Mysuru; ಪಿಎಸ್ಐ ಪುತ್ರನಿಂದಲೇ ವ್ಹೀಲಿಂಗ್: ವೃದ್ಧ ಬಲಿ
Team Udayavani, Sep 17, 2023, 11:25 PM IST
ಮೈಸೂರು: ನಂಜನ ಗೂಡಿನ ಸಂಚಾರ ಠಾಣೆಯ ಪಿಎಸ್ಐ-2 ಆಗಿದ್ದ ಯಾಸ್ಮಿನ್ ತಾಜ್ ಅವರ ಪುತ್ರ ಪುತ್ರ ಸಯ್ಯದ್ ಐಮಾನ್ ಬೈಕ್ ವ್ಹೀಲಿಂಗ್ ಮಾಡುತ್ತಿದ್ದಾಗ ಪಾದಚಾರಿಗೆ ಢಿಕ್ಕಿ ಹೊಡೆದು ಆತ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಗ್ರಹದ ಮೇರೆಗೆ ಯಾಸ್ಮಿನ್ ತಾಜ್ ಅವರನ್ನು ಮೈಸೂರಿನ ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಮೃತರನ್ನು ದನಗಾಹಿ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಶವವನ್ನು ರವಿವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡುವ ವೇಳೆ ಗ್ರಾಮಸ್ಥರು ಐಮನ್ ತಾಯಿ, ಪಿಎಸ್ಐ ಯಾಸ್ಮಿನ್ ತಾಜ್ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ತಾಯಿ ಕುಮ್ಮಕ್ಕಿನಿಂದ ಪುತ್ರ ಪದೇ ಪದೆ ವ್ಹೀಲಿಂಗ್ ಮಾಡಿ ಜನರ ಜೀವಕ್ಕೆ ಸಂಚಕಾರವಾಗಿದ್ದಾನೆ. ನಾವು ಯಾವುದೇ ಕಾರಣಕ್ಕೂ ಶವ ತೆಗೆದುಕೊಂಡು ಹೋಗುವುದಿಲ್ಲ. ಪಿಎಸ್ಐ ಯಾಸ್ಮಿನ್ ತಾಜ್ರನ್ನು ಅಮಾನತು ಮಾಡಿ, ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಡಿವೈಎಸ್ಪಿ ಗೋವಿಂದ ರಾಜು ಪ್ರತಿಭಟನಕಾರರ ಮನವೊಲಿ ಸಲು ಯತ್ನಿಸಿದರು. ನೀವು ಕೊಟ್ಟ ದೂರಿನ ಅನುಸಾರವೇ ಎಫ್ಐಆರ್ ದಾಖಲಿಸಿದ್ದೇವೆ. ಜತೆಗೆ ಆತನ ತಾಯಿ ಯಾಸ್ಮಿನ್ ತಾಜ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.ಬಳಿಕ ಪ್ರತಿಭಟನಕಾರರು ಪ್ರತಿಭಟನೆಯನ್ನು ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ