮ್ಮ ಗಾಯನದ ಮೂಲಕ ಮೋಡಿ ಮಾಡಿದರು. ಸಾವಿರಾರು ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು. ಕನ್ನಡ ಕೋಗಿಲೆ ಸೀಸನ್‌-5ರ ದಿವ್ಯಾ ರಾಮಚಂದ್ರ, ಜೋಕೆ ನಾನು ಬಳ್ಳಿಯ ಮಿಂಚು, ರಸಿಕಾ, ರಸಿಕಾ ಬಲು ಮೆಲ್ಲನೆ ತೂರಾಡು ಹಾಡಿನ ಮೂಲಕ ನೀರಸವಾಗಿದ್ದ ಯುವ ದಸರಾಗೆ ಜೋಶ್‌ ತಂದರು.

ಬಳಿಕ ಗಾಯಕ ವ್ಯಾಸರಾಜ್‌ ಸೋಸಲೆ ತಮ್ಮ ಕಂಚಿನ ಕಂಠದಲ್ಲಿ ಚಕ್ರವರ್ತಿ ಚಿತ್ರದ ನೋಡೋ ಕತ್ತು ಎತ್ತಿ ಬಂದ ಚಕ್ರವರ್ತಿ ಹಾಡನ್ನು ಹಾಡಿ ಯುವಕರು ಶಿಳ್ಳೆ ಹಾಕುತ್ತ ಕುಣಿದು ಕುಪ್ಪಳಿಸುವಂತೆ ಮಾಡಿದರು.

ನೃತ್ಯ ವೈಭವ:  ನಟಿ ರಾಧಿಕಾ ನಾರಾಯಣ್‌ ಜಿಲ್‌ ತಾ ಜಿಲ್‌ ತಾ ರೇ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದರು. ಬಿಗ್‌ ಬಾಸ್‌ ಖ್ಯಾತಿಯ ಕಿಶನ್‌ ಬೆಳಗಲಿ ಕಾಂತಾರ ಚಿತ್ರದ ಸಿಂಗಾರ ಸಿರಿಯೇ ಹಾಡಿಗೆ ಅದ್ಬುತವಾಗಿ ನೃತ್ಯ ಮಾಡಿದರು.

ಶರಣ್‌ ಮೆರುಗು: ಬಳಿಕ ವೇದಿಕೆಗೆ ಆಗಮಿಸಿದ ನಟ ಶರಣ್‌, ರ್‍ಯಾಂಬೋ-2 ಚಿತ್ರದ ಚುಟು ಚುಟು ಅಂತೈತಿ ಹಾಡು ಹಾಡಿ ಯುವ ದಸರಾಗೆ ಮತ್ತಷ್ಟು ಮೆರುಗು ನೀಡಿದರು. ಇವರಿಗೆ ಗಾಯಕಿ ದಿವ್ಯಾ ರಾಮಚಂದ್ರ ಸಾಥ್‌ ನೀಡಿದರು. ಬಳಿಕ ನಟ ಸಾಧು ಕೋಕಿಲಾ ತಮ್ಮ ಹಾಸ್ಯದಿಂದ ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಿಸಿದರು. ನಟರಾದ ಅಜಯ್‌ ರಾವ್‌, ರಿಷಿ ಇದ್ದರು.

ಈ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಯುವ ದಸರಾ ಉದ್ಘಾಟಿಸಿದರು. ಶಾಸಕರಾದ ಕೆ.ಹರೀಶ್‌ಗೌಡ, ಟಿ.ಎಸ್‌.ಶ್ರೀವತ್ಸ, ತನ್ವೀರ್‌ ಸೇಠ್ ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಡಾ.ಜಿ.ರೂಪಾ ಇತರರಿದ್ದರು.

ಆರಂಭದಲ್ಲಿ ಖಾಲಿ; ನಂತರ ರಷ್‌ :

ಮೈಸೂರು: ಆರಂಭದಲ್ಲಿ ಮೈದಾನದಲ್ಲಿ ಹಾಕಲಾಗಿದ್ದ ಕುರ್ಚಿ ಖಾಲಿ ಖಾಲಿಯಾಗಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಮಹದೇವಪ್ಪ ಉದ್ಘಾಟಿಸಿ ಭಾಷಣ ಮಾಡಿ ತೆರಳಿದರೂ ಅರ್ಧ ಮೈದಾನ ಖಾಲಿಯಾಗಿತ್ತು. ಬರದ ಹಿನ್ನೆಲೆ ತೆರೆದ ಹಾಸನದ ವ್ಯವಸ್ಥೆ ಮಾಡಿದ್ದರಿಂದ ಕಾರ್ಯಕ್ರಮ ಮಂಕಾಗಿತ್ತು. 9 ಗಂಟೆ ವೇಳೆಗೆ ಮೈದಾನ ಭರ್ತಿಯಾಯಿತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.