Mysuru: ರೈಲಿನಡಿಗೆ ಸಿಲುಕಿ ಇಂಜಿನಿಯರ್ ದಾರುಣ ಮೃತ್ಯು
Team Udayavani, Nov 22, 2023, 7:20 PM IST
ಮೈಸೂರು: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲಿನಡಿಗೆ ಸಿಲುಕಿ ಇಂಜಿನಿಯರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ 6 ರಲ್ಲಿ ಸೀನಿಯರ್ ಸೆಕ್ಷನ್ ಇಂಜಿನಿಯರ್ ಮೆಕಾನಿಕಲ್ ವಿಭಾಗದ ಪ್ರಭು ಎಂಬುವರು ಮಧ್ಯಾಹ್ನ 1.30 ರ ವೇಳೆ ಚಲಿಸುತ್ತಿದ್ದ ರೈಲಿನ ಅಡಿಗೆ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.