ಮೈಸೂರು ನಗರಿಯಲ್ಲಿ 3 ದಿನಗಳ ಅಕ್ಷರ ದರ್ಬಾರ್ ಗೆ ಚಾಲನೆ
Team Udayavani, Nov 24, 2017, 12:43 PM IST
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನದ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಐದನೇ ಬಾರಿಗೆ ನಡೆಯುತ್ತಿರುವ ಅಕ್ಷರ ಜಾತ್ರೆಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ಅಧ್ಯಕ್ಷತೆ.
ಪ್ರತಿಭಟನೆ:
ಊಟದ ಚೀಟಿ, ಬ್ಯಾಗ್ ನೀಡಲು ಕೌಂಟರ್ ವ್ಯವಸ್ಥೆ ಅಸಮರ್ಪಕವಾಗಿದೆ ಎಂದು ಆರೋಪಿಸಿ ರಾಮನಗರ, ಚನ್ನಪಟ್ಟಣ ಭಾಗದ ಪ್ರತಿನಿಧಿಗಳು ಮುಖ್ಯದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
ಅಕ್ಷರ ದರ್ಬಾರ್ ಹೈಲೈಟ್ಸ್:
*ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ಧ್ವಜ ಹಿಡಿದು ಮೆರವಣಿಗೆ…
*ನಂದಿಧ್ವಜ, ನಗಾರಿ, ನಾದಸ್ವರ, ಕಹಳೆ, ಡೊಳ್ಳು ಕುಣಿತ, ಕೋಲಾಟ, ಡೋಲು ಕುಣಿತ, ಆದಿವಾಸಿಗಳ ನೃತ್ಯ ಮೆರವಣಿಗೆಯಲ್ಲಿ ಗಮನ ಸೆಳೆಯಿತು.
*ರಾಮ, ಕಿತ್ತೂರು ಚೆನ್ನಮ್ಮ, ಭುವನೇಶ್ವರಿ, ಅಕ್ಕಮಹಾದೇವಿ, ಹುಲಿ ವೇಷಧಾರಿಗಳು ಮೆರವಣಿಗೆಯಲ್ಲಿ ಗಮನ ಸೆಳೆಯಿತು.
* ಮೆರವಣಿಗೆಯಲ್ಲಿ ಮೊಳಗಿದ ಕನ್ನಡ ಗೀತೆಗಳು, ಗೀತೆ ಗಾಯನಕ್ಕೆ ವಿಶೇಷ ವಾಹನಗಳು..
*ಸಮ್ಮೇಳನಾಧ್ಯಕ್ಷರ ರಥವನ್ನು ಮುನ್ನಡೆಸಿದ ನಾದಸ್ವರ, ಅಶ್ವರೋಹಿ ಪಡೆ ಹಾಗೂ ಪೊಲೀಸ್ ಬ್ಯಾಂಡ್.
*ನಾಡಿನ ಕಲೆ, ಸಂಸ್ಕೃತಿ ಬಿಂಬಿಸುವ ಎಂಟು ಸ್ತಬ್ಧ ಚಿತ್ರಗಳು ವಿಶೇಷ ಆಕರ್ಷಣೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?