ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಮತ್ತೊಂದು ಆರೋಪ

ಪತಿ ವಿರುದ್ಧ ಭೂ ಅತಿಕ್ರಮಣ ದೂರು

Team Udayavani, Dec 5, 2022, 10:22 PM IST

1-WQWQEWEW

ಮೈಸೂರು: ಆಡಳಿತ ತರಬೇತಿ ಸಂಸ್ಥೆ (ಎಟಿಐ) ಅತಿಥಿ ಗೃಹದಲ್ಲಿ 2020 ರಲ್ಲಿ ವಾಸ್ತವ್ಯ ಹೂಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಅತಿಥಿ ಗೃಹದ 12 ಬಗೆಯ 20 ವಸ್ತುಗಳನ್ನು ಜಿಲ್ಲಾಧಿಕಾರಿಗಳ ನಿವಾಸಕ್ಕೆ ಕೊಂಡೊಯ್ದಿದ್ದು, ಅವುಗಳನ್ನು ವಾಪಸು ಕೊಡುವಂತೆ ಎಟಿಐ ಸಂಸ್ಥೆಯ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಸಂಸ್ಥೆಯ ಜಂಟಿ ನಿರ್ದೇಶಕರಾದ ಎಸ್.ಪೂವಿತಾ ಅವರು ನ.30ರಂದು ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆಯುತ್ತಿರುವುದು ನಾಲ್ಕನೇ ಬಾರಿ. 2020 ರ ಡಿ.16, 2021ರ ಜ.8 ಹಾಗೂ ಏಪ್ರಿಲ್ 21ರಲ್ಲೂ ಸಂಸ್ಥೆಯು ಪತ್ರ ಬರೆದಿದೆ.

2020 ರ ಅಕ್ಟೋಬರ್ 2 ರಿಂದ ನ.14 ರವರೆಗೆ ಆಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಟಿಐ ಸಂಸ್ಥೆಯ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಜಿಲ್ಲಾಧಿಕಾರಿ ನಿವಾಸಕ್ಕೆ ವಸ್ತುಗಳನ್ನು ಸ್ಥಳಾಂತರಿಸುವಾಗ ಅತಿಥಿಗೃಹದ 2 ಟೆಲಿಫೋನ್ ಟೇಬಲ್‌ಗಳು, 2 ಬಟ್ಟೆ ಹ್ಯಾಂಗರ್, 2 ಬೆತ್ತದ ಕುರ್ಚಿಗಳು, 2 ಟೆಲಿಫೋನ್ ಸ್ಟೂಲ್, 2 ಟೀಪಾಯಿಗಳು, ಒಂದು ಮೈಕ್ರೋವೇವ್ ಒವನ್, ರಿಸೆಪ್ಶನ್ ಟೆಲಿಫೋನ್ ಸ್ಟೂಲ್, ಮಂಚ, ಹಾಸಿಗೆ, 2 ಪ್ಲಾಸ್ಟಿಕ್ ಕುರ್ಚಿ, 2 ಯೋಗಾ ಮ್ಯಾಟ್, 2 ಸ್ಟೀಲ್ ಜಗ್ ಕೊಂಡೊಯ್ದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿ ಆಗಿದ್ದಾಗಲೂ ಪತ್ರ ಬರೆದಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಿಲ್ಲಾಧಿಕಾರಿ ನಿವಾಸದಲ್ಲಿ ಪರಿಕರಗಳು ಇದ್ದಲ್ಲಿ, ವಾಪಸ್ ನೀಡುವಂತೆ ಕೋರಲಾಗಿದೆ.

ಪತಿ ವಿರುದ್ಧ ಭೂ ಅತಿಕ್ರಮಣ ದೂರು

ಹಾಸ್ಯ ನಟ ಮೊಹಮ್ಮದ್‌ ಅಲಿ ಪುತ್ರ, ಗಾಯಕ ಲಕ್ಕಿ ಅಲಿ ಅವರಿಗೆ ಸೇರಿದ ಫಾರಂ ಹೌಸ್‌ಗೆ ಅತಿಕ್ರಮ ಪ್ರವೇಶಗೈದು, ಆಸ್ತಿ ಕಬಳಿಸಲು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪತಿ ಸುಧೀರ್‌ ರೆಡ್ಡಿ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಈ ಕುರಿತು ಲಕ್ಕಿ ಅಲಿ ಫೇಸ್‌ಬುಕ್‌ನಲ್ಲಿ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಯಲಹಂಕದ ಕೆಂಚೆನಹಳ್ಳಿಯಲ್ಲಿ ತಮ್ಮ ಟ್ರಸ್ಟ್‌ಗೆ ಸೇರಿದ ಫಾರಂ ಹೌಸ್‌ಗೆ ಸುಧೀರ್‌ ರೆಡ್ಡಿ ಹಾಗೂ ಆತನ ಸಂಬಂಧಿ ಮಧು ರೆಡ್ಡಿ ನುಗ್ಗಿದ್ದಾರೆ. ಇದಕ್ಕೆ ರೋಹಿಣಿ ನೆರವು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಲಕ್ಕಿ ವಿರುದ್ಧ ಲಕ್ಷ್ಮೀನಾರಾಯಣ ಎಂಬವರೂ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.