ಪತ್ರಕರ್ತ ಅನೂಪ್ ಕುಮಾರ್ ನಿಧನ
Team Udayavani, Jan 2, 2018, 6:30 AM IST
ಮೈಸೂರು: ದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಪತ್ರಕರ್ತ ಅನೂಪ್ ಕುಮಾರ್ (51) ಮೊನಾಲಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗಾಗಿ ಭಾನುವಾರ ಕುಟುಂಬ ಸಮೇತ ಮೊನಾಲಿಗೆ ತೆರಳಿದ್ದರು.
ಮೈಸೂರು ವಿಜಯ ನಗರದ ನಿವಾಸಿಯಾದ ಅನೂಪ್, ದಶಕಗಳ ಹಿಂದೆ ಮೈಸೂರಿನಲ್ಲಿ ಈಟಿವಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. ಸತ್ಯದೇವ್ ಕೊಲೆ ಪ್ರಕರಣದ ಬೆನ್ನತ್ತಿ ವರದಿ ಮಾಡಿ ಆ ಪ್ರಕರಣ ಬೇಧಿಸುವಲ್ಲಿ ಪೊಲೀಸರಿಗೆ ನೆರವಾಗಿದ್ದರು. ನಂತರ ದೆಹಲಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದರು. ಮೊನಾಲಿಯಿಂದ ಮಂಗಳವಾರ ಬೆಳಿಗ್ಗೆ ಮೃತದೇಹವನ್ನು ದೆಹಲಿಗೆ ತರಲಿದ್ದು, ಸಂಜೆ ವೇಳೆಗೆ ಮೈಸೂರಿಗೆ ತರಲಾಗುವುದು. ನಗರದ ಗೋಕುಲಂನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಅದಕ್ಕೂ ಮುನ್ನ ವಿಜಯನಗರದ ಅವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು